ಶಿರಾ ಘಟಕ ಚಿತ್ರದುರ್ಗದಲ್ಲೇ ಉಳಿಸಿ

ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವಿಭಾಗೀಯ ಕಚೇರಿ ಮುಚ್ಚಿದರೆ ಜಿಲ್ಲೆಗೆ ಅನ್ಯಾಯ

Team Udayavani, Jun 12, 2019, 11:49 AM IST

15

ಚಿತ್ರದುರ್ಗ: ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಮಂಗಳವಾರ ಸಾರಿಗೆ ಸಂಸ್ಥೆಯ ವಿಭಾಗೀಯ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಚಿತ್ರದುರ್ಗ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಚಿತ್ರದುರ್ಗ ವಿಭಾಗದಲ್ಲೇ ಶಿರಾ ಘಟಕವನ್ನು ಉಳಿಸಬೇಕು ಹಾಗೂ ವಿಭಾಗದ ಆದಾಯ ಹೆಚ್ಚಳ ಮಾಡಲು ಗ್ರಾಮೀಣ, ನಗರ, ರಾಜ್ಯ, ಹೊರ ರಾಜ್ಯಗಳಿಗೆ ಹೊಸ ಮಾರ್ಗಗಳಲ್ಲಿ ಸಾರಿಗೆ ಬಸ್‌ ಓಡಿಸುವಂತೆ ಒತ್ತಾಯಿಸಿ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಮಂಗಳವಾರ ವಿಭಾಗೀಯ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.

ಜಿಲ್ಲೆಯ ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆಯಿಂದಾಗಿ ವಿಭಾಗ ಕೈ ತಪ್ಪುವ ಸಾಧ್ಯತೆ ಇದೆ. ಮಧ್ಯ ಕರ್ನಾಟಕದ ಜನತೆಗೆ ಕನಿಷ್ಠ ಸಾರಿಗೆ ಸೌಲಭ್ಯಗಳು ಇಲ್ಲ ಎಂದರೆ ಹೇಗೆ ಎಂದು ಖಾರವಾಗಿ ಪ್ರಶ್ನಿಸಿದರು. ವಿಭಾಗದ ಮೇಲಾಧಿಕಾರಿಗಳು ಹಾಗೂ ಅಧಿಕಾರಿಗಳು ದಕ್ಷತೆಯಿಂದ ಕೆಲಸ ಮಾಡಿದ್ದರೆ ಆದಾಯ ವೃದ್ಧಿಯಾಗಿ ವಿಭಾಗ ಲಾಭದತ್ತ ಹೋಗುತ್ತಿತ್ತು. ಆದರೆ ನಿತ್ಯ ನಷ್ಟದಲ್ಲಿ ಬಸ್‌ ಓಡಿಸಬೇಕಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ಕಚೇರಿ ಆರಂಭಿಸಲು ನಗರದ ಹೃದಯ ಭಾಗದಲ್ಲಿ 12 ಎಕರೆ ಭೂಮಿ ಹಾಗೂ ಸಕಲ ಸೌಲಭ್ಯಗಳಿವೆ. ನಿಲ್ದಾಣದಲ್ಲಿ ಕಟ್ಟಡ, ಅಧಿಕಾರಿಗಳ ಕೊಠಡಿ, ತರಬೇತಿ ಕೇಂದ್ರ, ಸಭಾಂಗಣ, ವಿಶ್ರಾಂತಿ ಕೊಠಡಿ ಸೌಲಭ್ಯವಿದೆ. ಚಿತ್ರದುರ್ಗ, ಚಳ್ಳಕೆರೆ, ಹೊಸದುರ್ಗ ಸಾರಿಗೆ ಬಸ್‌ ಡಿಪೋಗಳ ಜೊತೆಗೆ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ತುಮಕೂರು ಜಿಲ್ಲೆಯ ಶಿರಾ, ಪಾವಗಡ ಘಟಕಗಳನ್ನು ಚಿತ್ರದುರ್ಗ ವಿಭಾಗಕ್ಕೆ ಸೇರಿಸಿ ವಿಭಾಗ ತೆರೆಯಲಾಗಿದೆ. ಆದರೆ ಅಲ್ಲಿನ ಶಾಸಕರು ಹಾಗೂ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ಬಿ. ಸತ್ಯನಾರಾಯಣ ಶಿರಾ ಘಟಕ ವಾಪಸ್‌ಗೆ ಏಕಪಕ್ಷೀಯವಾಗಿ ನಿರ್ಧಾರ ಕೈಗೊಂಡಿದ್ದಾರೆ. ಯಾವುದೇ ಕಾರಣಕ್ಕೂ ಈ ವಿಭಾಗದಿಂದ ಶಿರಾ ಘಟಕ ಹೋಗಲು ಬಿಡುವುದಿಲ್ಲ. ಈ ವಿಭಾಗ ಉಳಿಯಬೇಕಾದರೆ ಶಿರಾ ಘಟಕ ಇಲ್ಲಿಯೇ ಉಳಿಯಬೇಕು ಎಂದು ಒತ್ತಾಯಿಸಿದರು.

ವಿಭಾಗ ಲಾಭದತ್ತ ಹೋಗಬೇಕಾದರೆ ಗ್ರಾಮೀಣ ಮಾರ್ಗಗಳಲ್ಲಿ ಸಾರಿಗೆ ಸೌಲಭ್ಯ ಕಲ್ಪಿಸಬೇಕು. ಪ್ರತಿದಿನ ಐದಾರು ಸುತ್ತು ಬಸ್‌ ಓಡಿಸಿದರೆ ಸಾಕಷ್ಟು ಆದಾಯ ಬರಲಿದೆ. ಅಲ್ಲದೆ ವೇಗದೂತ ಬಸ್‌ಗಳನ್ನು ಹೊರ ಜಿಲ್ಲೆ ಮಾರ್ಗಗಳಾದ ಚಿತ್ರದುರ್ಗದಿಂದ ಅಂಕೋಲಾ ವಯಾ ಶಿವಮೊಗ್ಗ, ಸಾಗರ, ಚಿತ್ರದುರ್ಗದಿಂದ ಹೊರನಾಡು ವಯಾ ಶಿವಮೊಗ್ಗ, ಶೃಂಗೇರಿ ಅಥವಾ ಚಿಕ್ಕಮಗಳೂರು, ಅಂತಾರಾಜ್ಯ ಮಾರ್ಗಗಳಾದ ಚಿತ್ರದುರ್ಗದಿಂದ ಶಿರಡಿ, ಮಂತ್ರಾಲಯ, ಕೊಯಮತ್ತೂರು, ಮಧುರೈ, ಶ್ರೀಶೈಲ, ಊಟಿ, ಹೊಗೆನಕಲ್, ಪಾಲಕ್ಕಾಡ್‌ ಮತ್ತಿತರ ಮಾರ್ಗಗಳಿಗೆ ಬಸ್‌ ಸಂಚಾರ ಆರಂಭಿಸಬೇಕು ಎಂದು ಮನವಿ ಮಾಡಿದರು.

ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ನುಲೇನೂರು ಎಂ. ಶಂಕರಪ್ಪ, ಉಪಾಧ್ಯಕ್ಷ ಕೆ.ಪಿ. ಭೂತಯ್ಯ, ಬಸ್ತಿಹಳ್ಳಿ ಸುರೇಶ್‌ಬಾಬು, ಜಿ.ಎಸ್‌. ತಿಪ್ಪೇಸ್ವಾಮಿ ಇದ್ದರು.

ಘಟಕ ವಾಪಸ್‌ ಹೋದ್ರೆ ನಷ್ಟ ಭೀತಿ
ಶಿರಾ ಘಟಕದಿಂದ ಪ್ರತಿನಿತ್ಯ 9 ಲಕ್ಷ ರೂ.ಗಿಂತ ಅಧಿಕ ಆದಾಯ ಬರುತ್ತಿದೆ. ಇಡೀ ವಿಭಾಗದಲ್ಲಿ ಚಿತ್ರದುರ್ಗ ಮತ್ತು ಶಿರಾ ಘಟಕಗಳೇ ಹೆಚ್ಚು ಆದಾಯ ತರುವ ಘಟಕಗಳಾಗಿದ್ದು, ಶಿರಾ ಘಟಕ ವಾಪಸ್‌ ಪಡೆಯುವುದರಿಂದ ನಷ್ಟದ ಪ್ರಮಾಣ ಹೆಚ್ಚಾಗಿ ಕೊನೆಗೆ ವಿಭಾಗ ಮುಚ್ಚುವ ಸಾಧ್ಯತೆ ದಟ್ಟವಾಗಿದೆ ಎಂದು ಪ್ರತಿಭಟನಾಕಾರರು ಆತಂಕ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.