ಕೋವಿಡ್ ಪರಿಹಾರ ಧನ ಹೆಚ್ಚಳಕ್ಕೆ ಒತ್ತಾಯ
Team Udayavani, May 22, 2021, 11:25 AM IST
ಚಿತ್ರದುರ್ಗ: ಕೋವಿಡ್ 2ನೇ ಅಲೆಯ ಲಾಕ್ ಡೌನ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಘೋಷಣೆ ಮಾಡಿರುವ 3 ಸಾವಿರ ರೂ. ಪರಿಹಾರದ ಬದಲು 10 ಸಾವಿರಕ್ಕೆ ಹೆಚ್ಚಿಸಬೇಕು ಎಂದು ಸಿಐಟಿಯು ನೇತೃತ್ವದಲ್ಲಿ ಕಟ್ಟಡ ಕಾರ್ಮಿಕರು ಜಿಲ್ಲಾ ಕಾರ್ಮಿಕ ಅಧಿಕಾರಿಗೆ ಶುಕ್ರವಾರ ಮನವಿ ಸಲ್ಲಿಸಿದರು.
ರಾಜ್ಯಾದ್ಯಂತ ಕಟ್ಟಡ ಕಾರ್ಮಿಕರು ಮೇ 15 ರಿಂದ ಹೋರಾಟ ನಡೆಸುತ್ತಿದ್ದಾರೆ. ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿಸಿರುವ ಎಲ್ಲಾ ಕಟ್ಟಡ ಕಾರ್ಮಿಕರಿಗೆ ಕೂಡಲೆ ಕೋವಿಡ್ ಎರಡನೆ ಅಲೆಯಪರಿಹಾರವಾಗಿ ತಿಂಗಳಿಗೆ ಹತ್ತು ಸಾವಿರ ರೂ.ಗಳನ್ನುಮೂರು ತಿಂಗಳ ಕಾಲ ನೀಡಬೇಕು. ಕಳೆದ ವರ್ಷಘೋಷಿಸಲಾಗಿರುವ ಕೋವಿಡ್ ಪರಿಹಾರದ ಹಣಐದು ಸಾವಿರ ರೂ. ಇನ್ನು ಒಂದು ಲಕ್ಷ ಕಾರ್ಮಿಕರಿಗೆ ತಲುಪಬೇಕಿದೆ ಎಂದರು.
ಕಾರ್ಮಿಕರ ಮಕ್ಕಳ ಶಿಕ್ಷಣ, ವಿವಾಹ, ವೈದ್ಯಕೀಯ ಚಿಕಿತ್ಸೆ, ಧನಸಹಾಯಕ್ಕಾಗಿ ಅರ್ಜಿ ಸಲ್ಲಿಸಲು ಮೇ 30 ರವರೆಗೆ ಕಾಲಾವಕಾಶ ನಿಗದಿಪಡಿಸಿರುವುದನ್ನು ಮುಂದಿನ ಮೂರು ತಿಂಗಳ ಕಾಲ ವಿಸ್ತರಿಸಬೇಕು ಎಂದು ಕಾರ್ಮಿಕ ಅಧಿಕಾರಿಮೂಲಕ ಕಾರ್ಮಿಕ ಸಚಿವ ಶಿವರಾಂ ಹೆಬ್ಟಾರ್ಗೆ ಮನವಿ ಮಾಡಲಾಯಿತು.
ಕೋವಿಡ್ ಎರಡನೇ ಅಲೆಗೆ ಹೆದರಿ ಹೊರ ರಾಜ್ಯ ಹಾಗೂ ಹೊರ ಜಿಲ್ಲೆಗಳ ಬಹುತೇಕ ಎಲ್ಲಾ ವಲಸೆ ಕಾರ್ಮಿಕರು ರಾಜಧಾನಿ ಬೆಂಗಳೂರು ಮತ್ತಕರ್ನಾಟಕ ಇತರೆ ಭಾಗಗಳಿಂದ ಸ್ವಂತ ಊರುಗಳಿಗೆ ತೆರಳಿದ್ದು, ಇನ್ನು ಯಾರಾದರೂ ಉಳಿದುಕೊಂಡಿದ್ದರೆ ಅಂತಹ ಕಾರ್ಮಿಕ ಕುಟುಂಬಕ್ಕೆ ಉಚಿತ ವಸತಿ,ಊಟ ಮತ್ತು ಊರುಗಳಿಗೆ ತೆರಳಲು ಸಾರಿಗೆ ಸೌಲಭ್ಯ ಕಲ್ಪಿಸಬೇಕು. ಈ ಸಂಬಂಧ ರಾಜ್ಯದ ಬಿಲ್ಡರ್ಅಸೋಸಿಯೇಷನ್ ಜತೆ ಮಾತುಕತೆ ನಡೆಸಬೇಕು. ಮೊದಲನೆ ಹಂತದ ಕೋವಿಡ್ ಸಂದರ್ಭದಲ್ಲಿವಿತರಿಸಲಾದ ರೇಷನ್ ಕಿಟ್ಗಳು ನಿಜವಾದ ಕಟ್ಟಡ ಮತ್ತು ವಲಸೆ ಕಾರ್ಮಿಕರುಗಳಿಗೆ ತಲುಪಿಲ್ಲದಿರುವ ಬಗ್ಗೆ ಈ ಹಿಂದೆಯೆ ದೂರುಗಳನ್ನು ನೀಡಿದ್ದೇವೆ.
ರೇಷನ್ ಕಿಟ್ಗಳು ಕಳಪೆಯಿಂದ ಕೂಡಿದ್ದು, ಬಳಕೆಗೆ ಯೋಗ್ಯವಾಗಿಲ್ಲ. ಖರೀದಿಯಲ್ಲಿ ಸಾಕಷ್ಟುಅವ್ಯವಹಾರಗಳು ನಡೆದಿದ್ದು, ಸಂಪೂರ್ಣ ತನಿಖೆಯಾಗಬೇಕು. ಕೇಂದ್ರ ಸರ್ಕಾರದಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯಕಲ್ಯಾಣ ಮಂಡಳಿ ಕಿಟ್ಗಳ ರೂಪದಲ್ಲಿ ವಿತರಣೆಮಾಡುವುದನ್ನು ನಿರ್ಬಂಧಿಸಿದ್ದರೂ ಮಂಡಳಿ ಕಿಟ್ಗಳ ವಿತರಣೆಗೆ ಟೆಂಡರ್ ಕರೆದಿರುವುದನ್ನುರದ್ದುಪಡಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಸಿಐಟಿಯು ಜಿಲ್ಲಾ ಸಹಸಂಚಾಲಕ ಸಿ.ಕೆ.ಗೌಸ್ಪೀರ್, ಕಟ್ಟಡ ಕಾರ್ಮಿಕರ ಸಮಿತಿಜಿಲ್ಲಾಧ್ಯಕ್ಷ ಬಿ.ಸಿ.ನಾಗರಾಜಚಾರಿ ಮತ್ತಿತರರು ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಮಲ್ಲಾರು : ಗಾಳಿ ಮಳೆಗೆ ಹಾರಿ ಹೋದ ಶಾಲೆಯ ಮೇಲ್ಛಾವಣಿ, ವಿದ್ಯಾರ್ಥಿಗಳು ಕಂಗಾಲು
ಬಾಳೆ ಕೃಷಿ ಮಾಡಿ ಸೈ ಎನಿಸಿಕೊಂಡಿರುವ ಕಳಸದ ಪ್ರಕಾಶ್ ಕುಮಾರ್
ಕಾಪು ತಾಲೂಕಿನಾದ್ಯಂತ ಭಾರೀ ಮಳೆ ತಗ್ಗು ಪ್ರದೇಶಗಳಲ್ಲಿ ನೆರೆ ಭೀತಿ
ಮಹಾ ತಿರುವು ; ಏಕನಾಥ್ ಶಿಂಧೆಗೆ ಮುಖ್ಯಮಂತ್ರಿ ಹುದ್ದೆ ಬಿಟ್ಟು ಕೊಟ್ಟ ಬಿಜೆಪಿ
ಸುರತ್ಕಲ್ ಸುತ್ತಮುತ್ತ 15 ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು
ಹೊಸ ಸೇರ್ಪಡೆ
ವಿವಿದ ಬೇಡಿಕೆಗೆ ಒತ್ತಾಯಿಸಿ ಕಾರ್ಮಿಕರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭ
ಶೀತಲ್ ಶೆಟ್ಟಿ ನಿರ್ದೇಶನದ ಮರ್ಡರ್ ಮಿಸ್ಟ್ರಿ ‘ವಿಂಡೋಸೀಟ್’ ಜರ್ನಿ ಶುರು
ಮಣಿಪುರ: ಧಾರಾಕಾರ ಮಳೆಗೆ ಭಾರೀ ಭೂಕುಸಿತ-14 ಮಂದಿ ಸಾವು, 60 ಜನರು ಜೀವಂತ ಸಮಾಧಿ?
ವಿದ್ಯುತ್ ಕಂಬಕ್ಕೆ ಬಿಯರ್ ಸಾಗಿಸುತ್ತಿದ್ದ ಲಾರಿ ಡಿಕ್ಕಿ; ಚಾಲಕ ಸ್ಥಳದಲ್ಲೇ ಸಾವು
ಸಾಮಾನ್ಯ ಮನುಷ್ಯನ ಅಸಾಮಾನ್ಯ ಶಕ್ತಿ: ಇಂದಿನಿಂದ ‘ಬೈರಾಗಿ’ ದರ್ಶನ