ಬಸವ ಚಿಂತನೆಯಿಂದ ಮನುಕುಲದ ಉದ್ಧಾರ

ಜೀವನ ಮೌಲ್ಯದ ವಚನದಿಂದ ಸಾಮಾಜಿಕ ಪರಿವರ್ತನೆಗೆ ಪ್ರೇರಣೆ: ಮುರುಘಾ ಶರಣರು

Team Udayavani, Aug 19, 2019, 12:07 PM IST

19-Agust-17

ಹೊಳಲ್ಕೆರೆ: ತಾಲೂಕಿನ ಬ್ರಹ್ಮಪುರದಲ್ಲಿ ನಡೆದ 'ಕಲ್ಯಾಣ ದರ್ಶನ' ಕಾರ್ಯಕ್ರಮವನ್ನು ಡಾ| ಶಿವಮೂರ್ತಿ ಮುರುಘಾ ಶರಣರು ಉದ್ಘಾಟಿಸಿದರು.

ಹೊಳಲ್ಕೆರೆ: ಅನುಕ‌ರಣೆ ಬೌದ್ಧಿಕವಾಗಿ, ಸೈದ್ಧಾಂತಿಕವಾಗಿರಬೇಕು. ಆದರೆ ಇಂದಿನ ಸಮಾಜದಲ್ಲಿ

ಭೌತಿಕ ಅನುಕರಣೆ ಹೆಚ್ಚುತ್ತಿರುವುದು ಸರಿಯಲ್ಲ ಎಂದು ಚಿತ್ರದುರ್ಗ ಮುರುಘಾ ಮಠದ ಡಾ| ಶಿವಮೂರ್ತಿ ಮುರುಘಾ ಶರಣರು ಹೇಳಿದರು.

ಶ್ರಾವಣ ಮಾಸದ ಅಂಗವಾಗಿ ಚಿತ್ರದುರ್ಗದ ಮುರುಘಾ ಮಠದ ವತಿಯಿಂದ ಭಾನುವಾರ ತಾಲೂಕಿನ ಬ್ರಹ್ಮಪುರ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ‘ಕಲ್ಯಾಣ ದರ್ಶನ’ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಶರಣರು ಆರ್ಶಿವಚನ ನೀಡಿದರು.

ಹನ್ನೆರಡನೇ ಶತಮಾನದಲ್ಲಿ ಬೋಧಿಸಿದ ವಚನಗಳು, ತತ್ವಗಳು, ಚಿಂತನೆಗಳು, ವಿಮರ್ಶೆಗಳು, ಇಂದಿಗೂ ಜನಮಾನಸಕ್ಕೆ ಹತ್ತಿರವಾಗಿದೆ. ಅವು ಸಾಮಾಜಿಕ ಪರಿವರ್ತನೆಗೆ ಪ್ರೇರಣೆ ನೀಡುತ್ತವೆ. ಬಸವಾದಿ ಶರಣರು ಅನುಭವದ ಮೂಲಕ ಜೀವನಾಧಾರಿತ ಮೌಲ್ಯಗಳನ್ನು ಪ್ರತಿಪಾದಿಸುವ ವಚನಗಳನ್ನು ರಚಿಸಿ ಸಮಾಜಕ್ಕೆ ಮಾರ್ಗದರ್ಶನ ನೀಡಿದ್ದಾರೆ. ಬಸವ ತತ್ವಗಳು ಎಂದರೆ ಎಲ್ಲರ ತತ್ವಗಳು ಎನ್ನುವಂತಾಗಬೇಕು. ಬಸವ ಚಿಂತನೆಯಿಂದ ಮಾತ್ರ ಮನುಕುಲದ ಉದ್ಧಾರ ಸಾಧ್ಯ ಎಂದರು.

ಅಂದು ಕಾಯಕ, ನ್ಯಾಯದ ಚಿಂತನೆ, ಜಾತ್ಯತೀತ ಹಾಗೂ ಶೋಷಿತರ ಧ್ವನಿಯಾಗುವ ಚಿಂತನೆ ಇತ್ತು. ಬಸವಣ್ಣನವರು 12ನೇ ಶತಮಾನದಲ್ಲಿ ನಿತ್ಯ ಸತ್ಕಾರ್ಯಗಳು, ಕಲ್ಯಾಣ ಕಾರ್ಯಗಳನ್ನು ನೆರವೇರಿಸುವ ಮೂಲಕ ಸಾಮಾಜಿಕ ಬದಲಾವಣೆಗೆ ಹೊಸ ಚಿಂತನೆ ನೀಡುತ್ತಿದ್ದರು. ಅದೇ ಮಾದರಿಯಲ್ಲಿ ಇಂದು ಮುರುಘಾ ಮಠ ನಡೆದುಕೊಳ್ಳುತ್ತಿದೆ. 30 ವರ್ಷಗಳಿಂದ ಬಸವ ಚಿಂತನೆಯನ್ನು ಅನುಸರಿಸುತ್ತಾ ಬಂದಿದೆ. ಬಸವ ಚಿಂತನೆಗೆ ಪೂರಕವಾಗಿರುವ ಕಾರ್ಯಕ್ರಮಗಳನ್ನು ಕೈಗೊಂಡಿದೆ. ಶ್ರೀಮಠದಲ್ಲಿ ನಡೆಯುವ ಸಾಮೂಹಿಕ ವಿವಾಹದಲ್ಲಿ ಅಂತರ್ಜಾತಿ ವಿವಾಹಕ್ಕೆ ಒತ್ತು ನೀಡಲಾಗಿದೆ. ಅಜ್ಞಾನ, ಅಂಧಕಾರ, ಮೌಡ್ಯ, ಮೂಡನಂಬಿಕೆ ವಿರುದ್ಧ ಧ್ವನಿಯಾಗಿದೆ. ದಾಸೋಹ ತತ್ವವನ್ನು ಚಾಚೂ ತಪ್ಪದೆ ಪರಿಪಾಲಿಸುತ್ತಾ ಬಂದಿದೆ. ಹಾಗಾಗಿ ಮರುಘಾಮಠದ ಅನುಸರಣೆ ಮುಂದಿನ ಪೀಳಿಗೆಗೆ ಪ್ರೇರಣೆಯಾಗಲಿದೆ ಎಂದು ತಿಳಿಸಿದರು.

ಶಿಕ್ಷಕ ಟಿ.ಪಿ. ಉಮೇಶ್‌ ‘ಅನುಕರಣೆಯಿಂದ ಅನುಸರಣೆಯ ಕಡೆಗೆ’ ಎನ್ನುವ ವಿಷಯದ ಕುರಿತು ಉಪನ್ಯಾಸ ನೀಡಿ, ಮನುಷ್ಯ ತನ್ನ ವರ್ತನೆಯಿಂದ ಸಮಾಜಕ್ಕೆ ಅಪೇಕ್ಷಿತರಾಗಬೇಕು. ನಮ್ಮ ಅನುಕರಣೆ ಸಕಾರಾತ್ಮಕವಾಗಿರಬೇಕು. ರೈತರು, ಸೈನಿಕರ ಅನುಕರಣೆ ಮಾಡಬೇಕು. ಭ್ರಷ್ಟಾಚಾರ, ಸಮಾಜಘಾತುಕ ವಿಚಾರಗಳು ಅನುಕರಣೆ ವಸ್ತುಗಳಾಗಬಾರದು ಎಂದರು.

ಜಿಪಂ ಮಾಜಿ ಅಧ್ಯಕ್ಷ ಎಲ್.ಬಿ. ರಾಜಶೇಖರ್‌, ಬಾಪೂಜಿ ವಿದ್ಯಾಸಂಸ್ಥೆ ಸಂಸ್ಥಾಪಕ ಕೆ.ಎಂ. ವಿರೇಶ್‌, ತಾಪಂ ಸದಸ್ಯ ಪರಮೇಶ್ವರಪ್ಪ, ಗ್ರಾಪಂ ಸದಸ್ಯ ದಗ್ಗೆ ಶಿವಪ್ರಕಾಶ್‌, ಮಾವಿನಕಟ್ಟೆ ಗುರುಸ್ವಾಮಿ ಮತ್ತಿತರರು ಇದ್ದರು. ಜಮುರಾ ಕಲಾವಿದರು ಪ್ರಾರ್ಥಿಸಿದರು. ಗ್ರಾಮಸ್ಥರು ಪೂರ್ಣಕುಂಭ ಮೆರವಣಿಗೆ ಮೂಲಕ ಡಾ| ಶಿವಮೂರ್ತಿ ಮುರುಘಾ ಶರಣರನ್ನು ಸ್ವಾಗತಿಸಿದರು.

ಟಾಪ್ ನ್ಯೂಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.