ಕೋವಿಡ್‌ ಪರಿಹಾರ ಧನ ಹೆಚ್ಚಳಕ್ಕೆ ಒತ್ತಾಯ


Team Udayavani, May 22, 2021, 11:25 AM IST

ಕೋವಿಡ್‌ ಪರಿಹಾರ ಧನ ಹೆಚ್ಚಳಕ್ಕೆ ಒತ್ತಾಯ

ಚಿತ್ರದುರ್ಗ: ಕೋವಿಡ್ 2ನೇ ಅಲೆಯ ಲಾಕ್‌ ಡೌನ್‌ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಘೋಷಣೆ ಮಾಡಿರುವ 3 ಸಾವಿರ ರೂ. ಪರಿಹಾರದ ಬದಲು 10 ಸಾವಿರಕ್ಕೆ ಹೆಚ್ಚಿಸಬೇಕು ಎಂದು ಸಿಐಟಿಯು ನೇತೃತ್ವದಲ್ಲಿ ಕಟ್ಟಡ ಕಾರ್ಮಿಕರು ಜಿಲ್ಲಾ ಕಾರ್ಮಿಕ ಅಧಿಕಾರಿಗೆ ಶುಕ್ರವಾರ ಮನವಿ ಸಲ್ಲಿಸಿದರು.

ರಾಜ್ಯಾದ್ಯಂತ ಕಟ್ಟಡ ಕಾರ್ಮಿಕರು ಮೇ 15 ರಿಂದ ಹೋರಾಟ ನಡೆಸುತ್ತಿದ್ದಾರೆ. ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿಸಿರುವ ಎಲ್ಲಾ ಕಟ್ಟಡ ಕಾರ್ಮಿಕರಿಗೆ ಕೂಡಲೆ ಕೋವಿಡ್‌ ಎರಡನೆ ಅಲೆಯಪರಿಹಾರವಾಗಿ ತಿಂಗಳಿಗೆ ಹತ್ತು ಸಾವಿರ ರೂ.ಗಳನ್ನುಮೂರು ತಿಂಗಳ ಕಾಲ ನೀಡಬೇಕು. ಕಳೆದ ವರ್ಷಘೋಷಿಸಲಾಗಿರುವ ಕೋವಿಡ್‌ ಪರಿಹಾರದ ಹಣಐದು ಸಾವಿರ ರೂ. ಇನ್ನು ಒಂದು ಲಕ್ಷ  ಕಾರ್ಮಿಕರಿಗೆ ತಲುಪಬೇಕಿದೆ ಎಂದರು.

ಕಾರ್ಮಿಕರ ಮಕ್ಕಳ ಶಿಕ್ಷಣ, ವಿವಾಹ, ವೈದ್ಯಕೀಯ ಚಿಕಿತ್ಸೆ, ಧನಸಹಾಯಕ್ಕಾಗಿ ಅರ್ಜಿ ಸಲ್ಲಿಸಲು ಮೇ 30 ರವರೆಗೆ ಕಾಲಾವಕಾಶ ನಿಗದಿಪಡಿಸಿರುವುದನ್ನು ಮುಂದಿನ ಮೂರು ತಿಂಗಳ ಕಾಲ ವಿಸ್ತರಿಸಬೇಕು ಎಂದು ಕಾರ್ಮಿಕ ಅಧಿಕಾರಿಮೂಲಕ ಕಾರ್ಮಿಕ ಸಚಿವ ಶಿವರಾಂ ಹೆಬ್ಟಾರ್‌ಗೆ ಮನವಿ ಮಾಡಲಾಯಿತು.

ಕೋವಿಡ್ ಎರಡನೇ ಅಲೆಗೆ ಹೆದರಿ ಹೊರ ರಾಜ್ಯ ಹಾಗೂ ಹೊರ ಜಿಲ್ಲೆಗಳ ಬಹುತೇಕ ಎಲ್ಲಾ ವಲಸೆ ಕಾರ್ಮಿಕರು ರಾಜಧಾನಿ ಬೆಂಗಳೂರು ಮತ್ತಕರ್ನಾಟಕ ಇತರೆ ಭಾಗಗಳಿಂದ ಸ್ವಂತ ಊರುಗಳಿಗೆ ತೆರಳಿದ್ದು, ಇನ್ನು ಯಾರಾದರೂ ಉಳಿದುಕೊಂಡಿದ್ದರೆ ಅಂತಹ ಕಾರ್ಮಿಕ ಕುಟುಂಬಕ್ಕೆ ಉಚಿತ ವಸತಿ,ಊಟ ಮತ್ತು ಊರುಗಳಿಗೆ ತೆರಳಲು ಸಾರಿಗೆ ಸೌಲಭ್ಯ ಕಲ್ಪಿಸಬೇಕು. ಈ ಸಂಬಂಧ ರಾಜ್ಯದ ಬಿಲ್ಡರ್‌ಅಸೋಸಿಯೇಷನ್‌ ಜತೆ ಮಾತುಕತೆ ನಡೆಸಬೇಕು. ಮೊದಲನೆ ಹಂತದ ಕೋವಿಡ್‌ ಸಂದರ್ಭದಲ್ಲಿವಿತರಿಸಲಾದ ರೇಷನ್‌ ಕಿಟ್‌ಗಳು ನಿಜವಾದ ಕಟ್ಟಡ ಮತ್ತು ವಲಸೆ ಕಾರ್ಮಿಕರುಗಳಿಗೆ ತಲುಪಿಲ್ಲದಿರುವ ಬಗ್ಗೆ ಈ ಹಿಂದೆಯೆ ದೂರುಗಳನ್ನು ನೀಡಿದ್ದೇವೆ.

ರೇಷನ್‌ ಕಿಟ್‌ಗಳು ಕಳಪೆಯಿಂದ ಕೂಡಿದ್ದು, ಬಳಕೆಗೆ ಯೋಗ್ಯವಾಗಿಲ್ಲ. ಖರೀದಿಯಲ್ಲಿ ಸಾಕಷ್ಟುಅವ್ಯವಹಾರಗಳು ನಡೆದಿದ್ದು, ಸಂಪೂರ್ಣ ತನಿಖೆಯಾಗಬೇಕು. ಕೇಂದ್ರ ಸರ್ಕಾರದಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯಕಲ್ಯಾಣ ಮಂಡಳಿ ಕಿಟ್‌ಗಳ ರೂಪದಲ್ಲಿ ವಿತರಣೆಮಾಡುವುದನ್ನು ನಿರ್ಬಂಧಿಸಿದ್ದರೂ ಮಂಡಳಿ ಕಿಟ್‌ಗಳ ವಿತರಣೆಗೆ ಟೆಂಡರ್‌ ಕರೆದಿರುವುದನ್ನುರದ್ದುಪಡಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಸಿಐಟಿಯು ಜಿಲ್ಲಾ ಸಹಸಂಚಾಲಕ ಸಿ.ಕೆ.ಗೌಸ್‌ಪೀರ್‌, ಕಟ್ಟಡ ಕಾರ್ಮಿಕರ ಸಮಿತಿಜಿಲ್ಲಾಧ್ಯಕ್ಷ ಬಿ.ಸಿ.ನಾಗರಾಜಚಾರಿ ಮತ್ತಿತರರು ಇದ್ದರು

ಟಾಪ್ ನ್ಯೂಸ್

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.