ಜಾರಕಿಹೊಳಿ ಹೇಳಿಕೆ ಬಗ್ಗೆ ಪಕ್ಷದಲ್ಲಿ ಯಾವುದೇ ಚರ್ಚೆಯಾಗಿಲ್ಲ: ಮುನಿರತ್ನ
Team Udayavani, Jan 29, 2022, 3:40 PM IST
ಚಿತ್ರದುರ್ಗ: ನಮ್ಮ ಪಕ್ಷದಿಂದ ಯಾರೂ ಬೇರೆ ಪಕ್ಷಕ್ಕೆ ಸೇರ್ಪಡೆಯಾಗುವ ಪ್ರಶ್ನೆಯಿಲ್ಲ. ನಾವೆಲ್ಲಾ ಒಟ್ಟಾಗಿ ಸಂತೋಷದಿಂದ ಕೆಲಸ ಮಾಡುತ್ತಿದ್ದೇವೆ. ಪಕ್ಷ ನಮಗೆ ಗೌರವಿಸಿದೆ, ಗೌರವದಿಂದ ನಡೆದುಕೊಳ್ಳುತ್ತೇವೆ ಎಂದು ತೋಟಗಾರಿಕೆ ಸಚಿವ ಮುನಿರತ್ನ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಯತ್ನಾಳ್ ಹೇಳಿಕೆ ಬಗ್ಗೆ ನನಗೆ ಮಾಹಿತಿ ಇಲ್ಲ, ಅವರನ್ನೇ ಕೇಳಿ. ರಮೇಶ ಜಾರಕಿಹೊಳಿ ‘ಕೈ’ ಶಾಸಕರು ಸಂಪರ್ಕದಲ್ಲಿದ್ದಾರೆ ಎಂದಿದ್ದಾರೆ. ಜಾರಕಿಹೊಳಿ ಹೇಳಿಕೆ ಬಗ್ಗೆ ಪಕ್ಷದಲ್ಲಿ ಯಾವುದೇ ಚರ್ಚೆಯಾಗಿಲ್ಲ ಎಂದರು.
ಸಚಿವ ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರು, ಸಿಎಂ ಪರಮಾಧಿಕಾರ ಹೊಂದಿದ್ದಾರೆ. ಜಿಲ್ಲಾ ಉಸ್ತುವಾರಿ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ ಎಂದು ಸ್ಪಷ್ಟಪಡಿಸಿದರು.
ಇದನ್ನೂ ಓದಿ:ನೀವು ಕೆಲಸ ಮಾಡೋಕೆ ಅನ್ ಫಿಟ್: ಜಲಜೀವನ್ ಅಧಿಕಾರಿಯನ್ನು ತರಾಟೆ ತೆಗೆದುಕೊಂಡ ಸುನಿಲ್ ಕುಮಾರ್
ಬಿಜೆಪಿ ಶಾಸಕರು ಕಾಂಗ್ರೆಸ್ ಮುಖಂಡರ ಜತೆ ಸಂಪರ್ಕ ವಿಚಾರವಾಗಿ ಸಿದ್ಧರಾಮಯ್ಯ, ಡಿಕೆಶಿ ಹೇಳಿಕೆಗೆ ಟಾಂಗ್ ನೀಡಿದ ಸಚಿವ ಮುನಿರತ್ನ, “ ಉದ್ಯೋಗವಿಲ್ಲದೆ ಇಲ್ಲಸಲ್ಲದ ಮಾತಾಡುತ್ತಿದ್ದಾರೆ. ಸರ್ಕಾರಕ್ಕೆ ಜನಪರ ಸಲಹೆ ನೀಡುವುದು ಬಿಟ್ಟು ಬರೀ ರಾಜಕಾರಣ ಮಾಡುತ್ತಿದ್ದಾರೆ. ಅಧಿಕಾರ ದಾಹದಿಂದ ಕಾಂಗ್ರೆಸ್ ನಾಯಕರು ರಾಜಕಾರಣ ಮಾಡುತ್ತಿದ್ದಾರೆ” ಎಂದರು.