ಅಮೃತಾಪುರ ಸರ್ಕಾರಿ ಶಾಲೆಗೆ ಹೈಟೆಕ್‌ ಸ್ಪರ್ಶ


Team Udayavani, Sep 4, 2021, 5:49 PM IST

4-14

ರಾಜ ಸಿರಿಗೆರೆ

ಸಿರಿಗೆರೆ : ಶಿಕ್ಷಕರಿಗೆ ಇಚ್ಛಾಶಕ್ತಿ ಇದ್ದರೆ ಸರ್ಕಾರಿ ಶಾಲೆಯನ್ನೂ ಹೈಟೆಕ್‌ ಆಗಿಸಬಹುದು ಎಂಬುದಕ್ಕೆ ಗಡಿ ಗ್ರಾಮ ಅಮೃತಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯೇ ಸಾಕ್ಷಿ. ಈ ಶಾಲೆಯ ಬಹುಮುಖ ಪ್ರತಿಭೆ ಹೊಂದಿರುವ ಸಹಶಿಕ್ಷಕರೊಬ್ಬರ ಶ್ರಮದಿಂದ ನಗರ ಪ್ರದೇಶದ ಶಾಲೆಗಳನ್ನೂ ನಾಚಿಸುವಂತಹ ಸೌಲಭ್ಯಗಳನ್ನು ಪಡೆದು ಚಿತ್ರದುರ್ಗ ಜಿಲ್ಲೆಯಲ್ಲಿಯೇ ಮಾದರಿ ಶಾಲೆಯಾಗಿ ರೂಪುಗೊಂಡಿದೆ. ಅವರ ಸಾಧನೆಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಅರಸಿ ಬಂದಿದೆ.

ಈ ಶಾಲೆಯಲ್ಲಿ 1-5 ತರಗತಿ ನಡೆಯುತ್ತದೆ. 82 ವಿದ್ಯಾರ್ಥಿಗಳಿಗೆ ಮೂವರು ಶಿಕ್ಷಕರಿದ್ದಾರೆ. ಅವರಲ್ಲಿ ಸಹಶಿಕ್ಷಕ ಟಿ.ಪಿ. ಉಮೇಶ್‌ ಅವರ ಶ್ರಮ ಶಾಲೆಯ ಬೆಳವಣಿಗೆಯಲ್ಲಿ ಗಮನಾರ್ಹವಾಗಿದೆ. ಆರು ವರ್ಷಗಳ ಹಿಂದಿನ ಮಾತು. ಭಾರೀ ಮಳೆಯಿಂದ ಶಾಲೆಯ ಕೊಠಡಿಗಳು ಶಿಥಿಲಾವಸ್ಥೆ ತಲುಪಿದ್ದವು. ಮಕ್ಕಳು ಪ್ರಾಣಭಯದಿಂದಲೇ ಪಾಠ ಆಲಿಸುವ ಸ್ಥಿತಿ ಇತ್ತು. ದುರಸ್ತಿಗೆ ಸರ್ಕಾರದಿಂದ ಆರ್ಥಿಕ ನೆರವು ಸಿಗದೇ ಹೋದಾಗ ಮಕ್ಕಳನ್ನು ಬಯಲಲ್ಲಿ, ಗಿಡ-ಮರಗಳ ಕೆಳಗೆ ಕುಳ್ಳಿರಿಸಿ ಪಾಠ ಹೇಳುವ ಪರಿಸ್ಥಿತಿ ನಿರ್ಮಾಣವಾಗಿತ್ತು.

ಆಗ ಬೆಂಗಳೂರಿನ ಖಾಸಗಿ ಸಂಸ್ಥೆ ಓಸಾಟ್‌ ಸಂಪರ್ಕಿಸಿ 40 ಲಕ್ಷ ರೂ. ವೆಚ್ಚದಲ್ಲಿ ನಾಲ್ಕು ತರಗತಿ ಕೊಠಡಿಗಳನ್ನು ನಿರ್ಮಿಸಲಾಯಿತು. ಬೆಂಗಳೂರಿನ ರೋಟರಿ ಸಂಸ್ಥೆ ಅತ್ಯಾಧುನಿಕ ಡೆಸ್ಕ್, ನಲಿ-ಕಲಿ ಮಕ್ಕಳಿಗೆ ಓದುವ ಟೇಬಲ್‌ ಕೊಡುಗೆಯಾಗಿ ನೀಡಿತು. ಇದರಿಂದ ಖಾಸಗಿ ಶಾಲೆಗಳತ್ತ ಮುಖ ಮಾಡಿದ್ದ ಮಕ್ಕಳು ಸರ್ಕಾರಿ ಶಾಲೆಯತ್ತ ಆಕರ್ಷಿತರಾದರು. ಯಾವುದೇ ಹೆಸರಾಂತ ಖಾಸಗಿ ಶಾಲೆಗಳಲ್ಲಿಯೂ ಇರದಂತಹ ಸೌಲಭ್ಯಗಳು ಇದೀಗ ಅಮೃತಾಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿವೆ. ಈ ಶಾಲೆಯ ಪುಟಾಣಿ ಮಕ್ಕಳು ಇದೀಗ ಸೂಕ್ಷ್ಮದರ್ಶಕ ಯಂತ್ರವನ್ನು ಭೌತಿಕವಾಗಿ ನೋಡುವುದಲ್ಲದೆ ಪ್ರಾಯೋಗಿಕವಾಗಿಯೂ ಬಳಸುತ್ತಿದ್ದಾರೆ.

ಅಲ್ಲದೆ ದಾನಿಗಳು ನೀಡಿರುವ ಲ್ಯಾಪ್‌ಟಾಪ್‌ಗ್ಳನ್ನು ಪರಿಣಾಮಕಾರಿಬೋಧನೆಗೆಬಳಸಿಕೊಳ್ಳಲಾಗುತ್ತಿದೆ.ಈ ಶಾಲೆಯಮಕ್ಕಳು ಚಿತ್ರದುರ್ಗ ಆಕಾಶವಾಣಿ ನಡೆಸುವ “ಚಿಗುರು’ಕಾರ್ಯಕ್ರಮಗಳಲ್ಲಿಯೂ ಭಾಗವಹಿಸಿದ್ದಾರೆ. ಮಕ್ಕಳಲ್ಲಿ ಪರಿಸರ ಹಾಗೂ ವಿಜ್ಞಾನದತ್ತ ಆಸಕ್ತಿ ಬೆಳೆಸಲು ವಿಜ್ಞಾನ ಪ್ರಯೋಗಾಲಯ ನಿರ್ಮಿಸಲಾಗಿದೆ. ಪಾಠೊಪಕರಣಗಳ ಕೊಠಡಿಯೂ ಆಕರ್ಷಣೀಯವಾಗಿದೆ. ಇದೆಲ್ಲದರ ಹಿಂದೆ ಉಮೇಶ್‌ ಹಾಗೂ ಉಳಿಸ ಶಿಕ್ಷಕರ ಶ್ರಮ ಎದ್ದು ಕಾಣುತ್ತಿದೆ.

ಮಿಸ್ಡ್ ಕಾಲ್‌ ಕೊಡಿ ಪಾಠ ಕೇಳಿ: ಆನಲೈನ್‌ ಶಿಕ್ಷಣ ನೀಡಲು ಮಕ್ಕಳ ಬಳಿ ಸ್ಮಾರ್ಟ್‌ಫೋನ್‌ ಇರಲಿಲ್ಲ. ಹಾಗಾಗಿ ಅವರ ಕೀಪ್ಯಾಡ್‌ ಮೊಬೈಲ್‌ ಉಮೇಶ್‌ಅವರೇಕರೆಮಾಡಿಪಾಠಹೇಳಿದ್ದಾರೆ.ಯಾವುದೇಸಮಯದಲ್ಲಿ ಕರೆ ಮಾಡಿದರೂ ಒಂದಿನಿತೂ ಬೇಸರಪಟ್ಟುಕೊಳ್ಳದೆ ವಿದ್ಯಾರ್ಥಿಗಳ ಸಂದೇಹ ಬಗೆಹರಿಸಿದ್ದಾರೆ. ಅಲ್ಲದೆ ತಮ್ಮ ಸೈಕಲ್‌ ಏರಿ ಹಳ್ಳಿಗಳಿಗೆ ತೆರಳಿ ಮಕ್ಕಳನ್ನು ಹುಡುಕಾಡಿ ಪಾಠ ಹೇಳಿದ್ದು ಅವರ ಕಾರ್ಯತತ್ಪರತೆಗೆ ನಿದರ್ಶನ.

ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಮೂರು ತಿಂಗಳ ಕಾಲ ಬಹುಪಾಲು ಶಾಲೆಯಲ್ಲಿಯೇ ಉಳಿದು ಪಾಳಿ ಪದ್ಧತಿಯಲ್ಲಿ ಗ್ರಾಮದ ದೇವಾಲಯ, ಜಗಲಿ ಕಟ್ಟೆಗಳ ಮೇಲೆ ಸಾಮಾಜಿಕ ಅಂತರ ಪಾಲಿಸಿ ಮಕ್ಕಳಿಗೆ ಶಿಕ್ಷಣ ನೀಡಿದ್ದಾರೆ. ಅಲ್ಲದೆ ಕೋವಿಡ್‌ ಜಾಗೃತಿ ಕಾರ್ಯಕ್ಕೂ ಕೈ ಜೋಡಿಸಿ ಸಾಮಾಜಿಕ ಕಳಕಳಿ ಮೆರೆದಿದ್ದಾರೆ. ಇವರ ಈ ಕಾರ್ಯ ಇತರ ಶಿಕ್ಷಕರಿಗೆ ಮಾದರಿಯಾಗಲಿ.

ಟಾಪ್ ನ್ಯೂಸ್

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.