ಮಹಿಳೆಯರಿಗೆ ರಾಜಕೀಯ ಪ್ರಜ್ಞೆ ಅಗತ್ಯ


Team Udayavani, Mar 29, 2019, 2:15 PM IST

cta-1
ಚಿತ್ರದುರ್ಗ: ಪ್ರತಿಯೊಬ್ಬ ತೃತೀಯ ಲಿಂಗಿಗಳು ಮತ್ತು ಶೋಷಣೆಗೊಳಗಾದ ಮಹಿಳೆಯರು ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಬೇಕು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿ. ಸತ್ಯಭಾಮ ಕರೆ ನೀಡಿದರು.
ಇಲ್ಲಿನ ಜಿಪಂ ಸಭಾಂಗಣದಲ್ಲಿ ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಪಂ, ಜಿಲ್ಲಾ ಸ್ವೀಪ್‌ ಸಮಿತಿ ಆಶ್ರಯದಲ್ಲಿ ಗುರುವಾರ ಆಯೋಜಿಸಲಾಗಿದ್ದ ಮತದಾನ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಲೋಕಸಭಾ ಚುನಾವಣಾ ಪ್ರಕ್ರಿಯೆಯಲ್ಲಿ ಮಂಗಳಮುಖೀಯರು, ಶೋಷಿತ ಮಹಿಳಾ ಮತದಾರರು ಸಕ್ರಿಯವಾಗಿ ಭಾಗವಹಿಸಬೇಕು. ಮಹಿಳೆಯರಿಗೆ ರಾಜಕೀಯ ಪ್ರಜ್ಞೆ ಇರಬೇಕು. ಚುನಾವಣೆ ಹೇಗೆ ನಡೆಯುತ್ತದೆ, ನಾವು ಯಾವ ರೀತಿ ಮತದಾನ ಮಾಡಬೇಕು., ಯಾರಿಗೆ ಮತದಾನ ಮಾಡಬೇಕು ಎನ್ನುವುದನ್ನು ಅರಿಯಬೇಕು ಎಂದು ತಿಳಿಸಿದರು.
ಕಳೆದ ಚುನಾವಣೆಯಲ್ಲಿ ಮಹಿಳೆಯರ ಮತದಾನ ಪ್ರಮಾಣ ಕಡಿಮೆಯಾಗಿತ್ತು. ಅದನ್ನು ಈ ಬಾರಿ ಹೆಚ್ಚಿಸಬೇಕೆಂಬ ಗುರಿ ಹೊಂದಲಾಗಿದೆ.
ಮಹಿಳಾ ಮತದಾರರು ಮತದಾರ ಪಟ್ಟಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದರೂ ಹೆಚ್ಚು ಮತ ಚಲಾಯಿಸದೇ ಇರುವುದು ಕಂಡುಬಂದಿದೆ. ಆದ್ದರಿಂದ ಚುನಾವಣೆಯಲ್ಲಿ ಮಹಿಳೆಯರು, ಮಂಗಳಮುಖೀಯರು, ಶೋಷಿತ ಮಹಿಳೆಯರು ಸ್ವಯಂ ಪ್ರೇರಣೆಯಿಂದ ಮತದಾನದಲ್ಲಿ ಭಾಗವಹಿಸಬೇಕು.
ಮತದಾನ ಮಾಡಿದರೆ ನಮಗೆಷ್ಟು ದುಡ್ಡು ಕೊಡುತ್ತಾರೆನ್ನುವ ಭಾವನೆ ಬೇಡ, ಮತಗಳನ್ನು ಮಾರಿಕೊಳ್ಳಬಾರದು. ನಿಮ್ಮ
ಸಮಸ್ಯೆಗಳೇನಿದ್ದರೂ ಚುನಾವಣೆ ನಂತರ ಬಗೆ ಹರಿಸೋಣ ಎಂದರು.
ನಗರ, ಪಟ್ಟಣ, ಗ್ರಾಮಾಂತರ ಪ್ರದೇಶದಲ್ಲಿನ ಎಲ್ಲಾ ಮಹಿಳೆಯರು ಸ್ವಇಚ್ಚೆಯಿಂದ ಮತಗಟ್ಟೆಗಳಿಗೆ ಆಗಮಿಸಿ ಮತ ಚಲಾಯಿಸಬೇಕು. ಒಂದೊಂದು ಮತವು ಅಮೂಲ್ಯವಾಗಿದ್ದು, ಮತದ ಮಹತ್ವವನ್ನು ಪ್ರತಿಯೊಬ್ಬರೂ ಅರಿಯಬೇಕು ಎಂದು ಹೇಳಿದರು.
ಮಂಗಳಮುಖೀ ಚಂದ್ರಕಲಾ, ತಿಪ್ಪಮ್ಮ ಮತ್ತಿತರರು ಮಾತನಾಡಿ, ಮಂಗಳಮುಖೀಯರನ್ನು ಮೊದಲು ಮನುಷ್ಯರಂತೆ ನೋಡಬೇಕು. ಜಿಲ್ಲೆಯಲ್ಲಿ 700 ಮಂದಿ ಮಂಗಳಮುಖೀಯರಿದ್ದು, ನಮ್ಮಂತೆ ಸೀರೆಯನ್ನುಟ್ಟು ಬೀದಿಗೆ ಬರಲು ಹೆದರುತ್ತಿದ್ದಾರೆ. ಪ್ಯಾಂಟ್‌, ಶರ್ಟ್‌ ಹಾಕಿಕೊಂಡು ಮನೆಯಲ್ಲೇ ಇರುತ್ತಾರೆ.
ಬಹುತೇಕ ಮಂಗಳಮುಖೀಯರು ಹಳ್ಳಿಗಳಲ್ಲೇ ಹುಟ್ಟಿದ್ದಾರೆ. ಆದರೆ ಹಳ್ಳಿಗಳಲ್ಲಿದ್ದರೆ ಜೀವನ ಸಾಗಿಸುವುದು ಕಷ್ಟವಾಗುತ್ತದೆ ಎಂದು ನಗರ ಪ್ರದೇಶದಲ್ಲಿ ವಾಸಿಸುತ್ತಿದ್ದೇವೆ. ಇಂದಿಗೂ ಮಂಗಳಮುಖೀಯರಿಗೆ ಒಂದು ನಿವೇಶನ, ಮನೆ ನೀಡಿಲ್ಲ. ನಮಗೆ ಯಾರೂ ಮನೆ ಬಾಡಿಗೆ ಕೊಡುವುದಿಲ್ಲ. ಹಾಗಾದರೆ ನಾವು ಎಲ್ಲಿ ಇರಬೇಕು, ನಾವು ಕೂಡ ಮನುಷ್ಯರಲ್ಲವೇ, ಯಾಕಿಷ್ಟು ತಾರತಮ್ಯ ಮಾಡುತ್ತೀರಿ, ಕೊನೆ ಪಕ್ಷ ಆಶ್ರಯ ಮನೆಗಳನ್ನಾದರೂ ನೀಡಿ ಎಂದು ಮನವಿ ಮಾಡಿದರು.
ನಗರಸಭೆಗೆ ಹೋಗಿ ಆಶ್ರಯ ಮನೆ ನೀಡಿ ಎಂದರೆ ಶಾಸಕ ತಿಪ್ಪಾರೆಡ್ಡಿ ಅವರು ಫಲಾನುಭವಿಗಳನ್ನು ಆಯ್ಕೆ ಮಾಡುತ್ತಾರೆ
ಎಂಬ ಉತ್ತರ ದೊರೆಯುತ್ತಿದೆ. ಹಿಂದೆ ಸೌಭಾಗ್ಯ ಬಸವರಾಜನ್‌ ಮನೆ ನೀಡುವುದಾಗಿ ನೀಡಿದ್ದ ಭರವಸೆ ಹಾಗೆಯೇ ಇದೆ ಎಂದರು.
ನಾನು ಸೌಭಾಗ್ಯ ಬಸವರಾಜನ್‌ ಸ್ಥಾನಕ್ಕೆ ಬಂದಿಲ್ಲ, ನಾನೊಬ್ಬ ಸರ್ಕಾರಿ ಅಧಿಕಾರಿ. ಸೌಭಾಗ್ಯ ಬಸವರಾಜನ್‌ ಜಿಪಂ ಅಧ್ಯಕ್ಷರಾಗಿದ್ದವರು ಎಂದು ಜಿಪಂ ಸಿಇಒ ಸತ್ಯಭಾಮ ಪರಿಪರಿಯಾಗಿ ಹೇಳಿದರೂ ಮಂಗಳಮುಖೀಯರು ಕೇಳಿಸಿಕೊಳ್ಳಲಿಲ್ಲ. ಕೊನೆಗೆ ಸಭೆ ಮಾಡಿ ನಿಮ್ಮ ಸಮಸ್ಯೆ ನಿವಾರಣೆ ಮಾಡುವುದಾಗಿ ಭರವಸೆ ನೀಡಿದ ಮೇಲೆಯೇ ಮಂಗಳಮುಖೀಯರು ಸುಮ್ಮನಾದರು.
ರಾಜ್ಯ ಚುನಾವಣಾ ಆಯೋಗದ ರಾಜ್ಯ ಮಟ್ಟದ ಮಾಸ್ಟರ್‌ ಚುನಾವಣಾ ಟ್ರೈನಿ ಪ್ರೊ| ಕೆ.ಕೆ. ಕಾಮಾನಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜ ನಾಯ್ಕ ಮತ್ತಿತರರು ಇದ್ದರು.
ಜಿಲ್ಲೆಯಲ್ಲಿ 700ಕ್ಕೂ ಹೆಚ್ಚಿನ ತೃತೀಯ ಲಿಂಗಿಗಳಿದ್ದಾರೆ. ಆದರೆ ಕೇವಲ 88 ಮಂಗಳಮುಖೀಯರು ಮಾತ್ರ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ನೋಂದಾಯಿಸಿಕೊಂಡಿದ್ದಾರೆ. ಎಲ್ಲರೂ ತಮ್ಮ ಹೆಸರುಗಳನ್ನು ಮತದಾರರ ಪಟ್ಟಿಯಲ್ಲಿ
ನೋಂದಾಯಿಸಿಕೊಳ್ಳುವುದು ಅಗತ್ಯ.
ಸಿ. ಸತ್ಯಭಾಮ, ಜಿಪಂ ಸಿಇಒ.

ಟಾಪ್ ನ್ಯೂಸ್

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.