ನ.8, 9ರಂದು ಚಿತ್ರದುರ್ಗದಲ್ಲಿ ಬುಡಕಟ್ಟು ಉತ್ಸವ: ಸಚಿವ ಶ್ರೀರಾಮುಲು
Team Udayavani, Nov 1, 2021, 8:45 PM IST
ಚಿತ್ರದುರ್ಗ: ರಾಜ್ಯಮಟ್ಟದ ಬುಡಕಟ್ಟು ಉತ್ಸವವನ್ನು ನ.8 ಮತ್ತು 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಸಾರಿಗೆ ಇಲಾಖೆ ಸಚಿವ ಬಿ. ಶ್ರೀರಾಮುಲು ತಿಳಿಸಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬುಡಕಟ್ಟು ಇತಿಹಾಸ, ಕಲೆ ಹಾಗೂ ಪರಂಪರೆ ಉಳಿಸುವ ಉದ್ದೇಶದಿಂದ ಸರ್ಕಾರದಿಂದ ಉತ್ಸವ ಆಚರಿಸಲಾಗುತ್ತಿದೆ ಎಂದರು.
ಉತ್ಸವದಲ್ಲಿ ಬುಡಕಟ್ಟು ಸಮುದಾಯದವರು ತಯಾರಿಸಿದ ಕರಕುಶಲ ವಸ್ತುಗಳು, ನಾಟಿ ಔಷ ಧ ಪ್ರದರ್ಶನ ಹಾಗೂ ಮಾರಾಟ, ಆಹಾರ ಮೇಳ ಆಯೋಜಿಸಲಾಗುವುದು. ಆಹಾರ ಮೇಳದಲ್ಲಿ ಬುಡಕಟ್ಟು ಜನರ ಆಹಾರ ಖಾದ್ಯಗಳ ಪರಿಚಯಿಸಲು ಚಿಂತನೆ ನಡೆದಿದ್ದು, ವಿಶೇಷವಾಗಿ ಬಂಬೂ ಬಿರಿಯಾನಿ ಆಕರ್ಷಕ ಖಾದ್ಯವಾಗಲಿದೆ. ಇದರೊಂದಿಗೆ ಕಾಡು ಜೇನುತುಪ್ಪ ಹಾಗೂ ಕಾಡು ಗೆಣಸುಗಳಿಂದ ತಯಾರಿಸಲಾದ ತರಾವರಿ ಖಾದ್ಯಗಳು ವಿಶೇಷ ಆಕರ್ಷಣೆಯಾಗಲಿವೆ ಎಂದರು.
ಇದನ್ನೂ ಓದಿ:ಮನೆ ಬದುಕೇ ಜಾನಪದ-ಜಾನಪದವೇ ಸಂಸ್ಕೃತಿ
ಸಂಜೆ ಬುಡಕಟ್ಟು ಕಲಾ ತಂಡಗಳಿಂದ ನೃತ್ಯ, ಕುಣಿತ, ಬುಡಕಟ್ಟು ಹಬ್ಬಗಳ ಆಚರಣೆ ಮುಂತಾದ ಸಾಂಸ್ಕೃತಿಕ ಕಲಾ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯಿಂದ ನಿರ್ಮಿಸಿರುವ ಸಾಕ್ಷ್ಯಚಿತ್ರಗಳ ಪ್ರದರ್ಶನವಿರಲಿದೆ. ಬುಡಕಟ್ಟು ಸಮುದಾಯಗಳಿಗೆ ಶಕ್ತಿ ತುಂಬಿ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಈ ಹೊಸ ಪ್ರಯತ್ನ ನಡೆದಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ