2 ಸಚಿವ ಸ್ಥಾನ ನೀಡದಿದ್ರೆ ಸರ್ಕಾರದ ವಿರುದ್ಧ ಮತ
Team Udayavani, Jul 23, 2018, 7:00 AM IST
ಚಿತ್ರದುರ್ಗ: ರಾಜ್ಯ ಸಮ್ಮಿಶ್ರ ಸರ್ಕಾರದಲ್ಲಿ ವಾಲ್ಮೀಕಿ ಸಮುದಾಯಕ್ಕೆ ಇನ್ನೂ ಎರಡು ಸಚಿವ ಸ್ಥಾನ ನೀಡಬೇಕು. ಇಲ್ಲದಿದ್ದರೆ ಲೋಕಸಭಾ ಚುನಾವಣೆಯಲ್ಲಿ ಸರ್ಕಾರದ ವಿರುದ್ಧ ಮತ ಚಲಾಯಿಸುತ್ತೇವೆ ಎಂದು ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಗುಡುಗಿದರು.
ನಗರದಲ್ಲಿ ವಾಲ್ಮೀಕಿ ಸಮುದಾಯದಿಂದ ಹಮ್ಮಿಕೊಂಡಿದ್ದ ಪ್ರತಿಭಟನಾ ಸಮಾವೇಶದ ಸಾನ್ನಿಧ್ಯ ವಹಿಸಿ ಮಾತನಾಡಿದರು. ನಮ್ಮ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸದೇ ಇದ್ದಲ್ಲಿ ಸರ್ಕಾರ ಬೀಳಿಸುವ ಕೆಲಸ ಮಾಡಲಾಗುತ್ತದೆ. ರಾಜ್ಯದ 27 ಲೋಕಸಭಾ ಕ್ಷೇತ್ರಗಳಲ್ಲಿ ವಾಲ್ಮೀಕಿ ಸಮುದಾಯ ನಿರ್ಣಾಯಕವಾಗಿದ್ದು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಈ ಎಲ್ಲ ಕ್ಷೇತ್ರಗಳಲ್ಲಿ ಸರ್ಕಾರದ ವಿರುದ್ಧ ಮತ ಚಲಾಯಿಸಬೇಕಾಗುತ್ತದೆ ಎಂದರು. ಈ ಹಿಂದಿನ ಸರ್ಕಾರ ವಾಲ್ಮೀಕಿ ಸಮುದಾಯದ ಹಿತ ಕಾಯದೇ ಇದ್ದುದರಿಂದ ವಿಧಾನಸಭಾ ಚುನಾವಣೆಯಲ್ಲಿ ಅದರ ಪರಿಣಾಮ ಅನುಭವಿಸಿದೆ. ಈಗ ಮತ್ತೆ ಅದೇ ಕೆಲಸ ಆಗಬಾರದು ಎಂದು ಎಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…
ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್ಚಂದ್ರ ಅವರಿಂದ ಚಿಕಿತ್ಸೆ
Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ
Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…
LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ