100 ಎಕರೆ ಪ್ರದೇಶದಲ್ಲಿ ಟ್ರೀ ಪಾರ್ಕ್ ನಿರ್ಮಾಣ
Team Udayavani, Jul 29, 2020, 3:24 PM IST
ಹೊಳಲ್ಕೆರೆ: ಪರಿಸರ ಸಂರಕ್ಷಣೆ ದೃಷ್ಟಿಯಿಂದ 2 ಕೋಟಿ ರೂ. ಅನುದಾನದಲ್ಲಿ 100 ಎಕರೆ ಪ್ರದೇಶದಲ್ಲಿ ಟ್ರೀ ಪಾರ್ಕ್ ನಿರ್ಮಾಣ ಮಾಡುವುದು ಹಾಗೂ ಕ್ಷೇತ್ರದಲ್ಲಿ ಒಂದು ಕೋಟಿ ಸಸ್ಯಗಳನ್ನು ಬೆಳೆಸುವ ಸಂಕಲ್ಪ ಮಾಡಿರುವುದಾಗಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೂತನ ಅಧ್ಯಕ್ಷ ಹಾಗೂ ಶಾಸಕ ಎಂ. ಚಂದ್ರಪ್ಪ ತಿಳಿಸಿದರು.
ಪರಿಸರ ದಿನಾಚರಣೆ ಅಂಗವಾಗಿ ಹನುಮಂತ ದೇವರ ಕಣಿವೆಯಲ್ಲಿ ನೂತನ ಟ್ರೀ ಪಾರ್ಕ್ ನಿರ್ಮಾಣಕ್ಕೆ ಸಸಿ ನೆಟ್ಟು ಚಾಲನೆ ನೀಡಿ ಅವರು ಮಾತನಾಡಿದರು. ಪರಿಸರವನ್ನು ನಿರ್ಲಕ್ಷಿಸಿದರೆ ಮನುಕುಲಕ್ಕೆ ಅಪಾಯ ತಪ್ಪಿದ್ದಲ್ಲ. ನಮ್ಮ ಸುತ್ತಮುತ್ತಲಿನ ಪರಿಸರದ ಸಂರಕ್ಷಣೆ ಮಾಡುವುದು ಎಲ್ಲರ ಹೊಣೆ. ಈ ನಿಟ್ಟಿನಲ್ಲಿ ಅರಣ್ಯ ಇಲಾಖೆ ಸಹಯೋಗದಲ್ಲಿ ಟ್ರೀ ಪಾರ್ಕ್ ನಿರ್ಮಾಣ ಮಾಡುತ್ತಿದ್ದೇವೆ. ಇಲ್ಲಿ ಹತ್ತು ಸಾವಿರಕ್ಕೂ ಅಧಿಕ ವಿವಿಧ ಜಾತಿಯ ಗಿಡಗಳನ್ನು ಬೆಳೆಸುತ್ತೇವೆ. 2 ಸಾವಿರ ಹಣ್ಣಿನ ಗಿಡಗಳನ್ನು ಹಾಕುತ್ತೇವೆ. ಪಾರ್ಕ್ ಸುತ್ತಲೂ ತಂತಿ ಬೆಲೆ ಹಾಕುತ್ತೇವೆ. ಪ್ರವಾಸಿಗರನ್ನು ಸೇಳೆಯಲು ವಿಶೇಷ ವಿನ್ಯಾಸದ ಪಾರ್ಕ್, ಮಕ್ಕಳಿಗೆ ಆಟೋಪಕರಣ, ಹೋಟೆಲ್, ನಿರ್ಮಾಣ ಮಾಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ
Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ