ಮಹಿಳೆಯರಿಗೆ ಸೃಜನಶೀಲತೆ-ಕ್ರಿಯಾಶೀಲತೆ ಮುಖ್ಯ
ಮುರುಘಾ ಮಠದಿಂದ ಮಹಿಳಾ ಪ್ರತಿಭೆಗಳಿಗೆ ಉತ್ತೇಜನ: ಡಾ| ಶಿವಮೂರ್ತಿ ಮುರುಘಾ ಶರಣರು
Team Udayavani, Oct 4, 2019, 3:36 PM IST
ಚಿತ್ರದುರ್ಗ: ಗಂಡಸರಿಗೆ ಮಕ್ಕಳನ್ನು ಹೆರುವುದಿಲ್ಲ. ಮಕ್ಕಳನ್ನು ಹೆರುವ ಭಾಗ್ಯ ಇರುವುದು ಹೆಣ್ಣುಮಕ್ಕಳಿಗೆ ಮಾತ್ರ. ಇಂದು ಹೆಣ್ಣು, ಗಂಡನ್ನು ಮೀರಿ ಜಗತ್ತಿನ ಗಮನ ಸೆಳೆಯುತ್ತಿದ್ದಾಳೆ ಎಂದು ಡಾ| ಶಿವಮೂರ್ತಿ ಮುರುಘಾ ಶರಣರು ಹೇಳಿದರು.
ಶರಣ ಸಂಸ್ಕೃತಿ ಉತ್ಸವದ ಅಂಗವಾಗಿ ಮುರುಘಾ ಮಠದ ಆವರಣದಲ್ಲಿ ಆಯೋಜಿಸಿರುವ ಮಹಿಳಾ ಕ್ರೀಡಾಕೂಟಕ್ಕೆ ಗುರುವಾರ ಚಾಲನೆ ನೀಡಿ ಶರಣರು ಆಶೀರ್ವಚನ ನೀಡಿದರು.
ಮುರುಘಾ ಮಠ ಮಹಿಳಾ ಪ್ರತಿಭೆಗಳಿಗೂ ಅವಕಾಶ ಮಾಡಿಕೊಡುತ್ತಿದೆ. ಮಹಿಳೆಯರು ತಮ್ಮಲ್ಲಿರುವ ಅದಮ್ಯ ಉತ್ಸಾಹ ಹಾಗೂ ಕ್ರಿಯಾಶೀಲತೆಯನ್ನು ಸಾಹಸಕ್ಕಾಗಿ ಬಳಸಿಕೊಂಡು ಸಾಹಸಿ ಸ್ತ್ರೀ ಎನ್ನಿಸಿಕೊಳ್ಳಬೇಕು. ಋಣಾತ್ಮಕವಾಗಿರುವ ಕೆಲಸಗಳಿಗೆ ನಿಮ್ಮ ಆಲೋಚನೆಗಳನ್ನು ಬಳಸಿಕೊಳ್ಳಬೇಡಿ. ಸೃಜನಶೀಲತೆ ಮತ್ತು ಕ್ರಿಯಾಶೀಲತೆ ಕಡೆಗೆ ಆಲೋಚನೆಗಳನ್ನು ಬೆಳೆಸಿಕೊಳ್ಳಬೇಕು ಎಂದರು.
ಕಾಗಿನೆಲೆ ಗುರುಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಮಾತನಾಡಿ, ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ, ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ವನಶ್ರೀ ಮಠದ ಶ್ರೀ ಬಸವಕುಮಾರ ಸ್ವಾಮೀಜಿ ಹಾಗೂ ಹರಗುರು ಚರಮೂರ್ತಿಗಳು ಉಪಸ್ಥಿತರಿದ್ದರು.
ಆರತಿ ಶಿವಮೂರ್ತಿ ಸ್ವಾಗತಿಸಿದರು. ಉಮೇಶ ಪತ್ತಾರ್ ಪ್ರಾರ್ಥಿಸಿದರು. ರೂಪಾ ವಿಜಯಕುಮಾರ್ ನಿರೂಪಿಸಿದರು. ಮೋಕ್ಷ ರುದ್ರಸ್ವಾಮಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ