ತೆರಿಗೆ ತಿಕ್ಕಾಟಕ್ಕೆ ಸಿಕ್ಕೀತೇ ಮುಕ್ತಿ?

ನಗರಸಭೆ ತೆರಿಗೆ ಪ್ರಮಾಣ ಹೆಚ್ಚಳ ಮಾಡಿದ್ದು ಸಮಸ್ಯೆಗೆ ಕಾರಣ

Team Udayavani, Aug 31, 2019, 12:05 PM IST

31-Agust-17

ಚಿತ್ರದುರ್ಗ ನಗರಸಭೆ ಕಚೇರಿ

ತಿಪ್ಪೇಸ್ವಾಮಿ ನಾಕೀಕೆರೆ
ಚಿತ್ರದುರ್ಗ:
ಉದ್ದಿಮೆ ತೆರಿಗೆ ಪಾವತಿ ವಿಚಾರದಲ್ಲಿ ನಗರಸಭೆ ಹಾಗೂ ನಗರದ ವರ್ತಕರ ನಡುವೆ ನಡೆಯುತ್ತಿರುವ ಹಗ್ಗ ಜಗ್ಗಾಟಕ್ಕೆ ಶನಿವಾರ ತೆರೆ ಬೀಳುವ ಸಾಧ್ಯತೆ ಇದೆ.

ಇತ್ತೀಚೆಗೆ ನಗರಸಭೆಯಲ್ಲಿ ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಅವರ ನೇತೃತ್ವದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ವಿಚಾರ

ಪ್ರಸ್ತಾಪವಾಗಿತ್ತು. ಈ ವೇಳೆ ಶಾಸಕರು ಆ. 31 ರಂದು ಜಿಲ್ಲಾಧಿಕಾರಿಗಳ ಜತೆಗೆ ವರ್ತಕರ ಸಭೆ ಕರೆಯಲು ಅಧಿಕಾರಿಗಳಿಗೆ ಸೂಚಿಸಿದ್ದರು. ಈ

ಹಿನ್ನೆಲೆಯಲ್ಲಿ ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಗರದ ವರ್ತಕರ ಸಭೆ ನಡೆಯಲಿದ್ದು, ತೆರಿಗೆ ಪಾವತಿ ವಿಚಾರದಲ್ಲಿ ಉಂಟಾಗಿರುವ ತಿಕ್ಕಾಟಕ್ಕೆ ಅಂತ್ಯ ಕಾಣಬಹುದು ಎನ್ನುವ ನಿರೀಕ್ಷೆ ಬಹುತೇಕ ವರ್ತಕರಲ್ಲಿದೆ.

ಏನಿದು ಹಗ್ಗ ಜಗ್ಗಾಟ?: ನಗರದಲ್ಲಿ ಹೋಟೆಲ್, ಲಾಡ್ಜ್, ಬಾರ್‌, ರೆಸ್ಟಾರೆಂಟ್, ಬಟ್ಟೆ ಅಂಗಡಿ, ಬಂಗಾರದ ಅಂಗಡಿ, ಬೇಕರಿ ಸೇರಿದಂತೆ ಯಾವುದೇ ವ್ಯಾಪಾರ, ವಹಿವಾಟು ನಡೆಸಲು ನಗರಸಭೆಯಿಂದ ಅನುಮತಿ ಪಡೆಯುತ್ತಾರೆ. ಹೀಗೆ ಅನುಮತಿ ಪಡೆದ ನಂತರ ಪ್ರತಿ ವರ್ಷ ನಡೆಸುವ ವ್ಯವಹಾರಕ್ಕಾಗಿ ನಗರಸಭೆಗೆ ತೆರಿಗೆ ಪಾವತಿಸಬೇಕು.

1964ರಲ್ಲಿ ಕರ್ನಾಟಕ ಮುನ್ಸಿಪಲ್ ಕಾಯ್ದೆ ಅನ್ವಯ 500 ರೂ.ಗೆ ಮೀರದಂತೆ ತೆರಿಗೆ ವಸೂಲು ಮಾಡಲು ಅವಕಾಶ ಇದೆ. ಆದರೆ ನಗರಸಭೆ ಅಧಿಕಾರಿಗಳು ಈಗ ತೆರಿಗೆ ಪ್ರಮಾಣ ಹೆಚ್ಚಿಸಿದ್ದು, ಕನಿಷ್ಠ 1 ಸಾವಿರದಿಂದ ಗರಿಷ್ಠ 5 ಸಾವಿರಕ್ಕೆ ಹೆಚ್ಚಳವಾಗಿದೆ. ಇದರಿಂದ ವರ್ತಕರು ಸಿಡಿಮಿಡಿಗೊಂಡಿದ್ದು ಹಗ್ಗ ಜಗ್ಗಾಟಕ್ಕೆ ಕಾರಣವಾಗಿದೆ.

ನಗರಸಭೆ ಹೇಳ್ಳೋದೇನು?: 1964ರ ಕರ್ನಾಟಕ ಮುನ್ಸಿಪಲ್ ಕಾಯ್ದೆಯಂತೆ ಅದೇ ತೆರಿಗೆ ಪಾವತಿಸಲು ವರ್ತಕರು ಪಟ್ಟು ಹಿಡಿದಿದ್ದಾರೆ. ಆದರೆ ಕಾಲ ಕಾಲಕ್ಕೆ ಕಾಯ್ದೆ ತಿದ್ದುಪಡಿಯಾಗಿದ್ದು, ಬೈಲಾ ಮಾಡಿಕೊಳ್ಳಲು ಅವಕಾಶ ಇದೆ. ಈ ಹಿನ್ನೆಲೆಯಲ್ಲಿ ತೆರಿಗೆ ಹೆಚ್ಚಳ ಮಾಡಲಾಗಿದೆ ಎಂದು ನಗರಸಭೆ ಆಯುಕ್ತ ಎಂ. ಚಂದ್ರಪ್ಪ ಹೇಳುತ್ತಾರೆ.

ವರ್ತಕರ ವಾದವೇನು?: ಕಾಯ್ದೆಯಲ್ಲಿ 500 ರೂ.ಗೆ ಮೀರದಂತೆ ಎಂದು ಸ್ಪಷ್ಟವಾಗಿ ಹೇಳಿದೆ. ಹೀಗಿದ್ದೂ ಕನಿಷ್ಟ 1 ಸಾವಿರದಿಂದ 5 ಸಾವಿರದವರೆಗೆ ತೆರಿಗೆ ಪಾವತಿಸಿ ಎನ್ನುವುದು ಸರಿಯಲ್ಲ. ಜತೆಗೆ 2005 ರಿಂದ ಪಾವತಿ ಮಾಡಿರುವ ತೆರಿಗೆಯ ದಾಖಲಾತಿ ಕೇಳುತ್ತಿದ್ದಾರೆ. ಎಲ್ಲಾ ದಾಖಲೆಗಳನ್ನು ಎಲ್ಲಿಂದ ತರಬೇಕು, ನಗರಸಭೆಗೆ ಪಾವತಿ ಮಾಡಿದ ಮೇಲೆ ಅವರು ದಾಖಲಾತಿ ಇಟ್ಟುಕೊಳ್ಳಬೇಕು. ಇಲ್ಲದಿದ್ದರೆ 2005 ರಿಂದ ಬಡ್ಡಿ ಸಮೇತ ತೆರಿಗೆ ಕಟ್ಟುವಂತೆ ಹೇಳುತ್ತಿದ್ದಾರೆ. ಇದರಿಂದ ವರ್ತಕರಿಗೆ ಅನ್ಯಾಯವಾಗುತ್ತದೆ ಎನ್ನುತ್ತಾರೆ ಜ್ಯುವೆಲರಿ ಅಂಗಡಿ ಮಾಲಿಕ ಕೇಶವ್‌.

ಸದ್ಯ ನಗರಸಭೆಯಲ್ಲಿ ಅಧಿಕೃತ ಆಡಳಿತ ಮಂಡಳಿ ಇಲ್ಲ. ಜಿಲ್ಲಾಧಿಕಾರಿಗಳೇ ಈಗ ಸಂಪೂರ್ಣ ಜವಾಬ್ದಾರಿ ಹೊತ್ತಿರುತ್ತಾರೆ. ಈ ಹಿನ್ನೆಲೆಯಲ್ಲಿ ಇಂದು ಶಾಸಕರು, ಜಿಲ್ಲಾಧಿಕಾರಿಗಳು ಹಾಗೂ ವರ್ತಕರ ಸಭೆ ನಡೆದು ಸ್ಪಷ್ಟ ತೀರ್ಮಾನಕ್ಕೆ ಬರುವ ಸಾಧ್ಯತೆ ಇದೆ.

ತೆರಿಗೆ ಸಂಗ್ರಹದಲ್ಲಿ ಭಾರೀ ಕುಸಿತ
ಈ ವರ್ಷದ ತೆರಿಗೆ ಸಂಗ್ರಹದಲ್ಲಿ ಭಾರೀ ಕುಸಿತ ಉಂಟಾಗಿದೆ. 2019 ಏಪ್ರಿಲ್ನಿಂದ 2019 ಆಗಸ್ಟ್‌ 25 ರವರೆಗೆ ಕೇವಲ ಶೇ. 7 ರಷ್ಟು ಮಾತ್ರ ಉದ್ದಿಮೆ ತೆರಿಗೆ ಸಂಗ್ರಹವಾಗಿದೆ. 1.4 ಕೋಟಿ ರೂ. ತೆರಿಗೆ ಸಂಗ್ರಹವಾಗಬೇಕಾಗಿತ್ತು. ಆದರೆ 7.09 ಲಕ್ಷ ರೂ. ಮಾತ್ರ ವಸೂಲಾಗಿದೆ.

ವ್ಯಾಪಾರ ಕಡಿಮೆ ಆಗುತ್ತಿದೆ. ಮಳಿಗೆ ಬಾಡಿಗೆ, ಜಿಎಸ್‌ಟಿ ಸೇರಿದಂತೆ ಎಲ್ಲರೂ ಬಂದು ಬೀಳುವುದು ವರ್ತಕರ ಮೇಲೆ. ಸಣ್ಣ ಮಟ್ಟದ ವ್ಯಾಪಾರಿಗಳು ಜೀವನ ಮಾಡುವುದು ಕಷ್ಟವಾಗುತ್ತದೆ. ಅಲ್ಲದೆ ಇದು ತೆರಿಗೆ ಜಾಸ್ತಿ ಮಾಡುವ ಸಮಯವೂ ಅಲ್ಲ.
ಕಾಶಿ ವಿಶ್ವನಾಥ ಶೆಟ್ಟಿ,
 ಆರ್ಯವೈಶ್ಯ ಸಂಘದ ಅಧ್ಯಕ್ಷರು.

ಟಾಪ್ ನ್ಯೂಸ್

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.