ಶರಣರ ಜಯಂತಿ ಆಚರಣೆ ಅನಗತ್ಯ


Team Udayavani, Aug 13, 2021, 6:38 PM IST

13-22

ಶಿವಮೊಗ್ಗದ ಸಹಚೇತನ ನಾಟ್ಯಾಲಯ ಕೇಂದ್ರದ ಕಲಾವಿದರು ವಚನ ನೃತ್ಯ ಪ್ರದರ್ಶಿಸಿದರು

ಹೊಸದುರ್ಗ: ಶರಣರು ಜಾತಿಗೆ ಅಂಟಿಕೊಳ್ಳದೆ ಜಾತ್ಯತೀತರಾಗಿ ಬಾಳಿದವರು. ಆದರೆ ಇಂದು ಅದೇ ಶರಣರ ಹೆಸರಿನಲ್ಲಿ ಜಾತಿಯ ಪೋಷಣೆ ನಡೆಯುತ್ತಿರುವುದು ವಿಷಾದನೀಯ ಎಂದು ಡಾ| ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು.

ಸಾಣೇಹಳ್ಳಿಯ ತರಳಬಾಳು ಜಗದ್ಗುರು ಶಾಖಾ ಮಠದಿಂದ ಆಯೋಜಿಸಿರುವ “ಮತ್ತೆ ಕಲ್ಯಾಣ’ ಅಂತರ್ಜಾಲ ಉಪನ್ಯಾಸ ಮಾಲಿಕೆಯ 12 ನೇ ದಿನದ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಶ್ರೀಗಳು ಆಶೀರ್ವಚನ ನೀಡಿದರು. ಯಾವುದೇ ಶರಣರ, ಮಹಾತ್ಮರ ಜಯಂತಿಗಳನ್ನು ಸರಕಾರ ಮಾಡಬೇಕಿಲ್ಲ, ರಜೆ ನೀಡಬೇಕಿಲ್ಲ. ಹಾಗೆ ಮಾಡಿದರೆ ಅವರ ಕಾಯಕ ಶ್ರದ್ಧೆಯನ್ನು ಕಡೆಗಣಿಸಿದ ಹಾಗೆ ಆಗುತ್ತದೆ ಎಂದರು.

ಜಯಂತಿಗಳನ್ನು ಆಚರಿಸುವ ಹಣದಲ್ಲಿ ಶರಣರ, ಮಹಾತ್ಮರ ವಚನ-ಮಾತು-ಆಲೋಚನೆಗಳನ್ನು ಚಿಕ್ಕ ಪುಸ್ತಕಗಳಲ್ಲಿ ಪ್ರಕಟಿಸಬೇಕು. ಅವುಗಳನ್ನು ಸಾರ್ವಜನಿಕರಿಗೆ ಅದರಲ್ಲೂ ಮಕ್ಕಳಿಗೆ ಸಿಗುವಂತೆ ಮಾಡಿದರೆ ಜಯಂತಿಗಳ ಆಚರಣೆ ಅರ್ಥಪೂರ್ಣವಾಗುವುದು ಎಂದು ಅಭಿಪ್ರಾಯಪಟ್ಟರು.

ಮಡಿವಾಳ ಮಾಚಿದೇವರದು ಬಿಜಾಪುರ ಜಿಲ್ಲೆಯ ಹಿಪ್ಪರಿಗಿ ಗ್ರಾಮ. ಕಾರ್ಯಕ್ಷೇತ್ರ ಕಲ್ಯಾಣ. ಮಲಿನವಾದ ಬಟ್ಟೆಗಳನ್ನು, ಮನಸ್ಸುಗಳನ್ನು ಮಡಿ ಮಾಡುವ ಕಾಯಕ. ಭಕ್ತರಲ್ಲದ ಭವಿಗಳ ಬಟ್ಟೆ ತೊಳೆಯುವುದಿಲ್ಲ ಎನ್ನುವುದು ಅವರ ಪ್ರತಿಜ್ಞೆ. ಕಲಿದೇವರದೇವ ಅಂಕಿತ. ಇವರ 346 ವಚನಗಳು ದೊರೆತಿವೆ. ಆಚಾರ, ವಿಚಾರ, ಏಕದೇವ ನಿಷ್ಠೆಗೆ ಹೆಸರಾದವರು. ಸ್ವಾಭಿಮಾನಿಯಾಗಿ ಇದ್ದದ್ದನ್ನು ಇದ್ದ ಹಾಗೆ ಹೇಳಿ ಜನರ ಅಂಕು ಡೊಂಕುಗಳನ್ನು ತಿದ್ದುವವರು ಗಣಾಚಾರಿ. ಅವರ ವಚನಗಳಲ್ಲಿ ಸುಸಂಸ್ಕೃತ ಸಮಾಜ ನಿರ್ಮಾಣ ಮಾಡುವ ಆಶಯವಿದೆ. ಗುರುಸೇವೆ, ಲಿಂಗಪೂಜೆ, ಜಂಗಮ ದಾಸೋಹಗಳಲ್ಲಿ ಒಂದನ್ನ ಅರಿತು ಮತ್ತೂಂದನ್ನು ಆಚರಿಸಿ ಬಿಡುವಂಥದ್ದಲ್ಲ. ಇವುಗಳ ಜೊತೆಗೆ ಶರಣರ ಸಂಗವೂ ಮುಖ್ಯ ಎಂದವರು. ಇಂಥ ಸಂಗದ ಮಹತ್ವವನ್ನು ತಿಳಿಸಿದ್ದು ಅನುಭ ಮಂಟಪ ಎಂದರು.

ಉಪನ್ಯಾಸ ಮಾಲಿಕೆಯಲ್ಲಿ “ಮಡಿವಾಳ ಮಾಚಿದೇವ; ವಿಷಯದ ಕುರಿತಂತೆ ಪತ್ರಕರ್ತ, ಸಾಹಿತಿ ಮೈಸೂರಿನ ಗಣೇಶ ಅಮೀನಗಡ ಮಾತನಾಡಿ, ಶರಣರ ಜನ್ಮದಿನಗಳನ್ನು ಆಯಾ ಜಾತಿಯವರು ಮಾತ್ರ ಆಚರಿಸುತ್ತಿರುವುದು ಆ ಶರಣರ ಆಶಯಗಳಿಗೇ ವಿರುದ್ಧವಾದುದು. ಮಡಿವಾಳ ಮಾಚಿದೇವರಿಗೆ ಪ್ರಖರವಾದ ಚಿಂತನೆಗಳಿರುವುದು ಅವರ ವಚನಗಳಿಂದ ತಿಳಿಯುತ್ತದೆ. ಕಲಿದೇವರ ದೇವ ಎನ್ನುವುದು ಇವರ ವಚನಾಂಕಿತ. ಬಂಡಾಯ ಮನೋಧರ್ಮದ ಮಾಚಿದೇವರು ನಡೆ-ನುಡಿಗಳನ್ನು ಪ್ರಶ್ನಿಸುತ್ತಲೇ ಸಮಕಾಲೀನರಾಗುವರು. “ವಚನದ ರಚನೆಯ ನುಡಿವ ಬಯಲ ರಂಜಕರೆಲ್ಲ ಭಕ್ತರಪ್ಪರೇ, ವಚನ ತನ್ನಂತಿರದು, ತಾನು ವಚನದಂತಿರ ಎನ್ನುವ ಮೂಲಕ ಶಬ್ದಾಡಂಭರಿಗರನ್ನು ವಿಡಂಬಿಸಿದ್ದಾರೆ ಎಂದು ಹೇಳಿದರು.

ಚಿಕ್ಕಮಗಳೂರಿನ ವೈಷ್ಣವಿ ಎನ್‌. ರಾವ್‌ ಸ್ವಾಗತಿಸಿದರು. ಶಿವಸಂಚಾರದ ಕೆ. ಜ್ಯೋತಿ, ಕೆ. ದಾûಾಯಣಿ, ಎಚ್‌. ಎಸ್‌. ನಾಗರಾಜ್‌ ತಬಲಾ ಸಥ್‌ ನೀಡಿದರು. ಶರಣ್‌ ತಬಲಾ ಸಾಥ್‌ ನೀಡಿದರು. ಶಿವಮೊಗ್ಗದ ಸಹಚೇತನ ನಾಟ್ಯಾಲಯ ಕೇಂದ್ರದ ಕಲಾವಿದರು ವಚನ ನೃತ್ಯ ಪ್ರದರ್ಶಿಸಿದರು.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.