ಕೋವಿಡ್ ಮತ್ತಷ್ಟು ಹೆಚ್ಚಾಗುವುದರಲ್ಲಿ ಅನುಮಾನವಿಲ್ಲ, ನಮ್ಮನ್ನು ದೇವರೇ ಕಾಪಾಡಬೇಕು: ರಾಮುಲು
Team Udayavani, Jul 15, 2020, 1:26 PM IST
ಚಿತ್ರದುರ್ಗ: ಕೋವಿಡ್-19 ಸೋಂಕು ವಿಚಾರದಲ್ಲಿ ಸಚಿವರ ನಿರ್ಲಕ್ಷ್ಯ ಎನ್ನುವುದು ಸರಿಯಲ್ಲ. ಕೋವಿಡ್ ನಿಯಂತ್ರಣ ಯಾರ ಕೈಲಿದೆ ಹೇಳಿ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಪ್ರಶ್ನಿಸಿದರು.
ಮುಂದಿನ ಎರಡು ತಿಂಗಳಲ್ಲಿ ಕೋವಿಡ್ ಸೋಂಕು ಮತ್ತಷ್ಟು ಹೆಚ್ಚಾಗುವುದರಲ್ಲಿ ಅನುಮಾನ ಇಲ್ಲ. ನಮ್ಮನ್ನು ದೇವರೇ ಕಾಪಾಡಬೇಕು. ಇಲ್ಲವೇ ಜನರೇ ಜಾಗೃತರಾಗಬೇಕು ಎಂದರು.
ಕಾಂಗ್ರೆಸ್ ನಾಯಕರು ಕೆಳಮಟ್ಟದ ರಾಜಕಾರಣ ಮಾಡುವುದನ್ನು ಬಿಡಬೇಕು. ಬಾಯಿಗೆ ಬಂದಂತೆ ಮಾತನಾಡಬಾರದು. ನಾವೇನಾದರು ತಪ್ಪು ಮಾಡಿದ್ದರೆ ಶಿಕ್ಷೆ, ಪ್ರಾಯಶ್ಚಿತ್ತಕ್ಕೆ ಸಿದ್ಧ ಎಂದು ರಾಮುಲು ಹೇಳಿದರು.
ಇಂತಹ ಸಂದಿಗ್ಧ ಸಮಯದಲ್ಲಿ ಕಾಂಗ್ರೆಸ್ ನಾಯಕರಲ್ಲಿ ನನ್ನ ಮನವಿ. ಯಾವುದೇ ಮಾತಾಡುವ ವೇಳೆ ಎಲ್ಲವನ್ನೂ ಬಿಗಿಯಿಡಿದು ಮಾತಾಡಬೇಕು ಎಂದು ತಿರುಗೇಟು ನೀಡಿದರು.
ಖಾಸಗಿ ಆಸ್ಪತ್ರೆಗಳಲ್ಲಿ ಲೋಪ ಆದಲ್ಲಿ ಕ್ರಿಮಿನಲ್ ಕೇಸ್ ಹಾಕುತ್ತೇವೆ. ಎರಡು ಮೂರು ಆಸ್ಪತ್ರೆಯಿಂದ ಖಾಸಗಿ ಆಸ್ಪತ್ರೆಗಳಿಗೆ ಕೆಟ್ಟ ಹೆಸರು ಬರುತ್ತದೆ. ಎರಡು ಮೂರು ಆಸ್ಪತ್ರೆಗಳನ್ನು ಲಾಕ್ ಡೌನ್ ಮಾಡಿ ಚುರುಕು ಮುಟ್ಟಿಸುತ್ತೇವೆ ಎಂದರು.
30 ನಿಮಿಷದಲ್ಲಿ ಕೋವಿಡ್ ಟೆಸ್ಟ್ ಮಾಡುವ ರ್ಯಾಪಿಡ್ ಆ್ಯಂಟಿಜನ್ 2 ಲಕ್ಷ ಕಿಟ್ ಆರ್ಡರ್ ಮಾಡಿದ್ದು ಈಗಾಗಲೇ 1 ಲಕ್ಷ ಕಿಟ್ ಬಂದಿವೆ ಎಂದು ಮಾಹಿತಿ ನೀಡಿದರು.
ಆಯುಷ್ ಇಲಾಖೆ ವೈದ್ಯರ ಬೇಡಿಕೆ ಈಡೇರಿಕೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ಈ ಸಂದರ್ಭದಲ್ಲಿ ಯಾರೂ ಮುಷ್ಕರ ಮಾಡಬಾರದು. ಎಂಬಿಬಿಎಸ್ ವೈದ್ಯರಂತೆ ಆಯುಷ್ ವೈದ್ಯರಿಗೂ ವೇತನ ಹೆಚ್ಚಳಕ್ಕೆ ಕ್ರಮ ವಹಿಸುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ
Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ
MUST WATCH
ಹೊಸ ಸೇರ್ಪಡೆ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್ ಕಾಲೇಜು: ಜಯಪ್ರಕಾಶ್ ಹೆಗ್ಡೆ