ಪರಿಹಾರ ಹಣ ಎಚ್ಚರಿಕೆಯಿಂದ ಬಳಸಿ: ಕವಿತಾ


Team Udayavani, Aug 30, 2020, 5:20 PM IST

CD-TDY-1

ನಾಯಕನಹಟ್ಟಿ: ದೌರ್ಜನ್ಯ ಪರಿಹಾರದ ಹಣವನ್ನು ಎಚ್ಚರಿಕೆಯಿಂದ ಬಳಸಿಕೊಳ್ಳಿ ಎಂದು ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ ಹೇಳಿದರು.

ದುಷ್ಕರ್ಮಿಗಳಿಂದ ಕೊಲೆಗೀಡಾದವರ ಕುಟುಂಬಗಳಿಗೆ ಶನಿವಾರ 12.37 ಲಕ್ಷ ರೂ.ಗಳ ಚೆಕ್‌ ವಿತರಿಸಿ ಅವರು ಮಾತನಾಡಿದರು. ಎಸ್ಸಿ-ಎಸ್ಟಿ ದೌರ್ಜನ್ಯ ಕಾಯ್ದೆಯಡಿ ಪ್ರತಿ ಕುಟುಂಬಕ್ಕೆ 8.25 ಲಕ್ಷ ರೂ. ನೀಡಲಾಗುವುದು. ಈ ಪ್ರಕರಣದಲ್ಲಿ ಮೂವರು ಹತ್ಯೆಗೀಡಾಗಿದ್ದಾರೆ. ಆದ್ದರಿಂದ ಮೂರು ಕುಟುಂಬಗಳಿಗೆ ಒಟ್ಟು 12,37,500 ರೂ.ಗಳನ್ನು ನೀಡಲಾಗುವುದು. ಪ್ರತಿ ಕುಟುಂಬಕ್ಕೆ ನೀಡಲಾಗುವ 8.25 ಲಕ್ಷ ರೂ.ಗಳಲ್ಲಿ ಠಾಣೆಯಲ್ಲಿ ಎಫ್‌ಐಆರ್‌ ತಕ್ಷಣ ಇದರಲ್ಲಿ ಅರ್ಧ ಹಣವನ್ನು ಮೊದಲ ಕಂತಿನಲ್ಲಿ ನೀಡಲಾಗುವುದು. ನ್ಯಾಯಾಲಯದಲ್ಲಿ ಪ್ರಕರಣ ರುಜುವಾತಾದ ನಂತರ ಉಳಿದ ಹಣವನ್ನು ನೀಡಲಾಗುವುದು. ದೌರ್ಜನ್ಯಕ್ಕೆ ಒಳಗಾದ ಕುಟುಂಬಗಳ ಖಾತೆಗೆ ನೇರವಾಗಿ ಹಣ ವರ್ಗಾವಣೆಯಾಗಲಿದ್ದು, ಈ ಬಗ್ಗೆ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಕ್ರಮ ಕೈಗೊಳ್ಳಲಿದ್ದಾರೆ ಎಂದರು.

ಒಮ್ಮೆಲೆ ದೊಡ್ಡ ಪ್ರಮಾಣದ ಹಣ ಬಂದ ತಕ್ಷಣ ಅಪಾರ ಪ್ರಮಾಣದ ಬಂಧು ಮಿತ್ರರು ಸೇರುತ್ತಾರೆ. ಹಣವನ್ನು ಬೇರೆಯವರಿಗೆ ನೀಡಿ ಕಳೆದುಕೊಳ್ಳಬಾರದು. ಹಣವನ್ನು ಪೋಲು ಮಾಡದೆ ದುಡಿಮೆಯ ಬಂಡವಾಳವನ್ನಾಗಿ ಮಾಡಿಕೊಳ್ಳಬೇಕು. ಇಲ್ಲವಾದರೆ ಬ್ಯಾಂಕ್‌ನಲ್ಲಿ ಸುರಕ್ಷಿತವಾಗಿಟ್ಟುಕೊಂಡು ಜೀವನ ನಡೆಸಬೇಕು ಎಂದು ಕಿವಿಮಾತು ಹೇಳಿದರು.

ಸರ್ಕಾರದಿಂದ ದೊರೆಯುವ ಇತರೆ ಎಲ್ಲ ಸೌಲಭ್ಯಗಳನ್ನು ಒದಗಿಸಲಾಗುವುದು. ಇದೀಗ ಕಂದಾಯ ಇಲಾಖೆಯಿಂದ ಅಂತ್ಯಸಂಸ್ಕಾರಕ್ಕೆ ನೀಡುವ ತಲಾ 5 ಸಾವಿರ ರೂ. ಚೆಕ್‌ ನೀಡಲಾಗಿದೆ. ಕುಟುಂಬದಲ್ಲಿನ ಸದಸ್ಯರ ಸಾವಿನ ನೋವನ್ನು ಭರಿಸಲು ಸಾಧ್ಯವಿಲ್ಲ. ಇದು ಕುಟುಂಬದಲ್ಲಿ ಶಾಶ್ವತವಾಗಿ ಉಳಿಯುತ್ತದೆ. ಇದಕ್ಕೆ ಪರ್ಯಾಯವಾಗಿ ಯಾವುದನ್ನು ನೀಡಲು ಸಾಧ್ಯವಿಲ್ಲ. ಆದರೆ ಮಾನವೀಯ ದೃಷ್ಟಿಯಿಂದ ಸರ್ಕಾರ ನೆರವು ನೀಡುತ್ತಿದೆ ಎಂದು ತಿಳಿಸಿದರು.

ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಮಂಜುಳಾ ಮಾತನಾಡಿ, ಎಸ್ಸಿ-ಎಸ್ಟಿ ದೌರ್ಜನ್ಯ ಪ್ರಕರಣದಡಿಯಲ್ಲಿ ಕುಟುಂಬಕ್ಕೆ ಪರಿಹಾರ ನೀಡಲಾಗುತ್ತಿದ್ದು, ವಿದ್ಯಾವಂತರಿದ್ದಲ್ಲಿ ಸರ್ಕಾರಿ ನೌಕರಿ ನೀಡಲಾಗುವುದು. ಅವಿದ್ಯಾವಂತರಾಗಿದ್ದರೆ ಮನೆ ಹಾಗೂ ಜಮೀನು ಎರಡನ್ನೂ ಒದಗಿಸಲು ಅವಕಾಶವಿದೆ. ಇದೀಗ ಎರಡು ಕುಟುಂಬಗಳ ಬ್ಯಾಂಕ್‌ ಖಾತೆಗೆ ಪರಿಹಾರದ ಹಣವನ್ನು ವರ್ಗಾವಣೆ ಮಾಡಲಾಗುವುದು. ಕುಟುಂಬದ ಜನರು ಅವಿದ್ಯಾವಂತರಾಗಿದ್ದರೆ ನಾಲ್ಕು ಎಕರೆ ಸರ್ಕಾರಿ ಜಮೀನು ನೀಡಲಾಗುವುದು. ಸರ್ಕಾರಿ ಜಮೀನು ಲಭ್ಯವಿಲ್ಲವಾದರೆ ಖಾಸಗಿಯಿಂದ ಎರಡು ಎಕರೆ ಖರೀದಿಸಿ ಕೊಡಲಾಗುವುದು. ಮೂರು ಕುಟುಂಬಗಳಿಗೆ 4,700 ರೂ. ಪಿಂಚಣಿಯನ್ನೂ ನೀಡಲಾಗುವುದು.ಈ ಎಲ್ಲಾ ಸೌಲಭ್ಯ ಪಡೆಯಲು ಈ ಪ್ರಕರಣ ನ್ಯಾಯಾಲಯದಲ್ಲಿ ರುಜುವಾತಾಗಬೇಕು. ಮೃತಪಟ್ಟ ಇಬ್ಬರ ಕುಟುಂಬದವರು ಈಗಾಗಲೇ ಖಾತೆಯ ಸಂಖ್ಯೆಯನ್ನು ನೀಡಿದ್ದಾರೆ. ಉಳಿದ ಒಬ್ಬರು ಬ್ಯಾಂಕ್‌ ಖಾತೆ ನೀಡಬೇಕಾಗಿದೆ ಎಂದರು.

ತಹಶೀಲ್ದಾರ್‌ ಎಂ. ಮಲ್ಲಿಕಾರ್ಜುನ, ಪಪಂ ಸದಸ್ಯ ಎನ್‌. ಮಹಾಂತಣ್ಣ, ಬಸಣ್ಣ, ರಾಜಸ್ವ ನಿರೀಕ್ಷಕ ಚೇತನ್‌, ಗ್ರಾಮಲೆಕ್ಕಾಧಿಕಾರಿ ಉಮಾ, ಪಿ. ಶಿವಣ್ಣ, ಎಂ.ವೈ.ಟಿ. ಸ್ವಾಮಿ, ಕೌಸರ್‌ ಇತರರು ಇದ್ದರು.

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.