ಸ್ವಾಮಿ ಹುಂಡಿಗೆ ಚಿನ್ನ -ಬೆಳ್ಳಿ, ಬೇಡಿಕೆ ಪತ್ರ

ತಿಪ್ಪೇರುದ್ರಸ್ವಾಮಿ ಹುಂಡಿ ಎಣಿಕೆ ಕಾರ್ಯ! ­ನಾಲ್ಕು ತಿಂಗಳಲ್ಲಿ 28.43 ಲಕ್ಷ ರೂ. ಸಂಗ್ರಹ

Team Udayavani, Mar 10, 2021, 7:33 PM IST

tipperudraswami

ನಾಯಕನಹಟ್ಟಿ: ತಿಪ್ಪೇರುದ್ರಸ್ವಾಮಿ ದೇವಾಲಯದಲ್ಲಿ ಮಂಗಳವಾರ ನಡೆದ ಹುಂಡಿ ಎಣಿಕೆ ಕಾರ್ಯದಲ್ಲಿ 28.43 ಲಕ್ಷ ರೂ. ಸಂಗ್ರಹವಾಗಿದೆ. ಒಳಮಠದ ಹುಂಡಿಯಲ್ಲಿ 23,88,363 ರೂ., ಹೊರಮಠದ ಹುಂಡಿಗಳಲ್ಲಿ 4,55,480 ರೂ. ಸೇರಿ ಒಟ್ಟು 28,43,843 ರೂ. ಸಂಗ್ರಹವಾಗಿದೆ.

ಈ ಹಿಂದೆ 3.11.2020ರಂದು ಹುಂಡಿ ಹಣವನ್ನು ಎಣಿಕೆ ಮಾಡಲಾಗಿತ್ತು. ಆಗ ಎರಡೂ ದೇವಾಲಯಗಳಿಂದ ಒಟ್ಟಾರೆ 26,10,880 ರೂ. ಸಂಗ್ರಹವಾಗಿತ್ತು. ಈ ಬಾರಿ ಎಣಿಕಾ ಕಾರ್ಯದಲ್ಲಿ 2.32 ಲಕ್ಷ ರೂ. ಹೆಚ್ಚಿನ ಪ್ರಮಾಣದ ಹಣ ಸಂಗ್ರಹವಾಗಿದೆ. ನಾಲ್ಕು ತಿಂಗಳು 6 ದಿನಗಳಲ್ಲಿ ಸಂಗ್ರಹವಾಗಿರುವ ಹುಂಡಿ ಹಣ ಇದಾಗಿದೆ. ಎರಡೂ ದೇವಾಲಯಗಳಲ್ಲಿ ಭಾರೀ ಪ್ರಮಾಣದ ಚಿಲ್ಲರೆ ಸಂಗ್ರಹವಾಗಿತ್ತು. ಹೊರಮಠದಲ್ಲಿ 23,240 ರೂ., ಒಳಮಠದಲ್ಲಿ 89,035 ರೂ. ಸೇರಿದಂತೆ ಒಟ್ಟಾರೆ 1,12,275 ರೂ.ಗಳಷ್ಟು ಚಿಲ್ಲರೆ ನಾಣ್ಯಗಳು ಸಂಗ್ರಹವಾಗಿದ್ದವು.

ಭಕ್ತರು ಹಣದ ಜತೆಗೆ ಬೆಳ್ಳಿ ಹಾಗೂ ಬಂಗಾರದ ವಸ್ತುಗಳನ್ನು ಹುಂಡಿಗೆ ಹಾಕುವ ರೂಢಿಯಿದೆ. ಒಳಮಠದ ಹುಂಡಿಯಲ್ಲಿ ಚೈನ್‌, ಉಂಗುರ, ಪಾದುಕೆ, ಛತ್ರಿ, ಕರಡಿಗೆ, ತೊಟ್ಟಿಲು, ಕಣ್ಣು, ವಿನಾಯಕ ಮೂರ್ತಿ  ಸೇರಿದಂತೆ ವಿಧ ರೀತಿಯ ಬೆಳ್ಳಿ ಹಾಗೂ ಬಂಗಾರದ ವಸ್ತುಗಳು ಕಂಡುಬಂದವು.

ಹರಕೆ ಫಲಿಸಿದ ಭಕ್ತರು ಬೆಳ್ಳಿ ಅಥವ ಬಂಗಾರದ ವಸ್ತುಗಳನ್ನು ಹುಂಡಿಗೆ ಹಾಕುತ್ತಾರೆ. ಮಕ್ಕಳ ಫಲ, ಪದನ್ನೋತಿ, ವಿದ್ಯೆ, ವ್ಯಾಪಾರದಲ್ಲಿ ಲಾಭ ಸೇರಿದಂತೆ ವಿವಿಧ ಹರಕೆಗಳಿಂದ ಭಕ್ತರು ಚಿನ್ನದ ವಸ್ತುಗಳನ್ನು ದೇವರಿಗೆ ಸಮರ್ಪಿಸಿದ್ದಾರೆ. ಚಿನ್ನದ ಕಿವಿ ಓಲೆ, 1911ರ ಕಾಲದ ಚಿನ್ನದ ನಾಣ್ಯ ವಿಶೇಷವಾಗಿ ಗಮನ  ಸೆಳೆದವು. ಬೆಳ್ಳಿ, ಬಂಗಾರದ ವಸ್ತುಗಳನ್ನು ಸಂಗ್ರಹಿಸಿ, ಅಕ್ಕಸಾಲಿಗರಿಂದ ಪರೀಕ್ಷಿಸಿ ದೇವಾಲಯದ ಖಜಾನೆಗೆ ಸಲ್ಲಿಸಲಾಯಿತು.

ಎರಡು ತಿಂಗಳ ಹಿಂದೆ ಗ್ರಾಪಂ ಚುನಾವಣೆ ನಡೆದ ಈ ಹಿನ್ನೆಲೆಯಲ್ಲಿ ಹಲವಾರು ಭಕ್ತಾದಿಗಳು ದೇವಾಲಯದ ಹುಂಡಿಗೆ ಹಣದ ಜತೆಗೆ ಹರಕೆ ರೂಪದಲ್ಲಿ ಅರ್ಜಿ ಹಾಕಿದ್ದರು. ಭರಮಸಾಗರ, ಮಲ್ಲೇಬೋರನಹಟ್ಟಿ, ಚಿಕ್ಕಮ್ಮನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳ ಗ್ರಾಪಂ ಅಭ್ಯರ್ಥಿಗಳು ಚುನಾವಣೆ ಕರಪತ್ರ ಹುಂಡಿಗೆ ಹಾಕಿ ಗೆಲ್ಲಿಸುವಂತೆ ದೇವರಲ್ಲಿ ವಿನಂತಿಸಿದ್ದಾರೆ.

ಆಂಧ್ರ ಮೂಲದ ವ್ಯಕ್ತಿಯೊಬ್ಬರು ತಮ್ಮ ಮಗ ಸಾಗರ್‌ ತಿಪ್ಪೇಶನ ದಯೆಯಿಂದ ಎಸ್ಸೆಸ್ಸೆಲ್ಸಿ ಪಾಸಾಗಿದ್ದಾನೆ. ಆದ್ದರಿಂದ 5001 ರೂ.ಗಳನ್ನು ದೇವರಿಗೆ ಅರ್ಪಿಸುತ್ತಿದ್ದೇನೆ. ಮುಂದೆ ಅವನ ವಿದ್ಯಾಭ್ಯಾಸ ಉತ್ತಮವಾಗಿರಲಿ ಎಂದು ಬೇಡಿಕೊಳ್ಳುತ್ತೇನೆ ಎಂದು ಪತ್ರ ಬರೆದು ಹುಂಡಿಗೆ ಹಾಕಿದ್ದಾರೆ.

ಪತ್ರಗಳು, ಕರಪತ್ರಗಳೂ ಬೇಡಿಕೆಗಳು ಹುಂಡಿಯಲ್ಲಿದ್ದವು. ವರ್ಷದಲ್ಲಿ ನಾಲ್ಕು ಬಾರಿ ಹುಂಡಿ ಹಣ ಎಣಿಸಲಾಗುತ್ತಿದೆ. ತಳಕು, ನಾಯಕನಹಟ್ಟಿ, ಚಳ್ಳಕೆರೆ ಸೇರಿದಂತೆ 80ಕ್ಕೂ ಹೆಚ್ಚು ಕಂದಾಯ ಇಲಾಖೆ ಸಿಬ್ಬಂದಿ, ಕೆನರಾ ಬ್ಯಾಂಕ್‌ ಸಿಬ್ಬಂದಿ ಎಣಿಕಾ ಕಾರ್ಯದಲ್ಲಿ ಪಾಲೊಂಡಿದ್ದರು. ತಹಶೀಲ್ದಾರ್‌ ಎಂ.ಮಲ್ಲಿಕಾರ್ಜುನ, ದೇವಾಲಯದ ಇಒ ಮಂಜುನಾಥ ಬಿ. ವಾಲಿ, ಉಪ ತಹಶೀಲ್ದಾರ್‌ ಟಿ.ಜಗದೀಶ್‌, ಕೆನರಾ ಬ್ಯಾಂಕ್‌ ಮ್ಯಾನೇಜರ್‌ ಸೂರ್ಯದೇವ ನಾಯಕ್‌, ರಾಜಸ್ವ ನಿರೀಕ್ಷಕ ಚೇತನ್‌, ಗ್ರಾಮ ಲೆಕ್ಕಿಗ ಉಮಾ, ದೇವಾಲಯದ ಸಿಬ್ಬಂದಿ ಸತೀಶ್‌, ವಿರೂಪಾಕ್ಷಪ್ಪ ಮತ್ತಿತರರಿದ್ದರು. !

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.