Free Bus Pass ಕೊಡುವವರು ಮಹಿಳೆಯರ ರಕ್ಷಣೆ ಬಗ್ಗೆ ಯೋಚನೆ ಮಾಡುತ್ತಿಲ್ಲ: ವಿಜಯೇಂದ್ರ
Team Udayavani, Jun 1, 2023, 6:40 PM IST
ಚಿತ್ರದುರ್ಗ: ಮಹಿಳೆಯರಿಗೆ ಉಚಿತ ಬಸ್ ಬಗ್ಗೆ ಯೋಚನೆ ಮಾಡುತ್ತಿದ್ದಾರೆ. ಮಹಿಳೆಯರಿಗೆ ರಕ್ಷಣೆ ಕೊಡುವ ಬಗ್ಗೆ ಯೋಚನೆ ಮಾಡುತ್ತಿಲ್ಲ. ಬಿಜೆಪಿ ವಿಪಕ್ಷವಾಗಿ ಸಕಾರಾತ್ಮಕ ಹೋರಾಟ ಮಾಡಲಿದೆ ಎಂದು ಶಿಕಾರಿಪುರ ಬಿಜೆಪಿ ಶಾಸಕ ಬಿ.ವೈ.ವಿಜಯೇಂದ್ರ ಹೇಳಿದರು.
ಚಿತ್ರದುರ್ಗದಲ್ಲಿ ವಿವಿಧ ಮಠಗಳಿಗೆ ಅವರು ಇಂದು ಭೇಟಿ ನೀಡಿದರು. ಬೋವಿ ಮಠಕ್ಕೆ ಭೇಟಿ ನೀಡಿ ಇಮ್ಮಡಿ ಸಿದ್ದರಾಮೇಶ್ವರ ಶ್ರೀ ಆಶೀರ್ವಾದ ಪಡೆದರು. ಮಾದಾರ ಗುರುಪೀಠಕ್ಕೆ ಭೇಟಿ ನೀಡಿ ಮಾದಾರ ಚನ್ನಯ್ಯ ಶ್ರೀ ಆಶೀರ್ವಾದ ಪಡೆದರು.
ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳು ಕಳೆದಿವೆ. ಈಗಲೂ ಬಡವರು ಬಡವರಾಗಿ ಉಳಿದಿದ್ದಾರೆ. ಗ್ಯಾರಂಟಿ ಕೊಡುವ ಸಂದರ್ಭಕ್ಕೆ ಕಾಂಗ್ರೆಸ್ ಪಕ್ಷವೇ ಹೊಣೆ ಎಂದರು.
ಇದನ್ನೂ ಓದಿ:”ನನಗಿದು ಸ್ಪೆಷಲ್ ಸಿನಿಮಾ…”: ‘ಯದಾ ಯದಾ ಹೀ’ ಕುರಿತು ಹರಿಪ್ರಿಯಾ ಮಾತು
ಎನ್ ಇಪಿ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ, ಪ್ರಧಾನಿ ಮೋದಿ ಮುಂದಾಲೋಚನೆಯಿಂದ ಎನ್ ಇಪಿ ಯೋಜನೆ ಜಾರಿಯಾಗಿದೆ. ಎನ್ ಇಪಿ ವಿಚಾರದಲ್ಲಿ ವಿಪಕ್ಷಗಳ ರಾಜಕೀಯ ಖಂಡನೀಯ ಎಂದರು.
ಬಿಜೆಪಿ ವಿಪಕ್ಷವಾಗಿ ಅನೇಕ ವರ್ಷ ದುಡಿದಿದೆ, ಹೋರಾಟ ಮಾಡಿದೆ. ಈಗಿನ ಹಿನ್ನೆಲೆಯಿಂದ ನಾವು ಎದೆಗುಂದುವುದಿಲ್ಲ. ಈಗಾಗಲೇ ಕಾಂಗ್ರೆಸ್ ನವರು ಗೊಡ್ಡು ಬೆದರಿಕೆ ಹಾಕುತ್ತಿದ್ದಾರೆ. ಎಲ್ಲವನ್ನೂ ಎದುರಿಸುತ್ತೇವೆ, ಹೆದರಿ ಓಡುವ ಪ್ರಶ್ನೆಯಿಲ್ಲ ಎಂದು ವಿಜಯೇಂದ್ರ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ
Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ
MUST WATCH
ಹೊಸ ಸೇರ್ಪಡೆ
Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ