ಆದಯ್ಯರ ವಚನದಲ್ಲಿ ಸಪ್ತ ಸೂತ್ರವೇ ಪ್ರಧಾನ


Team Udayavani, Aug 30, 2021, 3:16 PM IST

30-7

ಹೊಸದುರ್ಗ: ಶಿವಮೊಗ್ಗದ ಸಹಚೇತನ ನಾಟ್ಯಾಲಯ ಕೇಂದ್ರದ ಕಲಾವಿದರು ವಚನ ನೃತ್ಯ ಪ್ರದರ್ಶಿಸಿದರು.

ಹೊಸದುರ್ಗ: ಮಾನವ ಮತ್ತು ದೇವರು ಇಬ್ಬರೂ ಒಂದೇ. ಆದರೆ ಮಾನವ ಅಜ್ಞಾನದಿಂದ ತಾನೇ ಬೇರೆ, ದೇವರೇ ಬೇರೆ ಎಂದು ಭಾವಿಸಿದ್ದಾನೆ. ಇದು ಸರಿಯಲ್ಲವೆಂದು ಆದಯ್ಯನವರು ತಮ್ಮ ವಚನಗಳ ಮೂಲಕ ಪ್ರತಿಪಾದಿಸಿದ್ದಾರೆ ಎಂದು ಡಾ| ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಶ್ರೀ ತರಳಬಾಳು ಜಗದ್ಗುರು ಶಾಖಾ ಮಠ ಆಯೋಜಿಸಿರುವ “ಮತ್ತೆ ಕಲ್ಯಾಣ’ ಅಂತರ್ಜಾಲ ಉಪನ್ಯಾಸ ಮಾಲಿಕೆಯ 29ನೇ ದಿನ ಕಾರ್ಯಕ್ರಮದಲ್ಲಿ ಶ್ರೀಗಳು ಆಶೀರ್ವಚನ ನೀಡಿದರು. ಮಾನವನ ಭಾವನೆ ಬದಲಾಗಿ ಮಾನವ ಮತ್ತು ದೇವರು ಒಂದೇ ಆಗಬೇಕಾದಲ್ಲಿ ಮಾನವನ ವರ್ತನೆಗಳು ಹೇಗಿರಬೇಕು ಎನ್ನುವುದಕ್ಕೆ ಆದಯ್ಯನವರು “ತನುವಿನಲ್ಲಿ ನಿರ್ಮೋಹ, ಮನದಲ್ಲಿ ನಿರಹಂಕಾರ, ಪ್ರಾಣದಲ್ಲಿ ನಿರ್ಭಯ, ಚಿತ್ತದಲ್ಲಿ ನಿರಪೇಕ್ಷೆ, ವಿಷಯಂಗಳಲ್ಲಿ ಉದಾಸೀನ, ಭಾವದಲ್ಲಿ ದಿಗಂಬರ, ಜ್ಞಾನದಲ್ಲಿ ಪರಮಾನಂದ’ ಹೊಂದುವ ಸಪ್ತ ಸೂತ್ರಗಳನ್ನು ಹೇಳಿದ್ದಾರೆ ಎಂದರು.

ಆದಯ್ಯನವರು ಕರ್ನಾಟಕದವರಲ್ಲ, ಸೌರಾಷ್ಟ್ರದವರು. ಅವರ ವೃತ್ತಿ ವ್ಯಾಪಾರ. ವ್ಯಾಪಾರಕ್ಕಾಗಿ ಪುಲಿಗೆರೆಗೆ (ಇಂದಿನ ಲಕ್ಷೆಶ್ವರ) ಬಂದು ಜೈನ ಕನ್ಯೆ ಪದ್ಮಾವತಿಯನ್ನು ಮದುವೆಯಾಗುತ್ತಾರೆ. ಅಳಿಯ ಮತ್ತು ಮಾವನ ನಡುವೆ ದೇವರ ವಿಚಾರವಾಗಿ ಘರ್ಷಣೆಯಾಗಿ ಸೌರಾಷ್ಟ್ರದಿಂದಸೋಮೇಶ್ವರನನ್ನುಕರೆತಂದು ಪುಲಿಗೆರೆಯ ಸುರಹೊನ್ನೆ ಬಸದಿಯಲ್ಲಿ ಪ್ರತಿಷ್ಠಾಪಿಸಿದರೆಂಬ ಪ್ರತೀತಿ ಇದೆ.

ಆದಯ್ಯನವರು ನಿಷ್ಠಾವಂತ ಶಿವಭಕ್ತರು. ಕಲ್ಯಾಣದ ಶರಣರ ಪ್ರಭಾವದಿಂದ ತಮ್ಮ ಬದುಕಿನ ದಿಕ್ಕನ್ನೇ ಬದಲಾಯಿಸಿಕೊಂಡ ಶರಣರು. ತಾವು ಸೌರಾಷ್ಟ್ರದವರು ಮತ್ತು ಸೋಮೇಶ್ವರನ ಭಕ್ತರು ಎನ್ನುವುದಕ್ಕೆ ಸಾಕ್ಷಿ ಎಂಬಂತೆ ತಮ್ಮ ವಚನಗಳಿಗೆ “ಸೌರಾಷ್ಟ್ರ ಸೋಮೇಶ್ವರ’ ಎನ್ನುವ ಅಂಕಿತ ಬಳಸಿದ್ದಾರೆ.

ಈ ಅಂಕಿತದಲ್ಲಿ 403 ವಚನಗಳು ದೊರೆತಿವೆ. ಇವರ ವಚನಗಳಲ್ಲಿ ಅರಿವು, ಲಿಂಗದ ಮಹತ್ವ, ವೇದಗಳ ನಿರಾಕರಣೆ ಇತ್ಯಾದಿ ವಿಚಾರಗಳು ಉಲ್ಲೇಖೀತವಾಗಿವೆ. “ನಾಲ್ಕು ವೇದ, ಹದಿನಾರು ಶಾಸ್ತ್ರ, ಹದಿನೆಂಟು ಪುರಾಣ, ಇಪ್ಪತ್ತೆಂಟು ಆಗಮ, ಮೂವತ್ತೆರಡು ಉಪನಿಷತ್ತುಗಳೆಲ್ಲವೂ ಪಂಚಾಕ್ಷರದ ಸ್ವರೂಪವನರಿಯದೆ ನಿಂದವು’ ಎನ್ನುತ್ತ ಪಂಚಾಕ್ಷರ ಮಂತ್ರದ ಮಹತ್ವವನ್ನು ಎತ್ತಿ ಹಿಡಿದಿದ್ದಾರೆ.

“ವೇದಗಳ ಹಿಂದೆ ಹರಿಯದಿರು, ಶಾಸ್ತ್ರಗಳ ಹಿಂದೆ ಸುಳಿಯದಿರು, ಪುರಾಣಗಳ ಹಿಂದೆ ಬಳಸದಿರು, ಆಗಮಂಗಳ ಹಿಂದೆ ತೊಳಲದಿರು’ ಎಂದು ಹೇಳುತ್ತ ಇವೆಲ್ಲವೂ “ಶಬ್ದಜಾಲ’ ಎಂದು ನಿಷ್ಠುರವಾಗಿ ಹೇಳಿದ್ದಾರೆ. ಶ್ರೀಗುರುವಿನ ಪಾದತೀರ್ಥಕ್ಕಿಂತ ಮಿಗಿಲಾದ ತೀರ್ಥ ಮತ್ತೂಂದಿಲ್ಲ ಎಂದು ಹೇಳಿದ್ದಾರೆಂದರು.

ಉಪನ್ಯಾಸ ಮಾಲಿಕೆಯಲ್ಲಿ “ಆದಯ್ಯ’ ಕುರಿತಂತೆ ಜಾಗತಿಕ ಬಸವ ಶಾಂತಿ ಸಂಸ್ಥೆಯ ಅಧ್ಯಕ್ಷ, ಕತಾರ್‌ನ ಶಶಿಧರ ಹೆಬ್ಟಾಳ ಮಾತನಾಡಿ 12ನೇ ಶತಮಾನದಲ್ಲಿ ಬಸವಣ್ಣನವರ ನೇತೃತ್ವದಲ್ಲಿ ನಡೆದ ವಚನ ಚಳವಳಿಯ ಪ್ರಭಾವಕ್ಕೆ ಒಳಗಾಗಿ ಕಲ್ಯಾಣಕ್ಕೆ ಬಂದ ಕನ್ನಡೇತರ ಶರಣರಲ್ಲಿ ಆದಯ್ಯ ಕೂಡ ಒಬ್ಬರು. ಇವರು ಮೂಲತಃ ಸೌರಾಷ್ಟ್ರ ಅಂದರೆ ಈಗಿನ ಗುಜರಾತಿನವರು. ವ್ಯಾಪಾರ ಮಾಡುವುದು ಇವರ ಕಾಯಕವಾಗಿತ್ತು. ಪುಲಿಗೆರೆಗೆ ಬಂದು ವ್ಯಾಪಾರ ಮಾಡುತ್ತಿರುವಾಗ ಪದ್ಮಾವತಿ ಎನ್ನುವ ಜೈನ ಕನ್ಯೆಯ ಪರಿಚಯವಾಗುತ್ತದೆ. ಪರಿಚಯ ಪ್ರೀತಿಗೆ ತಿರುಗಿ ಆಕೆಯನ್ನು ಮದುವೆಯಾಗಲು ಮುಂದಾಗುತ್ತಾರೆ. ಆದರೆ ಪದ್ಮಾವತಿಯ ತಂದೆ ಶಿವಭಕ್ತರಿಗಲ್ಲದೆ ಅನ್ಯರಿಗೆ ಮಗಳನ್ನು ಕೊಡಲಾಗದು ಎನ್ನುವರು. ಹಠಕ್ಕೆ ಬಿದ್ದ ಆದಯ್ಯ ವಾದಕ್ಕೆ ನಿಂತು ಸೌರಾಷ್ಟ್ರದಿಂದ ಸೋಮೇಶ್ವರನನ್ನು ತಂದು ಲಕ್ಷೇಶ್ವರದ ಸುರಹೊನ್ನೆಯ ಬಸದಿಯಲ್ಲಿ ಸ್ಥಾಪಿಸಿ ನಿಜ ಶಿವಭಕ್ತರೆಂದು ಸಾಬೀತು ಪಡಿಸುತ್ತಾರೆ ಎನ್ನವ ಪವಾಡ ಸದೃಶ ಕತೆಯೊಂದನ್ನು ಹರಿಹರ, ರಾಘವಾಂಕರು ಉಲ್ಲೇಖೀಸಿದ್ದಾರೆ ಎಂದು ಹೇಳಿದರು.

ಶ್ರೀಮಠದ ವಿದ್ಯಾರ್ಥಿ ಸಚಿನ್‌ಪಿ.ಜಿ. ಸ್ವಾಗತಿಸಿದರು. ಶಿವಸಂಚಾರದ ಕೆ. ಜ್ಯೋತಿ, ಕೆ. ದಾಯಣಿ, ಎಚ್‌.ಎಸ್‌. ನಾಗರಾಜ್‌ ವಚನಗೀತೆಗಳನ್ನು ಹಾಡಿದರು. ಶಿವಮೊಗ್ಗದ ಸಹಚೇತನ ನಾಟ್ಯಾಲಯ ಕೇಂದ್ರದ ಕಲಾವಿದರು ವಚನ ನೃತ್ಯ ಪ್ರದರ್ಶಿಸಿದರು.

ಟಾಪ್ ನ್ಯೂಸ್

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.