ಮುಳುಗುತ್ತಿದ್ದ ಪಕ್ಷ ಉಳಿಸಿದ್ದೇವೆ: ಎಚ್ಡಿಕೆಗೆ ಶ್ರೀರಾಮುಲು ಟಾಂಗ್
Team Udayavani, May 27, 2018, 6:25 AM IST
ನಾಯಕನಹಟ್ಟಿ: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ವಿಧಾನಸಭೆಯಲ್ಲಿ ಬಿಜೆಪಿ ಬೆಳೆಯಲು
ನಾನು ಕಾರಣ ಎಂಬ ಹೇಳಿಕೆ ನೀಡಿರುವುದು ಸರಿಯಲ್ಲ.
ಜೆಡಿಎಸ್ ಮುಳುಗುತ್ತಿದ್ದ ಸಮಯದಲ್ಲಿ ನಾವು ಆ ಪಕ್ಷಕ್ಕೆ ಮುಖ್ಯಮಂತ್ರಿ ಸ್ಥಾನವನ್ನು ನೀಡಿದ್ದೇವೆ ಎಂದು ಮೊಳಕಾಲ್ಮೂರು ಶಾಸಕ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ಶ್ರೀರಾಮುಲು ಟೀಕಿಸಿದ್ದಾರೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಧಿಕಾರಕ್ಕೆ ಅಂಟಿಕೊಂಡಿಲ್ಲ. ಅತಿ ಹೆಚ್ಚು,
104 ಸ್ಥಾನಗಳನ್ನು ಪಡೆದಿದ್ದೇವೆ.
ಹೀಗಿದ್ದರೂ ಕಾಂಗ್ರೆಸ್ ಹಾಗೂ ಜೆಡಿಎಸ್ ಅಪವಿತ್ರ ಮೈತ್ರಿ ಮಾಡಿಕೊಂಡಿವೆ. ನಾವು ಪ್ರತಿಪಕ್ಷದಲ್ಲಿ ಕುಳಿತು ಜನರ ಪರವಾಗಿ ಹೋರಾಟ ನಡೆಸುತ್ತೇವೆ. ಕುಮಾರ ಸ್ವಾಮಿಯವರು ವಿಧಾನಸಭೆಯಲ್ಲಿ ಬಿಜೆಪಿ ಬೆಳೆಯಲು ನಾನು ಕಾರಣ ಎಂಬ ಹೇಳಿಕೆ ನೀಡಿರುವುದು ಸರಿಯಲ್ಲ. ಜೆಡಿಎಸ್ ಮುಳುಗುತ್ತಿದ್ದ ಸಮಯದಲ್ಲಿ ನಾವು ಆ ಪಕ್ಷಕ್ಕೆ ಮುಖ್ಯಮಂತ್ರಿ ಸ್ಥಾನವನ್ನು ನೀಡಿದ್ದೇವೆ.
ನಮ್ಮ ಪಕ್ಷ ಬೆಂಬಲ ನೀಡದಿದ್ದರೆ ಅಂದು ಅವರು ಮುಖ್ಯಮಂತ್ರಿ ಯಾಗುತ್ತಿರಲಿಲ್ಲ ಎಂಬುದನ್ನು ನೆನಪಿನಲ್ಲಿಟ್ಟು ಕೊಳ್ಳಬೇಕು ಎಂದು ಕುಟುಕಿದರು.
ತೃತೀಯ ರಂಗದ ಮುಖಂಡರು ಅಧಿಕಾರ ಸಿಗುವ ಸಂದರ್ಭದಲ್ಲಿ ಮಾತ್ರ ಇರುತ್ತಾರೆ, ಅಧಿಕಾರ ದೊರೆಯುವುದಿಲ್ಲವೆಂದು ಖಾತ್ರಿಯಾದ ತಕ್ಷಣ ಜಾಗ ಖಾಲಿ ಮಾಡುತ್ತಾರೆ. ತೃತೀಯ ರಂಗದ ಮುಖಂಡರು ಮಳೆಗಾಲದ ನಾಯಿಕೊಡೆಗಳಿದ್ದಂತೆ (ಅಣಬೆ)ಎಂದು ಪುನರುಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ