ಕಾಮಗಾರಿ ವಿಳಂಬಕ್ಕೆ ಕೇಂದ್ರ ಸಚಿವರು ಗರಂ

ನಿಗದಿತ ಸಮಯದಲ್ಲಿ ಕಾಮಗಾರಿಪೂರ್ಣಗೊಳಿಸದಿದ್ರೆ ಗುತ್ತಿಗೆದಾರ ಕಪ್ಪುಪಟ್ಟಿಗೆ: ನಾರಾಯಣಸ್ವಾಮಿ

Team Udayavani, Sep 10, 2021, 5:38 PM IST

ಕಾಮಗಾರಿ ವಿಳಂಬಕ್ಕೆ ಕೇಂದ್ರ ಸಚಿವರು ಗರಂ

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಗೆ ತುಂಗಾ ನದಿಯಿಂದ ಭದ್ರಾ ಜಲಾಶಯಕ್ಕೆ ನೀರು ಹರಿಸುವ ಪ್ಯಾಕೇಜ್‌ ಒಂದರ ಕಾಮಗಾರಿ ಮಾರ್ಚ್‌ ವೇಳೆಗೆ ಮುಗಿಯಬೇಕು. ಇಲ್ಲದಿದ್ದರೆ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಿ ಎಂದು ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಚಿತ್ರದುರ್ಗ, ಚಿಕ್ಕಮಗಳೂರು ಹಾಗೂ ತುಮಕೂರು ಜಿಲ್ಲೆ ವ್ಯಾಪ್ತಿಯಲ್ಲಿ ಭದ್ರಾ ಮೇಲ್ದಂಡೆ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ತುಂಗಾ ಮತ್ತು ಭದ್ರಾ ಜಲಾಶಯದ ನಡುವೆ ಕಾಲುವೆ ನಿರ್ಮಾಣಕ್ಕೆ 2008ರಲ್ಲಿ ಗುತ್ತಿಗೆದಾರರೊಂದಿಗೆ ಒಪ್ಪಂದವಾಗಿದೆ. ಕಾಡಿ® ‌
ಮಧ್ಯೆ ಕಾಲುವೆ ಹಾದು ಹೋಗುವುದರಿಂದ ಅರಣ್ಯ ಇಲಾಖೆ 2016ರಲ್ಲಿ ಅನುಮತಿ ನೀಡಿದೆ. ಪರಿಸರ ಸೂಕ್ಷ್ಮ ವಿಚಾರವಾಗಿದ್ದರಿಂದ ವಿಳಂಬವಾಗಿದೆ ಎಂದು ಭದ್ರಾ ಮೇಲ್ದಂಡೆ ಮುಖ್ಯ ಎಂಜಿನಿಯರ್‌ ರಾಘವನ್‌ ಮಾಹಿತಿ ನೀಡಿದರು.

ಇದರಿಂದ ಸಿಟ್ಟಿಗೆದ್ದ ಸಚಿವರು, ವಿಳಂಬಕ್ಕೆ ಕಾರಣರಾದ ಗುತ್ತಿಗೆದಾರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸಭೆಗೆ ಗುತ್ತಿಗೆದಾರ ಹಾಜರಾಗದೆ
ವ್ಯವಸ್ಥಾಪಕರನ್ನು ಕಳುಹಿಸಿದ್ದನ್ನು ಕಂಡು ಕೆರಳಿದರಲ್ಲದೆ ಅವರನ್ನು ತಕ್ಷಣ ಹೊರಗೆ ಕಳುಹಿಸಿದರು. ಭದ್ರಾ ಜಲಾಶಯದಿಂದ ವೈ ಜಂಕ್ಷನ್‌
ವರೆಗಿನ ಕಾಮಗಾರಿ ಮುಗಿದೆ. ಇಲ್ಲಿಂದ ಮುಂದೆ ಚಿತ್ರದುರ್ಗ ಹಾಗೂ ದಾವಣಗೆರೆ ಶಾಖಾ ಕಾಲುವೆ ನಿರ್ಮಾಣದಲ್ಲಿ ತೊಡಕುಗಳಿರುವ ಬಗ್ಗೆ ಪ್ರತಿ ಪ್ಯಾಕೇಜ್‌ನ ಗುತ್ತಿಗೆದಾರರು, ಇಂಜಿನಿಯರ್‌ಗೆ ಬಗ್ಗೆಮಾಹಿತಿ ಪಡೆದ ಸಚಿವರು, ತುಮಕೂರು ಶಾಖಾ ಕಾಲುವೆಯಲ್ಲಿ ಅಮೃತ ಮಹಲ್‌ ಕಾವಲು ಹಾಗೂ ಅರಣ್ಯ ಭೂಮಿ ಕುರಿತಂತೆ ನ್ಯಾಯಾಲಯದಲ್ಲಿರುವ ‌ ಪ್ರಕರಣದ ಕುರಿತು ವಕೀಲರ ಜತೆ ಚರ್ಚಿಸಿ ಬಗೆಹರಿಸುವುದಾಗಿ ಭರವಸೆ ನೀಡಿದರು. ಚಿತ್ರದುರ್ಗ ಶಾಖಾ ಕಾಲುವೆಯಲ್ಲಿ ಕೆಲವೆಡೆ ಕಾಮಗಾರಿ ಬಾಕಿ ಇದ್ದು, ಮಾರ್ಚ್‌ ವೇಳೆಗೆ ಪೂರ್ಣಗೊಳಿಸಿ ಬಿಟ್ಟುಕೊಡುವುದಾಗಿ ಅಧಿಕಾರಿಗಳು ತಿಳಿಸಿದರು.

ಇದನ್ನೂ ಓದಿ:ಸೈಫ್-ಕರೀನಾ ಮನೆಯಲ್ಲಿ ಸಂಭ್ರಮದ ಗಣೇಶ ಚತುರ್ಥಿ| ಮಣ್ಣಿನ ಗಣಪ ತಯಾರಿಸಿದ ತೈಮೂರ್

ಅಬ್ಬಿನಹೊಳಲು ಗ್ರಾಮದಲ್ಲಿ ಕಾಮಗಾರಿ ಆರಂಭಿಸಿ:
ತರೀಕೆರೆ ತಾಲೂಕಿನ ಅಬ್ಬಿನಹೊಳಲು ಗ್ರಾಮದಲ್ಲಿ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ವಿತರಿಸಿ ಕಾಮಗಾರಿ ಆರಂಭಿಸಿ. ಪರಿಹಾರ ‌ ಪಡೆಯದಿದ್ದರೆ ಅವರ ಹೆಸರಿಗೆ ಜಮಾ ಮಾಡಿ ಪೊಲೀಸರ ಸಹಕಾರ ಪಡೆದು ಕೆಲಸ ಮಾಡಿ. ಬರದಿಂದ ಬೇಯುತ್ತಿರುವ ರೈತರಿಗಾಗಿ ಈ ಕ್ರಮ ಅನಿವಾರ್ಯ. ಇದು ದಬ್ಟಾಳಿಕೆ ಅಲ್ಲ ಎಂದು ಸಚಿವರು ಸ್ಪಷ rಪಡಿಸಿದರು. ಭದ್ರತೆ ನೀಡುವಂತೆ ಇದೇ ವೇಳೆ ಸ್ಥಳದಲ್ಲಿದ್ದ ಚಿಕ್ಕಮಗಳೂರು ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ತಿಳಿಸಿದರು.

ಚಿಕ್ಕಮಗಳೂರು ಎಎಸ್ಪಿ ರೂಪಾ ಮಾತನಾಡಿ, ಅಬ್ಬಿನಹೊಳಲು ಗ್ರಾಮದಲ್ಲಿ 41 ರೈತರ ಜಮೀನನ್ನು ಭೂಸ್ವಾಧೀನಕ್ಕೆ ಗುರುತಿಸಲಾಗಿದೆ. ಇದರಲ್ಲಿ ಆರು ರೈತರು ಮಾತ್ರ ಪರಿಹಾರ ಪಡೆದಿಲ್ಲ. ಉಪವಿಭಾಗಾ ಧಿಕಾರಿ ಸಭೆ ನಡೆಸಿ ಮನವೊಲಿಸುವ ಪ್ರಯತ್ನ ನಡೆಸಿದ್ದಾರೆ ಎಂದರು.

3500 ಎಕರೆ ಭೂಸ್ವಾಧೀನ: ಭದ್ರಾ ಮೇಲ್ದಂಡೆ ಯೋಜನೆ ಅನುಷ್ಠಾನಕ್ಕೆ 7,012 ಎಕರೆ ಭೂಮಿಯ ಅಗತ್ಯವಿದ್ದು, ಇದರಲ್ಲಿ 3,500 ಎಕರೆ ಭೂಸ್ವಾಧೀನವಾಗಿದೆ. ಇನ್ನೂ 3,512 ಎಕರೆ ಭೂಸ್ವಾಧೀನಕ್ಕೆ ಬಾಕಿ ಇದೆ ಎಂದು ಸಚಿವ ನಾರಾಯಣಸ್ವಾಮಿ ತಿಳಿಸಿದರು.

ಈವರೆಗೆ 4,800 ಕೋಟಿ ರೂ. ಅನುದಾನ ಖರ್ಚಾಗಿದೆ. ಯೋಜನೆ ಅನುಷ್ಠಾನಕ್ಕೆ ಹಣಕಾಸಿನ ತೊಂದರೆ ಇಲ್ಲ. ರಾಜ್ಯ ಸರ್ಕಾರ ಅನುದಾನವನ್ನು ಉದಾರವಾಗಿ ನೀಡಿದೆ. ಅರಣ್ಯ ಪ್ರದೇಶ ಹೊರತುಪಡಿಸಿಉಳಿದೆಡೆಭೂಸ್ವಾಧೀನಕ್ಕೆಯಾವುದೇ
ತೊಂದರೆ ಇಲ್ಲ ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್‌. ಮನ್ನಿಕೇರಿ, ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣ, ಉಪವಿಭಾಗಾಧಿ ಕಾರಿ ಆರ್‌. ಚಂದ್ರಯ್ಯ, ಭದ್ರಾ ಮೇಲ್ದಂಡೆ ಯೋಜನೆಯ ಭೂಸ್ವಾಧೀನ ಅಧಿಕಾರಿಗಳು, ಇಂಜಿನಿಯರ್‌ಗಳು ಹಾಗೂ ವಿವಿಧ ಇಲಾಖೆಗಳಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ರಾಷ್ಟ್ರೀಯಯೋಜನೆ
ಮಾನ್ಯತೆ ಸನ್ನಿಹಿತ
ಭದ್ರಾ ಮೇಲ್ದಂಡೆಗೆ ರಾಷ್ಟ್ರೀಯಯೋಜನೆಯ ಮಾನ್ಯತೆ ಸಿಗುವಕಾಲ ಸನ್ನಿಹಿತವಾಗಿದೆ. ಇದಕ್ಕಾಗಿಹೈಪವರ್‌ಕಮಿಟಿ ರಚನೆ ಆಗಿದೆ. ಅಂತಿಮ ವಾಗಿ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಲಿದೆ. ಮುಂಬರುವ ಜನವರಿ-ಫೆಬ್ರವರಿಯೊಳಗೆ ಭೂಸ್ವಾಧೀನ ಸಮಸ್ಯೆ ಬಗೆಹರಿಯಲಿದೆ. ಭದ್ರಾ ಮೇಲ್ದಂಡೆ ಯೋಜನೆಕಾಮಗಾರಿಗೆ ಈವರೆಗೆ 4800 ಕೋಟಿ ರೂ.ಖರ್ಚಾಗಿದ್ದು, ಭೂಸ್ವಾಧೀನಕ್ಕೆ ಅನುದಾನದ ಸಮಸ್ಯೆ ಇಲ್ಲ ಎಂದು ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ತಿಳಿಸಿದರು.

ಟಾಪ್ ನ್ಯೂಸ್

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.