![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಪ್ರಬಲ ಸಾಕ್ಷ್ಯ ಇದ್ದರಷ್ಟೇ ಅಪರಾಧಿಗೆ ಶಿಕ್ಷೆ
Team Udayavani, Jul 6, 2018, 4:26 PM IST
![cta-1.jpg](https://www.udayavani.com/wp-content/uploads/2018/07/6/cta-1.jpg)
ಚಿತ್ರದುರ್ಗ: ಕಾನೂನು ಚೌಕಟ್ಟಿನಲ್ಲಿ ಸಾಕ್ಷಿಗಳನ್ನು ಕಟ್ಟಿ ಹಾಕಿದಾಗ ಮಾತ್ರ ಅಪರಾಧಿಗಳನ್ನು ಮಟ್ಟ ಹಾಕಬಹುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಸ್.ಬಿ. ವಸ್ತ್ರಮಠ ಹೇಳಿದರು.
ಹಿರಿಯೂರು ತಾಲೂಕಿನ ಐಮಂಗಲ ಪೊಲೀಸ್ ತರಬೇತಿ ಶಾಲೆಯಲ್ಲಿ ದಾವಣಗೆರೆ ಪೂರ್ವ ವಲಯ ಮತ್ತು ಹುಬ್ಬಳ್ಳಿ-ಧಾರವಾಡ ನಗರದ ಸೇವಾನಿರತ ಮುಖ್ಯಪೇದೆಗಳಿಗೆ ಗುರುವಾರ ಆರಂಭಗೊಂಡ ಪುನಶ್ಚೇತನ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಅಪರಾಧ ಕೃತ್ಯಗಳಾದ ಮೋಸ, ವಂಚನೆ, ಕೊಲೆ, ಸುಲಿಗೆ, ದರೋಡೆ, ಅತ್ಯಾಚಾರ ಇವು ಯಾವಾಗ ಯಾವ ರೀತಿಯಲ್ಲಿ ಆಗುತ್ತವೆ ಎಂಬುದನ್ನು ನಿರೀಕ್ಷೆ ಮಾಡಲು ಆಗುವುದಿಲ್ಲ. ಹಾಗಾಗಿ ಎಲ್ಲಿ ಏನೇ ಅನಾಹುತಗಳು ನಡೆದಾಗ ಕೂಡಲೇ ಸ್ಥಳಕ್ಕೆ ತೆರಳಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಬೇಕು. ಆರೋಪಿಗಳು ಪೊಲೀಸರಿಗಿಂತಲೂ ಚಾಣಾಕ್ಷರಿರುತ್ತಾರೆ.
ಅದಕ್ಕಾಗಿ ಎಲ್ಲವನ್ನು ಸಂಶಯದ ದೃಷ್ಟಿಯಿಂದ ನೋಡಿ ವಿಚಾರಣೆ ನಡೆಸಬೇಕು. ಅಗತ್ಯ ಸಾಕ್ಷ್ಯಾಗಳನ್ನು ನ್ಯಾಯಾಲಯಕ್ಕೆ ಒದಗಿಸಿದಾಗ ಮಾತ್ರ ಅಪರಾಧಿಗಳಿಗೆ ಶಿಕ್ಷೆ ವಿಧಿಸಬಹುದು. ಇಲ್ಲವಾದಲ್ಲಿ ಶಿಕ್ಷೆಯಿಂದ ತಪ್ಪಿಸಿಕೊಳ್ಳುವ ಸಾಧ್ಯತೆಗಳಿರುತ್ತದೆ ಎಂದು ಎಚ್ಚರಿಸಿದರು. ಸರ್ಕಾರಿ ಕೆಲಸಕ್ಕೆ ಸೇರಿದ ಮೇಲೆ ಎಲ್ಲವೂ ಮುಗಿಯಿತೆಂದು ಸುಮ್ಮನೆ ಕೂರಬಾರದು.
ಜೀವನದಲ್ಲಿ ಕಲಿಯುವುದು ಸಾಕಷ್ಟಿದೆ. ವಕೀಲರು, ಪೊಲೀಸರು, ನ್ಯಾಯಾಧಿಧೀಶರು, ಅಧಿಕಾರಿಗಳು ದಿನವೂ ಕಲಿಯುವುದಿದೆ. ಜ್ಞಾನವನ್ನು ಬೆಳೆಸಿಕೊಂಡು ಎತ್ತರಕ್ಕೆ ಏರಿದಾಗ ಮಾತ್ರ ಸಮಾಜದ ವೇಗಕ್ಕೆ ಹೊಂದಿಕೊಂಡು
ಕೆಲಸ ಮಾಡಲು ನೆರವಾಗಲಿದೆ. ಇಲ್ಲವಾದಲ್ಲಿ ನಗೆಪಾಟಲಿಗೆ ಈಡಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.
ಆಧುನಿಕ ಸಮಾಜದಲ್ಲಿ ಜ್ಞಾನವನ್ನು ಹೆಚ್ಚಿಸಿಕೊಂಡು ಕೆಲಸ ಮಾಡದಿದ್ದರೆ ಸಮಾಜದಲ್ಲಿ ಮೋಸ ವಂಚನೆಗೆ ಬಲಿಯಾಗಬೇಕಾಗುತ್ತದೆ. ಇಲ್ಲವಾದಲ್ಲಿ ಯಾಮಾರಿಸುವವರು ಇದ್ದೇ ಇರುತ್ತಾರೆ. ಭಾರತದಲ್ಲಿ ಎಷ್ಟೊಂದು ಅನ್ಯಾಯ, ಮೋಸ, ವಂಚನೆ ನಡೆಯುತ್ತದೆ ಎಂದು ಹಿಂದೆಯೇ ಇಂಗ್ಲೆಂಡಿನವರಿಗೆ ತಿಳಿದಿತ್ತು. ಹಾಗಾಗಿ ಬ್ರಿಟಿಷರು ನಮ್ಮ ದೇಶದಲ್ಲಿ ಬಿಟ್ಟುಹೋಗಿರುವ ಐಪಿಸಿಯನ್ನೇ ಹಿಡಿದುಕೊಂಡು ಹೋಗುತ್ತಿದ್ದೇವೆ.
ಸಮಾಜವನ್ನು ಕಾಯುವ ನಿಮ್ಮ ಮೇಲೆ ಸಾರ್ವಜನಿಕರು ಇಟ್ಟುಕೊಂಡಿರುವ ಗೌರವ ನಂಬಿಕೆಗೆ ಧಕ್ಕೆ ಬಾರದಂತೆ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಬೇಕು. ನಿಮ್ಮ ಮೇಲಿರುವ ಸಮವಸ್ತ್ರಕ್ಕೆ ಸಿಗುವ ಗೌರವ ಬೇರೆ ಯಾರಿಗೂ
ಇಲ್ಲ. ಇದೊಂದು ಪವಿತ್ರವಾದ ಕೆಲಸ ಎಂದು ಭಾವಿಸಿ. ಯಾವುದೇ ಸಂದರ್ಭಗಳಲ್ಲಿ ನೊಂದು ನ್ಯಾಯ ಬಯಸಿ ಪೊಲೀಸ್ ಠಾಣೆಗೆ ಬರುವವರ ಬಳಿ ಕೆಟ್ಟದಾಗಿ ವರ್ತಿಸಬೇಡಿ. ಸೌಜನ್ಯದಿಂದ ಕಷ್ಟಗಳನ್ನು ಆಲಿಸಿ ಸಾಧ್ಯವಾದಷ್ಟು ನ್ಯಾಯ ಕೊಡಿಸುವ ಕೆಲಸ ಮಾಡಿ ಎಂದು ಮುಖ್ಯಪೇದೆಗಳಿಗೆ ಕಿವಿಮಾತು ಹೇಳಿದರು.
ಐಮಂಗಲ ಪೊಲೀಸ್ ತರಬೇತಿ ಶಾಲೆಯ ಪ್ರಾಂಶುಪಾಲ ಹಾಗೂ ಎಸ್ಪಿ ಪಿ. ಪಾಪಣ್ಣ ಅಧ್ಯಕ್ಷತೆ ವಹಿಸಿ ಮಾತನಾಡಿ ಪುನಶ್ಚೇತನ ಕಾರ್ಯಾಗಾರದಲ್ಲಿ ನ್ಯಾಯಾಧೀಶರು, ವಕೀಲರು, ಪೊಲೀಸ್ ಅಧಿಕಾರಿಗಳು ಹಾಗೂ ಸಂಪನ್ಮೂಲ
ವ್ಯಕ್ತಿಗಳು ತಿಳಿಸುವ ವಿಚಾರವನ್ನು ಗಮನವಿಟ್ಟು ಆಲಿಸಬೇಕು. ಅದನ್ನು ವೃತ್ತಿ ಜೀವನದಲ್ಲಿ ಅಳವಡಿಸಿಕೊಳ್ಳಿ ಎಂದು ತಿಳಿಸಿದರು.
ನಿವೃತ್ತ ಡಿವೈಎಸ್ಪಿ ರುದ್ರಮುನಿ, ಸತೀಶ್, ಅಪರಾಧ ಶಾಸ್ತ್ರಜ್ಞ ಪ್ರೊ| ನಟರಾಜ್, ಆಕಾಶವಾಣಿಯ ಪ್ರದೀಪ್ಕುಮಾರ್, ಇನ್ಸಪೆಕ್ಟರ್ ವರದರಾಜ್ ಮತ್ತಿತರರು ಇದ್ದರು. ಅಮೂಲ್ಯ ಪ್ರಾರ್ಥಿಸಿದರು. ಇನ್ಸ್ಪೆಕ್ಟರ್ ಪರಶುರಾಮ ಸ್ವಾಗತಿಸಿದರು. ಸತೀಶ್ ವಂದಿಸಿದರು.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ರೇಣುಕಾಸ್ವಾಮಿ ಕುಟುಂಬಕ್ಕೆ ನಟ ವಿನೋದ್ ರಾಜ್ ಸಾಂತ್ವನ](https://www.udayavani.com/wp-content/uploads/2024/07/Vinod-Raj-150x90.jpg)
Renukaswamy ಕುಟುಂಬಕ್ಕೆ ನಟ ವಿನೋದ್ ರಾಜ್ ಸಾಂತ್ವನ
![1-weewq](https://www.udayavani.com/wp-content/uploads/2024/07/1-weewq-2-150x72.jpg)
Bharamasagara; ಸ್ಥಳೀಯ ಟಿಪ್ಪರ್ ಗಳನ್ನು ಬಳಸಿಕೊಳ್ಳಲು ಆಗ್ರಹಿಸಿ ಪ್ರತಿಭಟನೆ
![Nayakanahatti](https://www.udayavani.com/wp-content/uploads/2024/07/kudapuara-150x83.jpg)
Nayakanahatti; ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಕಳ್ಳರ ಗ್ಯಾಂಗ್
![Chitradurga](https://www.udayavani.com/wp-content/uploads/2024/07/Chitradurga-1-150x90.jpg)
Congress Government; ಮೊದಲು ನಿಮ್ಮ ಕಾಲದ ಹಗರಣಕ್ಕೆ ಉತ್ತರ ಕೊಡಿ: ಬಿವೈವಿ
![Renuka Swamy Case: ಎ 4 ತಾಯಿ ನಿಧನ; ವಿಡಿಯೋ ಕಾಲ್ನಲ್ಲಿ ಅಂತಿಮ ದರ್ಶನ](https://www.udayavani.com/wp-content/uploads/2024/07/13-12-150x90.jpg)
Renuka Swamy Case: ಎ 4 ತಾಯಿ ನಿಧನ; ವಿಡಿಯೋ ಕಾಲ್ನಲ್ಲಿ ಅಂತಿಮ ದರ್ಶನ
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.