ಇನ್ನಾದರೂ ನೀಗಿತೇ ಹೊಸದುರ್ಗದ ಜಲ ಬರ?

ಕೊಳವೆಬಾವಿ ಅವಲಂಬನೆ ತಪ್ಪಿಸಿ ಶಾಶ್ವತ ನೀರು ಪೂರೈಕೆ ಉದ್ದೇಶ

Team Udayavani, Apr 11, 2022, 1:22 PM IST

hosa-durga

ಹೊಸದುರ್ಗ: ಕೊಳವೆಬಾವಿ ನೀರು ಸೇವನೆಯಿಂದ ಬೇಸತ್ತು ಹೋಗಿದ್ದ ಪಟ್ಟಣ ಹಾಗೂ ತಾಲೂಕಿನ ಜನರಿಗೆ ಕುಡಿಯುವ ನೀರು ಪೂರೈಕೆ ಯೋಜನೆ ಉದ್ದೇಶದಿಂದ ಜಾರಿಗೊಳಿಸಲಾಗಿರುವ ಬಹುಗ್ರಾಮ ಕುಡಿಯುವ ನೀರು ಯೋಜನೆ ವರದಾನವಾಗಿದೆ.

ಪಟ್ಟಣ ಮತ್ತು ತಾಲೂಕಿನ 346 ಜನವಸತಿಗಳಿಗೆ ಬಹುಗ್ರಾಮ ಯೋಜನೆ ಅಡಿ ಕುಡಿಯುವ ನೀರು ಸರಬರಾಜು ಮಾಡಲು ಉದ್ದೇಶಿಸಲಾಗಿದ್ದು, 480 ಕೋಟಿ ರೂ.ಗಳ ಮೊದಲ ಹಂತದ ಕಾಮಗಾರಿ ಪ್ರಗತಿಯಲ್ಲಿದೆ. ಹೊಸದುರ್ಗ ಪಟ್ಟಣಕ್ಕೆ ಪ್ರಸ್ತುತ ವೇದಾವತಿ ನೀರನ್ನು ಮೂಲವಾಗಿರಿಸಿಕೊಂಡು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಇಲಾಖೆ ವತಿಯಿಂದ ಕುಡಿಯುವ ನೀರನ್ನು ಸರಬರಾಜು ಮಾಡಲಾಗುತ್ತಿದೆ. ಇದು ದೀರ್ಘ‌ಕಾಲಿಕವಲ್ಲದ ಜಲಮೂಲವಾಗಿದೆ. ಹಾಗಾಗಿ ಬೇಸಿಗೆಯಲ್ಲಿ ಕೊಳವೆ ಬಾವಿಗಳನ್ನು ಅವಲಂಬಿಸುವ ಅನಿವಾರ್ಯತೆ ಇದೆ. ಕೊಳವೆ ಬಾವಿ ಮೇಲಿನ ಅವಲಂಬನೆ ತಪ್ಪಿಸಿ ಕುಡಿಯುವ ನೀರು ಸರಬರಾಜು ಮಾಡುವ ಉದ್ದೇಶವನ್ನು ಈ ಯೋಜನೆ ಹೊಂದಿದೆ.

ಜನಗಣತಿ ಪ್ರಕಾರ ಹೊಸದುರ್ಗ ತಾಲೂಕಿನ ಜನಸಂಖ್ಯೆ 2.25 ಲಕ್ಷ ಆಗಿದೆ. 2050ರ ಸಾಲಿಗೆ 4 ಲಕ್ಷ ಜನಸಂಖ್ಯೆ ತಲುಪಬಹುದು ಎಂಬ ಅಂದಾಜಿನಂತೆ ಪ್ರತಿ ದಿನ ಪಟ್ಟಣದ ಜನರಿಗೆ ತಲಾ 135 ಲೀಟರ್‌ ನಂತರ ಹಾಗೂ ಗ್ರಾಮೀಣ ಜನರಿಗೆ ತಲಾ 85 ಲೀಟರ್‌ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವ ಗುರಿ ಹೊಂದಲಾಗಿದೆ. ಈ ನಿಟ್ಟಿನಲ್ಲಿ ಭದ್ರಾ ಜಲಾಶಯದಿಂದ 2014ರಲ್ಲಿ ಒಂದು ಟಿಎಂಸಿ ನೀರನ್ನು ಹಂಚಿಕೆ ಮಾಡಲಾಗಿದೆ. ಹೀಗಾಗಿ ತಾಲೂಕಿನ ಕುಡಿಯುವ ನೀರಿನ ಹಾಹಾಕಾರ ಒಂದಿಷ್ಟು ಕಡಿಮೆಯಾಗಿದೆ.

ಹೊಸದುರ್ಗ ಪಟ್ಟಣ ಹಾಗೂ 346 ಜನವಸತಿ ಪ್ರದೇಶಗಳಲ್ಲಿ ಕುಡಿಯುವ ನೀರು ಸರಬರಾಜು ಮಾಡಲು ಎರಡು ಹಂತದ ಯೋಜನೆ ಸಿದ್ಧಪಡಿಸಲಾಗಿದೆ. ಮೊದಲ ಹಂತದಲ್ಲಿ 146.13 ಕೋಟಿ ಮತ್ತು 58.86 ಕೋಟಿ ರೂ.ಗಳ ಯೋಜನೆ ತಯಾರಿಸಿ ಒಟ್ಟು 205 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಹೊಸದುರ್ಗ ಪಟ್ಟಣಕ್ಕೆ ನೀರು ಪೂರೈಕೆ ಮಾಡಲು ನಗರಾಭಿವೃದ್ಧಿ ಇಲಾಖೆ 52.30 ಕೋಟಿ ರೂ. ಅನುದಾನವನ್ನು ಆರ್‌ ಡಿಪಿಆರ್‌ ಇಲಾಖೆಗೆ ನೀಡಿದೆ. ನಾಲ್ಕಾರು ವರ್ಷಗಳ ಹಿಂದೆಯೇ ತಾಂತ್ರಿಕ ಮಂಜೂರಾತಿ ನೀಡಿ ನಾಲ್ಕಾರು ಬಾರಿ ಟೆಂಡರ್‌ ಕರೆದರೂ ಅರ್ಹ ಗುತ್ತಿಗೆದಾರರು ಭಾಗವಹಿಸಿಲ್ಲ. ಆದ್ದರಿಂದ ಮೊದಲ ಹಂತದ ಮೂಲ ಯೋಜನೆಗೆ ಧಕ್ಕೆಯಾಗದಂತೆ ಎರಡು ಭಾಗಗಳಾಗಿ ವಿಭಜಿಸಲಾಗಿದೆ.

ಹೊಸದುರ್ಗ ಪಟ್ಟಣದ ಕಸಬಾ ಹೋಬಳಿಯ 92 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಮೊದಲ ಹಂತದ ಕಾಮಗಾರಿಯನ್ನು ಶ್ರೀ ಗೋಪಾಲ್‌ ಕೆಂಪಲ್ಲಿ ಇಂಜಿನಿಯರ್ ಕಂಟ್ರಾಕ್ಟರ್ ಪ್ರೈವೇಟ್‌ ಲಿಮಿಟೆಡ್‌ ಇವರಿಗೆ ಗುತ್ತಿಗೆ ನೀಡಲಾಗಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಈಗಾಗಲೇ ತರೀಕೆರೆ ತಾಲ್ಲೂಕಿನ 113 ಜನವಸತಿ ಪ್ರದೇಶಗಳಿಗೂ ಮೊದಲನೇ ಹಂತದ ಯೋಜನೆ ಅಡಿ ಕುಡಿಯುವ ನೀರು ಸರಬರಾಜು ಮಾಡಲು ಕಾಮಗಾರಿ ಕೈಗೊಂಡಿದ್ದು, ತಾಲೂಕಿನ ಅಹಮದ್‌ ನಗರದಿಂದ ಹೊಸ ದುರ್ಗವರೆಗಿನ ಪೈಪ್‌ಲೈನ್‌ ಕಾಮಗಾರಿ ಭರದಿಂದ ಸಾಗಿದೆ.

ಮೊದಲ ಹಂತದ 92 ಹಳ್ಳಿಗಳಿಗೂ ಪೈಪ್‌ಲೈನ್‌ ಕಾಮಗಾರಿ ಪೂರ್ಣಗೊಂಡಿದ್ದು, ಪಟ್ಟಣದ ಪ್ರಥಮದರ್ಜೆ ಕಾಲೇಜು ಹಿಂಭಾಗದಲ್ಲಿ 26 ಲಕ್ಷ ಲೀಟರ್‌ ಸಂಗ್ರಹದ ಮೇಲ್ಮಟ್ಟದ ಜಲಸಂಗ್ರಹಾಗಾರ ನಿರ್ಮಾಣವಾಗುತ್ತಿದೆ. ಅಹಮದ್‌ ನಗರದಲ್ಲಿ 2.50 ಲಕ್ಷ ಲೀಟರ್‌, ಕಬ್ಬಿನಕೆರೆ ಬಳಿ 3 ಲಕ್ಷ ಲೀಟರ್‌ ಸಂಗ್ರಹದ ಎರಡು ಜಲಸಂಗ್ರಹಾಗಾರ, ಸಿದ್ದಪ್ಪನಬೆಟ್ಟದ ಬಳಿ 3 ಲಕ್ಷ ಲೀಟರ್‌ ಸಂಗ್ರಹದ ಜಲಸಂಗ್ರಹಗಾರ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ.

ಎರಡನೇ ಹಂತದ ಕಾಮಗಾರಿ

145 ಕೋಟಿ ರೂ. ವೆಚ್ಚದ ಎರಡನೇ ಹಂತದ ಕುಡಿಯುವ ನೀರಿನ ಯೋಜನೆ ಅಡಿ ಇನ್ನುಳಿದ 255 ಜನವಸತಿ ಪ್ರದೇಶಗಳಿಗೆ ನೀರು ಸರಬರಾಜು ಮಾಡಲಾಗುತ್ತಿದೆ. ಮೊದಲ ಹಂತ ಪೂರ್ಣಗೊಂಡ ಬಳಿಕ ಎರಡನೇ ಹಂತದ ಕಾಮಗಾರಿ ಕೈಗೊಳ್ಳಲಾಗುವುದು ಎಂಬುದು ಅಧಿಕಾರಿಗಳ ಹೇಳಿಕೆ.

ಹೊಸದುರ್ಗ ತಾಲೂಕಿನಲ್ಲಿ ಜಲಜೀವನ್‌ ಮಿಷನ್‌ ಯೋಜನೆ ಅಡಿ ಅಮೃತ ಗ್ರಾಮ ಪಂಚಾಯಿತಿಗೆ ಆಯ್ಕೆಯಾಗಿರುವ ಹೆಬ್ಬಳ್ಳಿ, ಸಾಣೇಹಳ್ಳಿ, ದೇವಪುರ, ಗುಡ್ಡದನೇರಲಕೆರೆ ಗ್ರಾಮ ಪಂಚಾಯತಿಗಳಿಗೆ ನಳ ಸಂಪರ್ಕ ಕಲ್ಪಿಸಲು ಟೆಂಡರ್‌ ಕರೆಯಲಾಗಿದೆ. ಪ್ರಸನ್ನಕುಮಾರ್‌, ಎಂಜಿನಿಯರ್‌

ಭದ್ರಾ ಮೇಲ್ದಂಡೆ ಯೋಜನೆ ಅಡಿ ಕುಡಿಯುವ ನೀರು ಸರಬರಾಜಾದರೂ ವಿವಿ ಸಾಗರದ ಹಿನ್ನೀರಿನಿಂದಲೂ ತಾಲೂಕಿನ ಜನತೆಗೆ ಕುಡಿಯುವ ನೀರು ಒದಗಿಸುವ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಒತ್ತಾಯ ಮಾಡಲಾಗಿದೆ. ಗೂಳಿಹಟ್ಟಿ ಡಿ. ಶೇಖರ್‌, ಶಾಸಕರು

ಟಾಪ್ ನ್ಯೂಸ್

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.