ವರುಣನ ಆರ್ಭಟಕ್ಕೆ ಜನ ತತ್ತರ


Team Udayavani, May 26, 2018, 12:34 PM IST

cta-1.jpg

ಹೊಳಲ್ಕೆರೆ: ತಾಲೂಕಿನಾದ್ಯಂತ ಗುರುವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ತಾಲೂಕಿನ ರಾಮಗಿರಿ-ತಾಳಿಕಟ್ಟೆ ಸಮಿಪದ ಸಿದ್ದರಾಮಯ್ಯ ಬಡಾವಣೆಯ ಅಲೆಮಾರಿ ಹಾಗೂ ಸುಡುಗಾಡು ಸಿದ್ದರ ಕಾಲೋನಿಯಲ್ಲಿನ ಗುಡಿಸಲುಗಳು
ಸಂಪೂರ್ಣ ಜಲಾವೃತವಾಗಿವೆ.

ಬಡಾವಣೆಯ ನಾಗರಕಟ್ಟೆಯಲ್ಲಿ ಗುಡಿಸಲು ನಿರ್ಮಿಸಿಕೊಂಡು ವಾಸವಾಗಿದ್ದ ಅಲೆಮಾರಿಗಳು, ಸುಡುಗಾಡು ಸಿದ್ದರು, ಬಡ ಕುಟುಂಬಗಳು ಮಳೆಯ ಅರ್ಭಟಕ್ಕೆ ತತ್ತರಿಸಿವೆ. ಗುರುವಾರ ಮಧ್ಯರಾತ್ರಿ ಗುಡುಗು, ಸಿಡಿಲು, ಮಿಂಚು ಗಾಳಿ ಸಹಿತ ಮಳೆ ಆರಂಭವಾಯಿತು. ತೋಟ ಹಾಗೂ ಹೊಲಗಳಿಂದ ಹರಿದು ಬಂದ ನೀರು ಗುಡಿಸಲುಗಳಿಗೆ ನುಗ್ಗಿತು. ಇದರಿಂದ ಗುಡಿಸಲುಗಳಲ್ಲಿದ್ದ ದವಸ ಧಾನ್ಯ, ಬಟ್ಟೆ ಸೇರಿಂತೆ ಜೀವನಾವಶ್ಯಕ ಸಾಮಗ್ರಿಗಳಿಗೆ ಹಾನಿಯಾಗಿದೆ. ರಾಮಗಿರಿ ಸುತ್ತ ಸುರಿದ ಭಾರೀ ಮಳೆಗೆ ಗುಡಿಸಲುಗಳು ನೀರಿನಲ್ಲಿ ಕೊಚ್ಚಿ ಹೋಗಿವೆ. 

ಗಾಳಿಯ ಹೊಡೆತಕ್ಕೆ ಗುಡಿಸಲುಗಳ ಗರಿಗಳು ಹಾರಿ ಹೋಗಿದ್ದರಿಂದ ಅಲ್ಲಿನ ನಿವಾಸಿಗಳು ಆತಂಕದಲ್ಲೇ ಕಾಲ ಕಳೆದರು. ಭಾರೀ ಮಳೆಯಿಂದ ನೀರುಪಾಲಾಗಿರುವ ಗುಡಿಸಲುಗಳನ್ನು ಬಡಾವಣೆಯ ಎತ್ತರ ಪ್ರದೇಶಗಳಿಗೆ ಸ್ಥಳಾಂತರ ಮಾಡಲು ಸ್ಥಳೀಯ ಗ್ರಾಮ ಪಂಚಾಯತ್‌ ಮುಂದಾಗಿದೆ. ಘಟನಾ ಸ್ಥಳಕ್ಕೆ ಗ್ರಾಪಂ ಅಧ್ಯಕ್ಷರು ಹಾಗೂ ಪಿಡಿಒ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಭಾರಿ ಮಳೆಯಿಂದ ಗುಡಿಸಲುಗಳು ನೀರಿನಲ್ಲಿ ಮುಳುಗಿದ್ದರೂ ತಾಲೂಕು ಆಡಳಿತ ಸುಡುಗಾಡು ಸಿದ್ಧರ ನೆರವಿಗೆ ಧಾವಿಸಿಲ್ಲ. ತಕ್ಷಣ ಅಲೆಮಾರಿ ಹಾಗೂ ಸುಡುಗಾಡು ಸಿದ್ಧರಿಗೆ ಬೇಕಾದ ಸೌಲಭ್ಯ ಕಲ್ಪಿಸಬೇಕು. ಗುಡಿಸಲು ಕಳೆದುಕೊಂಡು ಸಂಕಷ್ಟದಲ್ಲಿರುವವರಿಗೆ ಅರ್ಥಿಕ ನೆರವು ನೀಡಿ ಗಂಜಿ ಕೇಂದ್ರ ಆರಂಭಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಹೊಳಲ್ಕೆರೆ ಪಟ್ಟಣ ಸೇರಿದಂತೆ ಬಸವಾಪುರ, ರಂಗಾಪುರ, ನುಲೇನೂರು, ರಾಮಗಿರಿ, ವಡೇರಹಳ್ಳಿ ಅಡನೂರು, ಚಿಕ್ಕಜಾಜೂರು ಪಾಡಿಗಟ್ಟೆ, ಗಂಗಸಮುದ್ರ, ತಾಳಿಕಟ್ಟೆ, ಎನ್‌.ಜಿ. ಹಳ್ಳಿ, ಗುಂಡೇರಿ, ಇಡೆಹಳ್ಳಿ, ಅವಿನಹಟ್ಟಿ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗಿದೆ. ಪಟ್ಟಣ ಹಾಗೂ ಹಳ್ಳಿಗಳಲ್ಲಿದ್ದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಸಮಸ್ಯೆ ಉಂಟಾಗಿತ್ತು. 

ತಾಲೂಕಿನ ತಾಳಿಕಟ್ಟೆ, ಗಂಗಸಮುದ್ರ ಸುತ್ತಲಿನ ತೋಟಗಳಲ್ಲಿದ್ದ ನೂರಾರು ಅಡಿಕೆ ಹಾಗೂ ತೆಂಗಿನ ಮರಗಳು ಬಿರುಗಾಳಿಗೆ ನೆಲಕ್ಕುರುಳಿವೆ. ಗಂಗಸಮುದ್ರದಲ್ಲಿ ಐದಾರು ಮನೆಗಳ ಮೇಲೆ ತೆಂಗಿನ ಮರ, ಜಾಲಿ ಮರ ಉರುಳಿವೆ. ಯಾವುದೇ ಪ್ರಾಣಹಾನಿಯಾಗಿಲ್ಲ. ತಾಳಿಕಟ್ಟೆ ಬಳಿಯ ವಡೇರಹಳ್ಳಿ ಕೆರೆ ತುಂಬಿ ಹರಿಯುತ್ತಿದ್ದು, ಗಂಗಸಮುದ್ರ ಕೆರೆ
ಕೋಡಿ ಬೀಳುವ ಹಂತದಲ್ಲಿದೆ. ಹಳ್ಳ ಕೊಳ್ಳಗಳಲ್ಲಿ ನೀರು ಹರಿಯುತ್ತಿದೆ. 

ಒಂದೇ ದಿನ 67.4 ಮಿಮೀ ಮಳೆ 
ಚಿತ್ರದುರ್ಗ: ಜಿಲ್ಲೆಯಲ್ಲಿ ಗುರುವಾರ ಉತ್ತಮ ಮಳೆಯಾಗಿದೆ. ಅತಿ ಹೆಚ್ಚು ಅಂದರೆ ಹೊಳಲ್ಕೆರೆಯಲ್ಲಿ 67.4 ಮಿಮೀ ಮಳೆ ಸುರಿದಿದೆ. ಚಳ್ಳಕೆರೆ 31, ಪರಶುರಾಂಪುರ 3, ಡಿ. ಮರಿಕುಂಟೆ 5.2, ತಳಕು 4.8, ಚಿತ್ರದುರ್ಗ 1 ರಲ್ಲಿ 20, ಚಿತ್ರದುರ್ಗ 2 ರಲ್ಲಿ 4.4, ಹಿರೇಗುಂಟನೂರು 2, ಭರಮಸಾಗರ 4.4, ಹಿರಿಯೂರು 5.4, ಬಬ್ಬೂರು 6.4, ಈಶ್ವರಗೆರೆ 9.4, ಇಕ್ಕನೂರು 5.4, ಹೊಳಲ್ಕೆರೆ 67.4, ರಾಮಗಿರಿ 22.2 ಚಿಕ್ಕಜಾಜೂರು 5.2, ಎಚ್‌.ಡಿ. ಪುರ 23.6, ತಾಳ್ಯ 24, ಹೊಸದುರ್ಗ 12.2, ಬಾಗೂರು 15.1, ಮತ್ತೋಡು 8.2, ಮಾಡದಕೆರೆ 26.2, ಮೊಳಕಾಲ್ಮೂರು 7.2, ಬಿ.ಜಿ. ಕೆರೆ 5.6, ರಾಯಾಪುರ 4.8 ಮಿಮೀ ಮಳೆಯಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.