ನಾಳೆಯಿಂದ ಮಾರಿಕಾಂಬಾ ಜಾತ್ರೆ
ಮಾರಿಕಾಂಬಾ ಜಾತ್ರೆ
Team Udayavani, Jan 31, 2021, 5:35 PM IST
ಚಳ್ಳಕೆರೆ: ತಾಲೂಕಿನ ನಗರಂಗೆರೆ ಗ್ರಾಮ ದೇವತೆ ಶ್ರೀ ಮಾರಿಕಾಂಬಾ (ಮಾರಮ್ಮ) ದೇವಿಯ ಜಾತ್ರೆ ಫೆ. 1ರಿಂದ 6ರ ತನಕ ನಡೆಯಲಿದೆ. ಪ್ರತಿ ಐದು ವರ್ಷಗಳಿಗೊಮ್ಮೆ ನಡೆಯುವ ಜಾತ್ರಾ ಮಹೋತ್ಸವ ಇದಾಗಿದ್ದು, ಜಾತ್ರೆ ಹಿನ್ನೆಲೆಯಲ್ಲಿ ನಗರಂಗೆರೆ ಗ್ರಾಮಕ್ಕೆ ಹೊರಗಿನ ಯಾವ ವ್ಯಕ್ತಿಯೂ ಸಹ ಪ್ರವೇಶ ಮಾಡುವಂತಿಲ್ಲ. ಹಾಗಾಗಿ ಗ್ರಾಮದ ನಾಲ್ಕೂ ದಿಕ್ಕುಗಳಲ್ಲಿ ರಸ್ತೆಗೆ ಅಡ್ಡಲಾಗಿ ಬೇಲಿ ಹಾಕಲಾಗಿದೆ. ಯಾರಾದರೂ ನಿಯಮ ಮೀರಿ ಗ್ರಾಮದ ಒಳಗೆ ಪ್ರವೇಶಿಸಿದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಬುಧವಾರ ಜಾತ್ರೆಯ ಅಂತಿಮ ದಿನವಾಗಿದ್ದು, ಶಾಸಕ ಟಿ. ರಘುಮೂರ್ತಿ, ಗ್ರಾಮ ಪಂಚಾಯಿತಿ ಸದಸ್ಯರಾದ ಕುಮಾರ, ಅಂಗಡಿ ರಮೇಶ್, ಯರ್ರಮ್ಮ, ಹಿದಾಯತ್, ಗ್ರಾಮದ ಮುಖಂಡರಾದ ಸಿ. ಓಬಣ್ಣ, ಪುಟ್ಟಲಿಂಗಪ್ಪ, ಓಂಕಾರಪ್ಪ ಮೊದಲಾದವರು ಪಾಲ್ಗೊಳ್ಳುವರು. ಫೆ. 1 ರಂದು ಗಂಗಾ ಪೂಜೆ, 2 ರಂದು ದೇವಿಯ ಪ್ರತಿಷ್ಠಾಪನೆ ಮತ್ತು ಮಹಿಷೋತ್ಸವ, 3 ರಂದು ಗ್ರಾಮಸ್ಥರಿಂದ ಹಿಟ್ಟಿನ ಆರತಿ, 4 ರಂದು ಆದಿಕರ್ನಾಟಕ ಸಮಾಜದ ಭಕ್ತರಿಂದ ಹಿಟ್ಟಿನ ಆರತಿ, 5 ರಂದು ಅಸಾದಿ ಕಾರ್ಯಕ್ರಮ, 6 ರಂದು ಶ್ರೀದೇವಿಗೆ ಮಹಾಮಂಗಳಾರತಿ, ಪ್ರಸಾದ ವಿನಿಯೋಗ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಈಜಲು ಬಾರದಿದ್ದರೂ ಕೆರೆಯಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಯುವಕ
ಉತ್ತರಾಧಿಕಾರಿ ಆಯ್ಕೆ ಟ್ರಸ್ಟ್-ಹಿರಿಯರ ಹೊಣೆ: ಮಾದಾರ ಚನ್ನಯ್ಯ ಶ್ರೀ
ಮದುವೆ ಸಮಾರಂಭದಲ್ಲಿ ಊಟ ಮಾಡಿದ 30ಕ್ಕೂ ಅಧಿಕ ಮಂದಿ ಅಸ್ವಸ್ಥ… ಆಸ್ಪತ್ರೆಗೆ ದಾಖಲು
Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ
ಚಿತ್ರದುರ್ಗ-ಬಸವ ತತ್ವ ಪ್ರತಿ ಮನೆಗೆ ತಲುಪಲಿ: ಡಾ| ಬಸವಕುಮಾರ ಶ್ರೀ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Gundmi Toll Plaza ಸ್ಥಳೀಯರಿಗೆ ಟೋಲ್ ಬರೆ; ಟೋಲ್ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ
Election data ಏರಿಕೆ ಬಗ್ಗೆ ಪ್ರತಿಕ್ರಿಯಿಸಿ: ಇಸಿಗೆ ಸುಪ್ರೀಂ
D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ; ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್’
Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ ರಕ್ಷಣೆ
Chhattisgarh; ನಿಲ್ಲದ ನಕ್ಸಲ್ ಬೇಟೆ: ಓರ್ವನ ಹತ್ಯೆ