ಜಡ ವಿಗ್ರಹಕ್ಕಿಂತ ಇಷ್ಟಲಿಂಗ ಪೂಜೆಯೇ ಶ್ರೇಷ್ಠ

ಅಂಬಿಗರ ಚೌಡಯ್ಯ ವಚನಗಳಲ್ಲಿದೆ ಬಂಡಾಯ ಪ್ರಜ್ಞೆ: ಡಾ| ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ

Team Udayavani, Aug 25, 2021, 6:47 PM IST

25-17

ಹೊಸದುರ್ಗ: ಯಾವ ದೇವರೂ ಶಾಪ ಅಥವಾ ವರ ಕೊಡುವುದಿಲ್ಲ. ಏಕೆಂದರೆ ಅವು ಚೈತನ್ಯಹೀನವಾದವು. ಇಂಥ ಜಡ ವಿಗ್ರಹಗಳನ್ನು ಪೂಜಿಸುವ ಬದಲಾಗಿ ವಿಶ್ವವನ್ನೇ ಪ್ರತಿನಿ ಧಿಸುವ ಇಷ್ಟಲಿಂಗವನ್ನು ಪೂಜಿಸುವುದೇ ಶ್ರೇಷ್ಠ ಎಂದು ಡಾ| ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಶ್ರೀ ತರಳಬಾಳು ಜಗದ್ಗುರು ಶಾಖಾ ಮಠ ಆಯೋಜಿಸಿರುವ “ಮತ್ತೆ ಕಲ್ಯಾಣ’ ಅಂತರ್ಜಾಲ ಉಪನ್ಯಾಸ ಮಾಲಿಕೆಯ 24ನೇ ದಿನ ಕಾರ್ಯಕ್ರಮದಲ್ಲಿ ಶ್ರೀಗಳು ಆಶೀರ್ವಚನ ನೀಡಿದರು. ದೇಹವೇ ತೀರ್ಥಕ್ಷೇತ್ರ ಇದ್ದಂತೆ. ಇಷ್ಟಲಿಂಗವನ್ನು ಪಡೆದುಕೊಂಡವರು ಲಿಂಗವನ್ನಲ್ಲದೆ ಅನ್ಯ ದೈವವನ್ನು ಪೂಜಿಸಬಾರದೆನ್ನುವ ತತ್ವ ಸಿದ್ಧಾಂತಗಳನ್ನು ಮರೆತು ಸ್ಥಾವರ ದೇವರ ಪೂಜಿಸುವವರು ಖೊಟ್ಟಿ ಮೂಳರು ಎಂದು ಅಂಬಿಗರ ಚೌಡಯ್ಯನವರು ಛೇಡಿಸುವರು.

ಕಲ್ಲ ದೇವರ ಪೂಜೆಯ ಮಾಡಿ ಕಲಿಯುಗದ ಕತ್ತೆಗಳಾಗಿ ಹುಟ್ಟಿದರು ಎನ್ನುವ ಅವರ ವಚನದಲ್ಲಿ ಕಲ್ಲು, ಮಣ್ಣು, ಮರಗಳಿಂದ ಸೃಷ್ಟಿಯಾದ ದೇವರು ದೇವರಲ್ಲ, ಅಂಥ ದೇವರಿಗೆ ಹರಕೆ ಕಟ್ಟಿಕೊಳ್ಳುವ ಕರ್ಮಠತನಗಳನ್ನು ಒಪ್ಪುವುದಿಲ್ಲ. ಇಂಥವರನ್ನು ಮಾನಹೀನರು ಎನ್ನುವರು. ದೇವರ ಪೂಜೆಯಿಂದ ಪರಮಾನಂದವುಂಟಾಗಬೇಕು. ಆದರೆ ಇವು ಭಯವನ್ನುಂಟು ಮಾಡುವ ದೇವರುಗಳಾಗಿವೆ. ದೇವರ ಹೆಸರಿನಲ್ಲಿ ಹರಕೆ, ಪಾದಯಾತ್ರೆಯಂಥ ಪದ್ಧತಿಗಳು ಇಂದೂ ಇವೆ. ಇಂಥವರನ್ನು ಪಂಚ ಮಹಾಪಾತಕಿಗಳು ಎಂದು ಹೇಳಿದ್ದರು ಎಂದರು.

ತಳ ಸಮುದಾಯದಿಂದ ಬಂದ ಕಾಯಕ ಜೀವಿಗಳಲ್ಲಿ ಅಂಬಿಗರ ಚೌಡಯ್ಯನವರು ಅಗ್ರಗಣ್ಯರು. ಇವರು ನೇರ ನಡೆ-ನುಡಿಯನ್ನು ಮೈಗೂಡಿಸಿಕೊಂಡು ಕ್ರಾಂತಿಕಾರಿ ಎನ್ನಿಸಿಕೊಂಡರು. ಇವರದು ದೋಣಿ ನಡೆಸುವ ಕಾಯಕ. ಜನ್ಮಸ್ಥಳ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಚೌಡದಾನಪುರ. ತಂದೆ ವಿರೂಪಾಕ್ಷ, ತಾಯಿ ಪಂಪಾದೇವಿ. ನಿಜ ಶರಣ ಅಂಬಿಗರ ಚೌಡಯ್ಯ ವಚನಾಂಕಿತ. ಇವರ 278 ವಚನಗಳು ಲಭ್ಯವಾಗಿವೆ. ಈ ವಚನಗಳು ಗಣಾಚಾರ ತತ್ವವನ್ನು ಪ್ರತಿಬಿಂಬಿಸುತ್ತವೆ. ಇಲ್ಲಿ ಬಂಡಾಯ ಪ್ರಜ್ಞೆ ಪ್ರಧಾನವಾಗಿದೆಯಲ್ಲದೆ ಲೌಕಿಕ ಮತ್ತು ಪಾರಮಾರ್ಥಿಕ ಎತ್ತರವನ್ನೂ ಕಾಣಬಹುದು ಎಂದು ತಿಳಿಸಿದರು.

ಉಪನ್ಯಾಸ ಮಾಲಿಕೆಯಲ್ಲಿ “ಅಂಬಿಗರ ಚೌಡಯ್ಯ’ ಕುರಿತಂತೆ ಸಂಘಟಕ, ತರಬೇತುದಾರ ಮಂಗಳೂರಿನ ಉಮರ್‌ ಯು.ಎಚ್‌ ಮಾತನಾಡಿ, ಉತ್ತಮ ಆರೋಗ್ಯಕ್ಕೆ ಆಹಾರದ ಜೊತೆಗೆ ಮಾನಸಿಕ ಆರೋಗ್ಯವೂ ಮುಖ್ಯ. ದೇಹದಲ್ಲಿರುವ ಜೀವಕೋಶಗಳು ಸದಾ ಪರಸ್ಪರ ಪ್ರೀತಿಸುತ್ತವೆ. ನಾವು ಇನ್ನೊಬ್ಬರನ್ನು ದ್ವೇಷಿಸಲು ಶುರು ಮಾಡಿದಾಗ ನಮ್ಮಲ್ಲಿನ ಜೀವಕೋಶಗಳು ಗೊಂದಲಕ್ಕೆ, ಘರ್ಷಣೆಗೆ ಒಳಗಾಗುತ್ತವೆ. ಇದರಿಂದಾಗಿ ರಕ್ತದೊತ್ತಡ, ಸಕ್ಕರೆ ಕಾಯಿಲೆ, ಬ್ರೈನ್‌ಸ್ಟ್ರೋಕ್‌, ಬ್ರೈನ್‌ ಹ್ಯಾಮರೇಜ್‌, ಹೃದಯಾಘಾತ ಆಗುತ್ತದೆ.

ಇದು ಕಟ್ಟು ಕತೆಯಲ್ಲ, ವೈದ್ಯ ವಿಜ್ಞಾನ ಹೇಳುವ ಸತ್ಯ. ಇದಕ್ಕೆ ಪರಿಹಾರದ ಬಗ್ಗೆ ಯಾವ ವಿಶ್ವವಿದ್ಯಾಲಯಗಳಲ್ಲೂ ಕಲಿಕೆಗಳಿಲ್ಲ. ವೇದ, ಕುರಾನ್‌, ಬೈಬಲ್‌, ವಚನಕಾರರು, ದಾರ್ಶನಿಕರು, ಧರ್ಮ ಮತ್ತು ಆಧ್ಯಾತ್ಮ ಕಲಿಸುವ ಉದಾತ್ತ ಮಾನವೀಯ ಮೌಲ್ಯಗಳಿಂದ ಮಾತ್ರ ಪರಿಹಾರ ಸಾಧ್ಯ ಎಂದು ಅಭಿಪ್ರಾಯಪಟ್ಟರು. ಅಧ್ಯಾಪಕಿ ಎಚ್‌.ಆರ್‌. ಕಾವ್ಯ ಸ್ವಾಗತಿಸಿದರು. ಶಿವಸಂಚಾರದ ಕೆ. ಜ್ಯೋತಿ, ಎಚ್‌. ಎಸ್‌. ನಾಗರಾಜ್‌ ವಚನಗೀತೆಗಳನ್ನು ಹಾಡಿದರು. ಶಿವಮೊಗ್ಗದ ಸಹಚೇತನ ನಾಟ್ಯಾಲಯ ಕೇಂದ್ರದ ಕಲಾವಿದರು ಮತ್ತು ಸಾಣೇಹಳ್ಳಿಯ ವಿದ್ಯಾರ್ಥಿಗಳಾದ ಡಿ.ಎಸ್‌. ಸುಪ್ರಭೆ ಮತ್ತು ಡಿ.ಜೆ. ಮುಕ್ತಾ ವಚನ ನೃತ್ಯ ಪ್ರದರ್ಶಿಸಿದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.