ಒಂಟಿ ಸಲಗ ಸೆರೆಗೆ ಐದಾನೆ ಬಲ!

ಸಕ್ರೆಬೈಲಿನಿಂದ ಎರಡು, ಬಂಡೀಪುರದಿಂದ ಮೂರು ಆನೆಗಳ ಆಗಮನ ಸಲಗ ಹಿಡಿಯಲು ನಿರಂತರ ಪ್ರಯತ್ನ

Team Udayavani, Dec 9, 2019, 3:41 PM IST

December-14

ಚಿತ್ರದುರ್ಗ: ಜೋಗಿಮಟ್ಟಿ ಅರಣ್ಯ ವ್ಯಾಪ್ತಿಯ ಗೋಡೆಕಣಿವೆಯಲ್ಲಿ ಬೀಡು ಬಿಟ್ಟಿರುವ ಒಂಟಿ ಸಲಗವನ್ನು ಸೆರೆ ಹಿಡಿಯಲು ಬಂಡೀಪುರದ ನಾಗರಹೊಳೆಯಿಂದ ಮತ್ತೆ ಮೂರು ಆನೆಗಳನ್ನು ಕರೆ ತರಲು ಅರಣ್ಯ ಇಲಾಖೆ ಅಧಿಕಾರಿಗಳು ಯೋಜನೆ ರೂಪಿಸಿದ್ದಾರೆ.

ಈಗಾಗಲೇ ಸಕ್ರೆಬೈಲು ಆನೆ ಶಿಬಿರದಿಂದ ಎರಡು ಆನೆಗಳು ಬಂದಿದ್ದು, ಬಂಡೀಪುರದಿಂದ ಸೋಮವಾರ ಬೆಳಗಿನ ಜಾವದ ಹೊತ್ತಿಗೆ ಇನ್ನೂ ಮೂರು ಆನೆಗಳು ಬಂದು ಸೇರಲಿವೆ. ಒಟ್ಟು ಐದು ಆನೆಗಳ ಸಹಾಯದಿಂದ ಒಂಟಿ ಸಲಗವನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ.

ಒಂದು ವಾರದಿಂದ ಒಂದೇ ಕಡೆ ಬೀಡು ಬಿಟ್ಟಿರುವ ಸಲಗವನ್ನು ಆನೆ ಕಾರಿಡಾರ್‌ ಮೂಲಕ ಭದ್ರಾ ಅಭಯಾರಣ್ಯದ ಕಡೆ ಕರೆದೊಯ್ಯುವ ಮಾರ್ಗದುದ್ದಕ್ಕೂ ಹಳ್ಳಿಗಳಿವೆ. ಜನರಿಗೆ ತೊಂದರೆಯಾಗುವುದು ಬೇಡ ಎನ್ನುವ ಕಾರಣಕ್ಕೆ ಸೆರೆ ಹಿಡಿಯಲು ತೀರ್ಮಾನಿಸಲಾಗಿದೆ.

ಕಳೆದೊಂದು ವಾರದಿಂದ ಎತ್ತಲೂ ಅಡ್ಡಾಡದೆ ಗೋಡೆಕಣಿವೆ ವ್ಯಾಪ್ತಿಯಲ್ಲೇ ಸೇರಿಕೊಂಡಿರುವ ಒಂಟಿ ಸಲಗ, ಚಿತ್ರದುರ್ಗದ ಅರಣ್ಯ ಇಲಾಖೆ ಹಾಗೂ ಆನೆ, ಬೀಡು ಬಿಟ್ಟಿರುವ ಸುತ್ತಮುತ್ತಲಿನ ಹಳ್ಳಿಯ ಜನರಿಗೆ ಪೀಕಲಾಟ ತಂದಿಟ್ಟಿದೆ. ಈ ಹಿನ್ನೆಲೆಯಲ್ಲಿ ಶನಿವಾರ ತಡರಾತ್ರಿ ವೇಳೆಗೆ ಸಕ್ರೆಬೈಲು ಆನೆ ಶಿಬಿರದಿಂದ ಸಾಗರ ಹಾಗೂ ಬಾಲಣ್ಣ ಎಂಬ ಎರಡು ಆನೆಗಳನ್ನು ಕರೆ ತಂದು ಕ್ಯಾಂಪ್‌ ಮಾಡಲಾಗಿದೆ. ಭಾನುವಾರ ಇಡೀ ದಿನ ವಾಚರ್ಸ್‌, ಟ್ರ್ಯಾಕರ್ಸ್‌ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಒಂಟಿ ಸಲಗ ಇರುವ ಜಾಗ ಪತ್ತೆ
ಮಾಡಲು ಹುಡುಕಾಟ ನಡೆಸಿದರು. ವಾಚರ್ಸ್‌ ಕಣ್ಣಿಗೆ ಸಲಗ ಗೋಚರವಾಗಿದೆ. ಸೋಮವಾರ ಮತ್ತೆ ಮೂರು ಆನೆಗಳು ಚಿತ್ರದುರ್ಗಕ್ಕೆ ಆಗಮಿಸಲಿದ್ದು, ಒಟ್ಟು ಐದು ಆನೆಗಳಿಂದ ಒಂಟಿ ಸಲಗದ ಕಾರ್ಯಾಚರಣೆ ಸೋಮವಾರ ಮಧ್ಯಾಹ್ನದ ಹೊತ್ತಿಗೆ ಆರಂಭವಾಗುವ ಸಾಧ್ಯತೆ ಇದೆ.

ಆನೆ ಕಾರ್ಯಾಚರಣೆಗಾಗಿ ಈಗಾಗಲೇ 6 ಮಂದಿ ಟ್ರ್ಯಾಕರ್ಸ್‌, ಇಬ್ಬರು ವೈದ್ಯರು ಬಂದಿದ್ದಾರೆ. ಭಾನುವಾರ ಅರಣ್ಯ ಇಲಾಖೆ ಬಳ್ಳಾರಿ ವಲಯ ಮುಖ್ಯ ಅರಣ್ಯ ಸಂರಕ್ಷಣಾಧಿ ಕಾರಿ ನಿಂಗರಾಜ್‌ ಕೂಡ ಆಗಮಿಸಿ ಮಾರ್ಗದರ್ಶನ ಮಾಡಿದ್ದಾರೆ.

ರೈತರ ಆತಂಕ: ಈ ವರ್ಷ ಅಪರೂಪಕ್ಕೆ ಒಳ್ಳೆ ಮಳೆಯಾಗಿದ್ದು ಮೆಕ್ಕೆಜೋಳ ಮತ್ತಿತರೆ ಬೆಳೆಗಳು ಹೊಲದಲ್ಲಿವೆ. ಈಗ ಬಂದು ಸೇರಿಕೊಂಡಿರುವ ಆನೆ ಬೆಳೆಗಳನ್ನು ಹಾಳು ಮಾಡುತ್ತಿದೆ. ತಕ್ಷಣ ಅರಣ್ಯ ಇಲಾಖೆ ಸಿಬ್ಬಂದಿ ಅದನ್ನು ಇಲ್ಲಿಂದ ಬೇರೆಡೆ ಕಳುಹಿಸಬೇಕು ಎಂದು ರೈತರು ಒತ್ತಾಯ ಮಾಡುತ್ತಿದ್ದಾರೆ.

ಜೋಗಿಮಟ್ಟಿ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಕುರುಮರಡಿಕೆರೆ, ಓಬಣ್ಣನಹಳ್ಳಿ, ನಂದೀಪುರ, ಇಂಗಳದಾಳು, ಕಕ್ಕೆಹರವು ಸೇರಿದಂತೆ ಸುತ್ತಮುತ್ತಲಿನ ರೈತರು ಭಯಭೀತರಾಗಿದ್ದಾರೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.