Chitradurga; ರಾಜಕೀಯವೇ ಸಾಕೆನಿಸಿದೆ ಎಂದ ಕೇಂದ್ರ ಸಚಿವ ನಾರಾಯಣ ಸ್ವಾಮಿ!
Team Udayavani, Jan 8, 2024, 10:27 PM IST
ಚಿತ್ರದುರ್ಗ: ರಾಜಕಾರಣದಿಂದ ದೂರ ಉಳಿಯಬೇಕೆಂದಿದ್ದೇನೆ. ಭ್ರಷ್ಟ ರಾಜಕಾರಣದಲ್ಲಿ ಮುಂದುವರಿಯುವ ರಾಜಕಾರಣಿ ನಾನಲ್ಲ ಎಂದು ಕೆಲವು ದಿನಗಳ ಹಿಂದಷ್ಟೇ ಹೇಳಿದ್ದ ಕೇಂದ್ರ ಸಚಿವ ಎ. ನಾರಾಯಣ ಸ್ವಾಮಿ ಅವರು, ಈಗ ಮತ್ತೊಮ್ಮೆ ರಾಜಕೀಯದ ಬಗ್ಗೆ ನಿರಾಸಕ್ತಿ ವ್ಯಕ್ತಪಡಿಸಿದ್ದಾರೆ.
ಸೋಮವಾರ ನಡೆದ “ದಿಶಾ’ ಸಭೆಯಲ್ಲಿ ಅಧಿಕಾರಿಯೊಬ್ಬರ ಉತ್ತರ ಕೇಳಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ಇಂಥದ್ದನ್ನೆಲ್ಲ ನೋಡಿಯೇ ನನಗೆ ರಾಜಕೀಯದ ಬಗ್ಗೆ ನಿರಾಸಕ್ತಿ ಬಂದಿದೆ ಎಂದರು.
ಸಂಸದರ ಆದರ್ಶ ಗ್ರಾಮಗಳ ಕುರಿತು ಸಚಿವರು ಕೇಳಿದ ಪ್ರಶ್ನೆಗೆ ಲೋಕೋಪಯೋಗಿ ಎಂಜಿನಿಯರ್ ಸಮರ್ಪಕ ಮಾಹಿತಿ ನೀಡಲಿಲ್ಲ. ಆಗ ಸಭೆಗೆ ಸರಿಯಾದ ಮಾಹಿತಿ ತರಲು ಆಗದಿದ್ದರೆ ಇಲ್ಲಿ ನಿಮ್ಮ ಅಗತ್ಯವಾದರೂ ಏನು ಎಂದು ಪ್ರಶ್ನಿಸಿದರು.
ನಿಮ್ಮ ಈ ವರ್ತನೆ ಜಿಲ್ಲಾಡಳಿತ, ಜಿಲ್ಲಾ ಧಿಕಾರಿಗಳು, ಸಚಿವರು, ಸಂಸದರನ್ನು ಜನ ಬೆರಳಿಟ್ಟು ಮಾತನಾಡುವಂತಾಗುತ್ತದೆ. 2047ಕ್ಕೆ ಸ್ವಾವಲಂಬಿ ಮತ್ತು ಅಭಿವೃದ್ಧಿ ಹೊಂದಿದ ಭಾರತ ಆಗಬೇಕು ಎಂದು ಹೇಳುತ್ತಿದ್ದೇವೆ. ಆದರೆ ಇದು ಬರೀ ಪೇಪರ್ನಲ್ಲಿ ಮಾತ್ರ ಆಗಬಾರದು. ಇದಕ್ಕಾಗಿ ಕೆಲಸ ಮಾಡಬೇಕು ಎಂದು ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ