ಹುಂಡಿ ತೆಗೆಯಲು ಸಾಧ್ಯವಾಗದೆ ಚಿಲ್ಲರೆಯೊಂದಿಗೆ ಪರಾರಿಯಾದ ಕಳ್ಳರು
ನಾಯಕನಹಟ್ಟಿ ಹೊರಮಠದಲ್ಲಿ ಹುಂಡಿ ಕಳುವಿಗೆ ಯತ್ನ
Team Udayavani, Sep 30, 2019, 8:56 AM IST
ಚಿತ್ರದುರ್ಗ: ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿಯಲ್ಲಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನದ ಹೊರ ಮಠದಲ್ಲಿ ಹುಂಡಿ ಕಳ್ಳತನಕ್ಕೆ ವಿಫಲ ಯತ್ನ ನಡೆದಿದೆ.
ಭಾನುವಾರ ರಾತ್ರಿ ಹೊರ ಮಠದ ಉತ್ತರ ದಿಕ್ಕಿನ ಬಾಗಿಲ ಮೂಲಕ ದೇವಸ್ಥಾನ ಪ್ರವೇಶಿಸಿರುವ ಕಳ್ಳರು ಹುಂಡಿ ಕದ್ದಿದ್ದಾರೆ. ಹೊರಗೆ ತಂದು ಕಲ್ಲಿನಿಂದ ಜಜ್ಜಿ ಹಣ ದೋಚಲು ಪ್ರಯತ್ನಿಸಿದ್ದಾರೆ. ಹುಂಡಿ ತೆಗೆಯಲು ಸಾಧ್ಯವಾಗದೆ ಅದರಲ್ಲಿದ್ದ ಚಿಲ್ಲರೆಯೊಂದಿಗೆ ಪರಾರಿಯಾಗಿದ್ದಾರೆ.
ಬೆಳಗ್ಗೆ ದೇವಸ್ಥಾನ ಸಿಬ್ಬಂದಿ ಬಾಗಿಲು ತೆರೆದಾಗ ಈ ಘಟನೆ ಬೆಳಕಿಗೆ ಬಂದಿದೆ. ಹೊರಮಠದ ಸಮೀಪದಲ್ಲಿ ಹುಂಡಿ ಬಿದ್ದಿದೆ.
ನಾಯಕನಹಟ್ಟಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.
ದೇವಸ್ಥಾನದಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದ್ದು ಅಲ್ಲಿಯೂ ಪರಿಶೀಲನೆ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ
Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ