ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸಲು ಮುಂದಾಗಿ: ಸ್ವಾಮಿ


Team Udayavani, May 25, 2018, 5:06 PM IST

cta-3.jpg

ಚಿತ್ರದುರ್ಗ: ಸಮಾಜದಲ್ಲಿನ ಹಿರಿಯರು ಪರಿಸರದ ಹಬ್ಬ ಆಚರಿಸುತ್ತಾ ಹೋದರೆ ಮಕ್ಕಳಲ್ಲಿ ಪರಿಸರದ ಜಾಗೃತಿ ಮೂಡುತ್ತದೆ ಎಂದು ಪರಿಸರವಾದಿ ಡಾ| ಎಚ್‌.ಕೆ.ಎಸ್‌. ಸ್ವಾಮಿ ಹೇಳಿದರು.

ನಗರದ ಶಾರದಾ ಸಭಾ ಭವನದಲ್ಲಿ ಸಂಸ್ಕಾರ ಭಾರತಿ ಸಂಘಟನೆ ವತಿಯಿಂದ ಭೂ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಪರಿಸರ ಸಂರಕ್ಷಣೆಗೆ ಮಾರ್ಗೊಪಾಯಗಳು ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ನೀಡಿ ಅವರು
ಮಾತನಾಡಿದರು. ಶಾಲಾ-ಕಾಲೇಜುಗಳಲ್ಲಿ ಪರಿಸರದ ದಿನಾಚರಣೆ ಗಂಭೀರವಾಗಿ ಪರಿಗಣಿಸಿ ಪರಿಸರದ ಹಬ್ಬಗಳನ್ನು ಮಕ್ಕಳಿಗೆ ಪರಿಚಯಿಸಬೇಕು ಎಂದರು.
 
 ಪ್ರೌಢಶಾಲೆಗೆ ಬಂದ ಮಕ್ಕಳಿಗೂ ಪರಿಸರದ ಹಬ್ಬಗಳ ಉದ್ದೇಶ ಅರ್ಥವಾಗುತ್ತಿಲ್ಲ. ವಿಶ್ವ ಜೀವ ವೈವಿಧ್ಯ ದಿನಾಚರಣೆ, ಭೂ ದಿನಾಚರಣೆ, ವಿಶ್ವ ಜಲ ದಿನಾಚರಣೆ, ವಿಶ್ವ ಪರಿಸರ ದಿನಾಚರಣೆ, ವಿಶ್ವ ಅರಣ್ಯ ದಿನಾಚರಣೆ, ಹೀಗೆ ತಿಂಗಳಿಗೊಂದು ಹಬ್ಬವನ್ನು ಶಾಲೆಗಳಲ್ಲಿ ಆಚರಿಸಬಹುದು. ಇಂತಹ ಹಬ್ಬಗಳು ಜನಸಾಮಾನ್ಯರಿಗೆ ತಲುಪಿಯೇ ಇಲ್ಲ
ಎಂದು ಹೇಳಿದರು. 

ಗಾಂಧೀಜಿಯವರ ಚಿಂತನೆಗಳಾದ ಸರಳತೆ, ಸ್ವದೇಶಿ, ಅಸಂಗ್ರಹ, ದೈಹಿಕ ಶ್ರಮ, ಇವೆಲ್ಲವೂ ಪರಿಸರದ ಸಂರಕ್ಷಣೆಗೆ ಅನುಕೂಲಕರ ತತ್ವಗಳು. ಜೀವನ ಶೈಲಿಯಲ್ಲಿ ಸರಳತೆ ತಂದು, ಗ್ರಾಮೀಣ ವಸ್ತುಗಳನ್ನು ಹೆಚ್ಚು ಬಳಸಿಕೊಳ್ಳುತ್ತ ಹೋದಾಗ, ಪರಿಸರ ತನ್ನಿಂದ ತಾನೇ ಸುಧಾರಿಸಿಕೊಳ್ಳಲು ಅವಕಾಶ ದೊರೆಯುತ್ತದೆ. ಕೈಗಾರಿಕೆಗಳಿಂದ ವಾಯು, ಜಲ, ಮಣ್ಣು, ಶಬ್ದ ಮಾಲಿನ್ಯಗಳು ಉಂಟಾಗಿವೆ. ಗಾಂಧೀಜಿಯವರ ಚಿಂತನೆಗಳನ್ನು, ಮಕ್ಕಳಿಗೆ, ಯುವ ಸಮುದಾಯಕ್ಕೆ ಮಾದರಿಗಳ ಮುಖಾಂತರ ಪ್ರಸ್ತುತ ಪಡಿಸಿದರೆ ಬದಲಾವಣೆ ಕಾಣಬಹುದು ಎಂದರು.

ಇಡೀ ಮನುಕುಲದ ಅಳಿವು ಉಳಿವು ಗುಡ್ಡ ಬೆಟ್ಟಗಳ ಮೇಲೆ ಅವಲಂಬಿಸಿದೆ. ಆದರೆ, ನಾವು ನಮ್ಮೂರಿನ ಗುಡ್ಡ ಬೆಟ್ಟಗಳ ಅಳಿವು ಉಳಿವು ಎಲ್ಲ ತಂತ್ರಜ್ಞಾನದ ಯಂತ್ರಗಳ ಕೈಯಲ್ಲಿ ಕೊಟ್ಟಿದ್ದೇವೆ. ಭೂಮಿ ನಮ್ಮ ತಾತ ಮುತ್ತಾತರಿಂದ ಬಳುವಳಿಯಾಗಿ ಬಂದಿಲ್ಲ. ಇದನ್ನು ನಾವು ಮುಂದಿನ ಪೀಳಿಗೆಯಿಂದ ಸಾಲವಾಗಿ ಪಡೆದದ್ದು ಎಂಬ ಅರಿವನ್ನು ಇಟ್ಟುಕೊಳ್ಳಬೇಕಾಗುತ್ತದೆ. ಹಾಗಾಗಿ ಸಾಲವನ್ನು ಸರಿಯಾಗಿ ಮರು ಪಾವತಿಸಬೇಕಾದ್ದು ನಮ್ಮ ಕರ್ತವ್ಯ ಎಂದರು.

ಸಂಸ್ಕಾರ ಭಾರತಿ ವಿಭಾಗ ಸಂಚಾಲಕ ರಾಜೀವ್‌ ಲೋಚನ್‌ ಮಾತನಾಡಿ, ಭಾರತೀಯ ಸಂಸ್ಕೃತಿ ಅತ್ಯಂತ ಪುರಾತನ ಸಂಸ್ಕೃತಿ. ಅದನ್ನು ಆಳವಾಗಿ ಅಧ್ಯಯನ ಮಾಡುವಂತ ಯುವಕರನ್ನ ತಯಾರು ಮಾಡಬೇಕಾಗಿದೆ. ಅವರಿಗೆ ಶಿಕ್ಷಣ ನೀಡಿ, ಪ್ರೋತ್ಸಾಹಿಸುವುದು ಇಂದಿನ ಅವಶ್ಯಕತೆಯಾಗಿದೆ. ಸಂಸ್ಕಾರ ಭಾರತೀಯ ಉದ್ದೇಶ ಜನರಲ್ಲಿರುವ ಸಾಂಸ್ಕೃತಿಕ, ಆಧ್ಯಾತ್ಮಿಕ, ಚಿಂತನೆಗಳನ್ನ ಬೆಳಕಿಗೆ ತರುವುದು, ಮಕ್ಕಳಲ್ಲಿರುವ ಕಲೆ, ಸಂಗೀತ, ನಾಟಕ, ಯಕ್ಷಗಾನ, ಕವಿತೆ, ಬರವಣಿಗೆ, ಹೊರತರಲು ಸಹಾಯಕವಾಗಿದೆ ಎಂದರು. ಸಂಚಾಲಕ ಎ.ಎನ್‌. ಮೋಹನ್‌
ಕುಮಾರ್‌ ಮಾತನಾಡಿ, ನಾವೀಗ ಬಾಹ್ಯಾಕಾಶ ಯುಗದಲ್ಲಿದ್ದೇವೆ. ಹಾಗೆಂದು ಭೂಮಿಯ ಯುಗವನ್ನು ಮರೆತುಬಿಟ್ಟರೆ ಹೇಗೆ? ಪಂಚ ಭೂತಗಳ ಪೈಕಿ ಅಗ್ನಿ, ನೀರು ಮತ್ತು ಭೂಮಿಯನ್ನು ಪೂಜಿಸುವ ನಾವು, ಗಾಳಿ ಮತ್ತು ಆಕಾಶವನ್ನು ಕಡೆಗಣಿಸುತ್ತಿದ್ದೇವೆ. ಆಕಾಶವನ್ನು ಕಸದ ತೊಟ್ಟಿಯಂತೆ ಬಳಸಲು ಶುರು ಮಾಡಿದ್ದೇವೆ. ನಿಸರ್ಗದ ಮೇಲೆ ಮನುಷ್ಯನ ಆಕ್ರಮಣ ಅತಿಯಾಗುತ್ತಿದೆ. ಭೂಮಿಯ ಎಲ್ಲ ಸಂಪನ್ಮೂಲಗಳನ್ನು ಮನುಷ್ಯರ ಭೋಗಕ್ಕೆ ಸಿದ್ಧಪಡಿಸಿ, ಮಾರಿ ಹಣ ಗಳಿಸುವ ಪ್ರಯತ್ನ ನಡೆಯುತ್ತಿದೆ ಎಂದು ತಿಳಿಸಿದರು.

ಸಂಸ್ಕಾರ ಭಾರತೀಯ ಅಧ್ಯಕ್ಷ ಟಿ.ಆರ್‌.ನಾಗರಾಜ್‌ ಮಾತನಾಡಿ, ಸಂಸ್ಕಾರ ಭಾರತೀಯ ಕಾರ್ಯಕ್ರಮಗಳಲ್ಲಿ ಗ್ರಾಮೀಣ ಮತ್ತು ಸ್ವದೇಶಿ ವಸ್ತ್ರವಾದ ಖಾದಿಯನ್ನು ಹೆಚ್ಚು ಬಳಸುತ್ತೇವೆ ಎಂದು ಭರವಸೆ ನೀಡಿದರು.

ಚಾರ್ಟೆಡ್‌ ಅಕೌಂಟೆಂಟ್‌ ಮುರಳಿಧರ್‌ ರಾವ್‌, ಪ್ರೇಮಾ, ದೇಸಾಯಿ, ಜಯಾ ಪ್ರಾಣೇಶ್‌, ಗುರುರಾಜ್‌, ರವಿಶಂಕರ್‌, ಲಕ್ಷ್ಮೀ ಇದ್ದರು. 

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.