ಒಳಚರಂಡಿ ಕಾಮಗಾರಿ ಮುಗಿಯೋದ್ಯಾವಾಗ?


Team Udayavani, Jun 10, 2018, 5:27 PM IST

cta-2.jpg

ಚಿತ್ರದುರ್ಗ: ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅನುಷ್ಠಾನಗೊಳಿಸಿರುವ ಸಮಗ್ರ ಒಳಚರಂಡಿ ಯೋಜನೆ ಕಾಮಗಾರಿ ಕುಂಟುತ್ತಾ ಸಾಗಿದೆ. ಹೀಗಾಗಿ ಪ್ರಗತಿ ಸಾಧಿಸಲು ಇನ್ನೂ ಸಾಧ್ಯವಾಗಿಲ್ಲ.

2001ರ ಜನಗಣತಿ ಪ್ರಕಾರ ಜಿಲ್ಲೆಯ ಜನಸಂಖ್ಯೆ 1,25,170 ಇದೆ. 2043ನೇ ಸಾಲಿನ ಅಂದಾಜು ಜನಸಂಖ್ಯೆ 3,69,600 ಆಧರಿಸಿ ಯೋಜನೆ ತಯಾರಿಸಲಾಗಿದೆ. ತಲಾವಾರು 110 ಲೀಟರ್‌ನಂತೆ ಮತ್ತು 2028ಕ್ಕೆ 28.84 ದಶಲಕ್ಷ ಲೀಟರ್‌, 2043ಕ್ಕೆ 40.79 ದಶಲಕ್ಷ ಲೀಟರ್‌ ಎಂದು ಅಂದಾಜಿಸಿ ನಗರದ ಒಳಚರಂಡಿ ಯೋಜನೆ ಕಾಮಗಾರಿಯನ್ನು ನಿರ್ವಹಿಸಲಾಗುತ್ತಿದೆ.

ಚಿತ್ರದುರ್ಗ ನಗರ, ಮೆದೇಹಳ್ಳಿ, ಪಿಳ್ಳೆಕೇರನಹಳ್ಳಿ, ಮಠದ ಕುರುಬರಹಟ್ಟಿ, ಗಾರೆಹಟ್ಟಿ ಒಳಗೊಂಡಂತೆ ಐದು ವಲಯಗಳನ್ನಾಗಿ ವಿಂಗಡಿಸಲಾಗಿದೆ. ಒಳಚರಂಡಿ ಕಾಮಗಾರಿಯ ಮ್ಯಾನ್‌ಹೋಲ್‌ ನಿರ್ಮಾಣ ಮತ್ತು ಗ್ರಾಮಸಾರ ಕೊಳವೆ ಮಾರ್ಗಗಳ ಅಳವಡಿಕೆಗೆ ಟೆಂಡರ್‌ ಮೂಲಕ ಮೆ| ಶುಭಾ ಸೇಲ್ಸ್‌ ಬೆಂಗಳೂರು ಇವರಿಗೆ ವಹಿಸಿಕೊಡಲಾಗಿದೆ. ಆದರೆ ಮ್ಯಾನ್‌ಹೋಲ್‌ ಮತ್ತು ಗ್ರಾಮಸಾರ ಕೊಳವೆಗಳ ನಿಮಾರ್ಣ ಕಾರ್ಯ ವಿವಿಧ
ವಾರ್ಡ್‌ಗಳಲ್ಲಿ ಪ್ರಗತಿಯಲ್ಲಿದೆ ಎನ್ನುವುದು ಕಡತಕ್ಕಷ್ಟೇ ಸೀಮಿತವಾಗಿದೆ. 

2015ರಲ್ಲೇ ಪೂರ್ಣಗೊಳ್ಳಬೇಕಿತ್ತು: ಚಿತ್ರದುರ್ಗ ನಗರದ ಸಮಗ್ರ ಒಳಚರಂಡಿ ಯೋಜನೆಯನ್ನು ರಾಜ್ಯ ಸರ್ಕಾರ ಶೇ. 70, ಆರ್ಥಿಕ ಸಂಸ್ಥೆ ಶೇ. 20 ಹಾಗೂ ಸ್ಥಳೀಯ ನಗರಸಭೆ ಶೇ. 10 ಅನುದಾನದಂತೆ 78.47 ಕೋಟಿ ರೂ.ಗಳಲ್ಲಿ ಅನುಷ್ಠಾನಗೊಳಿಸಲಾಗಿದೆ. 2015ರ ಡಿಸೆಂಬರ್‌ ಅಂತ್ಯದ ವೇಳೆಗೆ ಕಾಮಗಾರಿ ಪೂರ್ಣಗೊಳ್ಳಬೇಕಿತ್ತು. ಆದರೆ ಕಾಮಗಾರಿ ಅವಧಿ ಪೂರ್ಣಗೊಂಡು ಮೂರು ವರ್ಷ ಕಳೆದರೂ ಸಮಗ್ರ ಒಳಚರಂಡಿ ಯೋಜನೆ ಕಾಮಗಾರಿ ಪೂರ್ಣಗೊಳ್ಳದೇ ಇರುವುದರಿಂದ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ.

ಚಿತ್ರದುರ್ಗ ನಗರದಲ್ಲಿ 11,840 ಮ್ಯಾನ್‌ ಹೋಲ್‌(ಆಳ ಗುಂಡಿಗಳು) ನಿರ್ಮಾಣ ಮಾಡಬೇಕಿದ್ದು, ಕೇವಲ 8818 ಮ್ಯಾನ್‌ಹೋಲ್‌ ನಿರ್ಮಾಣ ಮಾಡಲಾಗಿದೆ. ಆಂತರಿಕ ಅಥವಾ ಔಟ್‌ ಫಾಲ್‌ ಕೊಳವೆ ಮಾರ್ಗಗಳ ಉದ್ದ 284 ಕಿಮೀ ಇದ್ದು ಇದುವರೆಗೆ 252 ಕಿಮೀ ಮಾರ್ಗದಲ್ಲಿ ಪೈಪ್‌ ಲೈನ್‌ ಹಾಕಲಾಗಿದೆ. ನಗರದ 16,500 ಮನೆಗಳಿಗೆ ಯುಜಿಡಿ ಸಂಪರ್ಕ ಕಲ್ಪಿಸಬೇಕಿದ್ದು ಕೇವಲ 5000 ಮನೆಗಳಿಗೆ ಸಂಪರ್ಕ ಕಲ್ಪಿಸಲಾಗಿದೆ. ಇನ್ನುಳಿದ 11,500 ಮನೆಗಳಿಗೆ ಮಲಿನ ನೀರಿನ ಪೈಪ್‌ಲೈನ್‌ ಸಂಪರ್ಕ ಕಲ್ಪಿಸಬೇಕಾಗಿದೆ. ಇದಕ್ಕಾಗಿ 3022 ಮ್ಯಾನ್‌ ಹೋಲ್‌(ಆಳ ಗುಂಡಿಗಳು)ತೋಡಿ ಪೈಪ್‌ಲೈನ್‌ ಸಂಪರ್ಕ ಕಲ್ಪಿಸಬೇಕಿದೆ. ಇಡೀ ಯೋಜನೆಯಲ್ಲಿ 15 ಕಡೆಗಳಲ್ಲಿ ಕೊಳವೆ ಮಾರ್ಗವಿದ್ದು, ಸ್ಥಳ ತಕರಾರು ಇರುವುದರಿಂದ ಕಾಮಗಾರಿ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ. ಇದರ ಜೊತೆಗೆ ಮಾರುತಿ ನಗರದಲ್ಲಿ 150 ಮೀಟರ್‌ ಇದ್ದದ ಮುಖ್ಯ ಕೊಳವೆ ಮಾರ್ಗ ಅಳವಡಿಸಬೇಕಾಗಿದ್ದು ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ವಾಜ್ಯ ನಡೆಯುತ್ತಿದೆ.

ಯುಜಿಡಿ ಯೋಜನೆಯಡಿ ಬಾಕಿ ಇರುವ ಮೂರು ವೆಟ್‌ವೆಲ್‌ಗ‌ಳಿಗೆ ಪಂಪಿಂಗ್‌ ಮೆಶಿನರಿ ಕಾಮಗಾರಿಗೆ ಕಳೆ ಮಾರ್ಚ್‌ 7ರಂದು ಮೇ|| ಎಸ್‌.ಬಿ.ಎಂ ಪ್ರಾಜೆಕ್ಟ್ ಪುಣೆ ಇವರೊಂದಿಗೆ ಗುತ್ತಿಗೆ ಮಾಡಿಕೊಳ್ಳಲಾಗಿದ್ದು ಕಾಮಗಾರಿ ಆರಂಭವಾಗಬೇಕಿದೆ. ಅಲ್ಲದೆ 11 ಕೆವಿ ತ್ವರಿತ ವಿದ್ಯುತ್‌ ಮಾರ್ಗಗಳನ್ನು ಕಾಮಗಾರಿಗಳಿಗೆ ಟೆಂಡರ್‌ ಕರೆಯಲಾಗಿದ್ದು ಗುತ್ತಿಗೆದಾರರನ್ನು ನೇಮಕ ಮಾಡಲಾಗಿದೆ. ಮುಂದಿನ ವಾರ ಅಂದರೆ ಜೂನ್‌ 16ರಂದು ಕರಾರು ಒಪ್ಪಂದ ಮಾಡಿಕೊಂಡು ಆಗಸ್ಟ್‌ನಲ್ಲಿ ಕಾಮಗಾರಿ ಆರಂಭಿಸಲು ಉದ್ದೇಶಿಸಲಾಗಿದೆ.

ಯೋಜನಾ ವೆಚ್ಚದಲ್ಲೂ ಏರಿಕೆ: 2011ರಲ್ಲಿ ಯುಜಿಡಿ ಯೋಜನೆಗೆ 78.47 ಕೋಟಿ ರೂ.ಗೆ ಟೆಂಡರ್‌ ಕರೆದು ಕಾಮಗಾರಿ ಆರಂಭಿಸಲಾಗಿತ್ತು. ಪೂರ್ಣಗೊಳಿಸಲು ವಿಳಂಬ ಮಾಡಿದ್ದರಿಂದ ಯೋಜನಾ ವೆಚ್ಚದಲ್ಲಿ ಏರಿಕೆಯಾಗಿದೆ. 95.78 ಕೋಟಿ ರೂ.ಗೆ ಯೋಜನಾ ವೆಚ್ಚ ಏರಿಕೆ ಆಗಿರುವುದರಿಂದ 17.31 ಕೋಟಿ ರೂ. ಅಧಿಕ ಹೊರೆ ಬಿದ್ದಿದೆ. ಇಷ್ಟೆಲ್ಲ ಆದರೂ ಸರ್ಕಾರ ಮಾರ್ಚ್‌ 12ರಂದು 95.78 ಕೋಟಿ ರೂ.ಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಿರುವುದು ಸೋಜಿಗ ಮೂಡಿಸಿದೆ.

„ಹರಿಯಬ್ಬೆ ಹೆಂಜಾರಪ್ಪ

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.