ಶಿವಾಜಿ ಮಹಾರಾಜರ ಆದರ್ಶ ಪಾಲಿಸಿ
ಪರೋಪಕಾರಿ ಸಂಘಟನೆಗಳ ಸಂಖ್ಯೆ ಕ್ಷೀಣ•ಸಮಾಜದ ಅಭಿವೃದ್ಧಿಗೆ ಬದ್ಧರಾಗಿ•ಸಹಾಯಧನ ವಿತರಣೆ
Team Udayavani, Jul 22, 2019, 11:51 AM IST
ಚಿತ್ರದುರ್ಗ: ಶಿವಾಜಿ ಮಹಾರಾಜರ ಜಯಂತಿ ಸಮಾರಂಭವನ್ನು ಬೆಂಗಳೂರು ಗವಿಪುರಂ ಭವಾನಿ ಪೀಠ, ಗೋಸಾಯಿ ಮಹಾಸಂಸ್ಥಾನ ಪೀಠದ ವೇದಾಂತಚಾರ್ಯ ಶ್ರೀ ಮಂಜುನಾಥಸ್ವಾಮಿ ಉದ್ಘಾಟಿಸಿದರು.
ಚಿತ್ರದುರ್ಗ: ಶಿವಾಜಿ ಮಹಾರಾಜರು ಒಂದು ಸಮುದಾಯದ ಪ್ರಗತಿಗೆ ಕಾರಣರಾಗದೇ ಸರ್ವ ಸಮುದಾಯಗಳ ಏಳ್ಗೆ ಬಯಸಿದ್ದರು. ಅಲ್ಲದೆ ಭವ್ಯ ಭಾರತಕ್ಕೆ ಛತ್ರಪತಿ ಶಿವಾಜಿ ಮಹಾರಾಜರ ಕೊಡುಗೆ ಅಪಾರವಾಗಿದೆ ಎಂದು ಬೆಂಗಳೂರು ಗವಿಪುರಂ ಭವಾನಿ ಪೀಠ, ಗೋಸಾಯಿ ಮಹಾಸಂಸ್ಥಾನ ಪೀಠದ ವೇದಾಂತಚಾರ್ಯ ಶ್ರೀ ಮಂಜುನಾಥಸ್ವಾಮಿ ಹೇಳಿದರು.
ನಗರದ ತರಾಸು ರಂಗಮಂದಿರಲ್ಲಿ ಕರ್ನಾಟಕ ಕ್ಷತ್ರೀಯ ಮರಾಠಾ ಪರಿಷತ್ ಹಾಗೂ ಕೆಕೆಎಂಪಿ ಜಿಲ್ಲಾ ಘಟಕದಿಂದ ಭಾನುವಾರ ಹಮ್ಮಿಕೊಂಡಿದ್ದ ಛತ್ರಪತಿ ಶಿವಾಜಿ ಮಹಾರಾಜರ 392ನೇ ಜಯಂತಿ, ವಿದ್ಯಾರ್ಥಿ ವೇತನ ಹಾಗೂ ಸಹಾಯ ಧನ ವಿತರಣಾ ಸಮಾರಂಭ ಉದ್ಘಾಟಿಸಿ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ಧರ್ಮ ರಹಿತ ಮತ್ತು ಧರ್ಮ ವಿರೋಧಿಯಾಗಿ ನಡೆದುಕೊಳ್ಳುವವರನ್ನು ಧರ್ಮದ ದಾರಿಗೆ ಕರೆತರುವ ಶಕ್ತಿ ಅವರಲ್ಲಿತ್ತು. ಶಿವಾಜಿಯವರ ಬದುಕು, ಜೀವನ ಚರಿತ್ರೆ, ಅತ್ಯಮೂಲ್ಯವಾಗಿದೆ. ಅವರು ತಾಯಿ, ಗುರು ಹಾಗೂ ಧೈವಿ ಭಕ್ತಿಗೆ ಹೆಚ್ಚು ಮನ್ನಣೆ ನೀಡುತ್ತಿದ್ದರು ಎಂದು ಹೇಳಿದರು.
ಇತಿಹಾಸದ ಪುಟಗಳನ್ನು ಸೂಕ್ಷ್ಮವಾಗಿ ಅಧ್ಯಯನ ಮಾಡಿದರೆ ಕೆಲವೇ ಕೆಲವರಿಗೆ ದೇವರ ಪ್ರತ್ಯಕ್ಷರಾಗಿದ್ದು, ಅದರಲ್ಲಿ ಶಿವಾಜಿ ಮಹಾರಾಜರಿಗೆ ತುಳಜಾ ಭವಾನಿ ಪ್ರತ್ಯಕ್ಷಳಾಗಿ ಧರ್ಮ ಹಾಗೂ ನೀತಿ ವಿರುದ್ಧ ನಡೆದುಕೊಳ್ಳುವವರನ್ನು ಸರಿದಾರಿಗೆ ತರಲು ಖಡ್ಗವನ್ನು ಪಡೆದುಕೊಂಡ ಕೀರ್ತಿ ಶಿವಾಜಿ ಮಹಾರಾಜರಿಗೆ ಸಲ್ಲುತ್ತದೆ ಎಂದರು.
ಸಮಾಜದ ಶ್ರೇಯೋಭಿವೃದ್ಧಿಗೆ ಸಂಘಟನೆ ಪ್ರಮುಖವಾಗಿದೆ. ಈ ನಿಟ್ಟಿನಲ್ಲಿ ಸಮಾಜದ ಸಂಘಟಕರು ಶಿವಾಜಿ ಮಹಾರಾಜರ 392ನೇ ಜಯಂತಿ ಆಚರಣೆ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಇಂದಿನ ಜಗತ್ತಿನಲ್ಲಿ ಪರೋಪಕಾರಿ ಸಂಘಟನೆಗಳು ಕಡಿಮೆ ಆಗಿವೆ. ಶಿಕ್ಷಣ, ಸಂಸ್ಥಾನ ಹಾಗೂ ಸಂಘಟನೆಗೆ ಹೆಚ್ಚು ಒತ್ತು ನೀಡಿದರೆ ಉನ್ನತ ಪ್ರಗತಿ ಸಾಧಿಸಬಹುದಾಗಿದೆ ಎಂದು ತಿಳಿಸಿದರು.
ಕಬೀರಾನಂದಾಶ್ರಮದ ಶಿವಲಿಂಗಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಮಾತನಾಡಿ, ಶಿವಾಜಿ ದೇಶ ಕಂಡ ಪರಮ ದೇಶ ಭಕ್ತ. ಹಿಂದೂ ಸಮಾಜಕ್ಕೆ ಅವರ ಕೊಡುಗೆ ಅಪಾರ. ಗುರು ಇಲ್ಲದ ಮನೆಗೆ ಗುರಿ ಇರುವುದಿಲ್ಲ. ಶಿವಾಜಿ ಮಹಾರಾಜರ ಹೋರಾಟದಿಂದ ನಮ್ಮ ದೇವಾಲಯಗಳು ಮತ್ತು ಸಂಸ್ಕೃತಿ ಉಳಿಯುವಂತೆ ಮಾಡಿತ್ತು. ಮೊಘಲರ ವಿರುದ್ಧ ಹೋರಾಟದಿಂದ ಮಹಾರಾಷ್ಟ್ರದಲ್ಲಿ ದೇವಾಲಯಗಳು ಉಳಿದಿವೆ. ಹಿಂದೂಗಳಿಗೆ ಇರುವುದು ಒಂದೇ ದೇಶ. ಅಂದಿನ ಕಾಲದಲ್ಲಿ ದೇವರನ್ನು ಪೂಜಿಸಲು ಕಷ್ಟ ಪಡುವಂತಹ ವಾತಾವರಣವಿತ್ತು. ಬಾಲ್ಯದಿಂದ ಶಿವಾಜಿ ಅವರಿಗೆ ತಾಯಿ ಧೀರ ವೀರರ ಕಥೆಗಳನ್ನು ಹೇಳಿಕೊಂಡು ಬೆಳೆಸಿದರು. ಶಿವಾಜಿಗೆ ಧರ್ಮದ ಬಗ್ಗೆ ಸ್ಪಷ್ಟವಾದ ನಿಲುವು ಇತ್ತು ಎಂದರು.
ಒಂದು ಸಮುದಾಯದ ಸಂಘಟನೆ ತುಂಬ ಕಷ್ಟ. ಕ್ಷತ್ರೀಯ ಮರಾಠಾ ಪರಿಷತ್ ಇಂದು ಚಿತ್ರದುರ್ಗದಲ್ಲಿ ಇಂತಹ ಕಾರ್ಯಕ್ರಮ ಆಯೋಜನೆ ಮಾಡಿ ಮರಾಠಾ ಸಮುದಾಯದ ಸಂಘಟನೆ ಮುಂದಾಗಿದೆ ಇದು ಉತ್ತಮ ಬೆಳವಣಿಗೆ ಎಂದು ತಿಳಿಸಿದರು.
ರಾಜ್ಯ ಕ್ಷತ್ರಿಯ ಮರಾಠಾ ಪರಿಷತ್ ಗೌರ್ನಿಂಗ್ ಕೌನ್ಸಿಲ್ ಛೇರ್ಮನ್ ರಾಣೋಜಿರಾವ್ ಸಾಠೆ ಮಾತನಾಡಿ, ಮರಾಠಾ ಸಮಾಜವನ್ನು 3-ಬಿ ಮೀಸಲಾತಿಯಿಂದ 2-ಎ ಪ್ರವರ್ಗಕ್ಕೆ ಸೇರ್ಪಡೆ ಮಾಡಬೇಕು. ಸಮಾಜದ ಸರ್ವಾಂಗೀಣ ಪ್ರಗತಿಗಾಗಿ ಮರಾಠಾ ಅಭಿವೃದ್ಧಿ ನಿಗಮವನ್ನೂ ಸ್ಥಾಪಿಸಬೇಕು ಶಿವಾಜಿ ಹೆಸರಿನಲ್ಲಿ ನಾವೆಲ್ಲ ಸಂಘಟಿತರಾಗುವ ಮೂಲಕ ರಾಜಕೀಯ, ಶೈಕ್ಷಣಿಕ, ಸಾಮಾಜಿಕ, ಆರ್ಥಿಕವಾಗಿ ಪ್ರಗತಿ ಹೊಂದಬೇಕಿದೆ. ಜಿಲ್ಲೆಯ ಸಮುದಾಯದವರೆಲ್ಲರೂ ಒಂದೇ ವೇದಿಕೆಯಲ್ಲಿ ಸಂಘಟಿತರಾಗಬೇಕು. ಸಮಾಜದ ಸಂಘಟನೆ ಬಗ್ಗೆ ಪ್ರತಿಯೊಬ್ಬರೂ ಚಿಂತನೆ ಮಾಡುವ ಅಗತ್ಯವಿದೆ. ಸಂಘಟನೆಯ ಮೂಲಕ ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ಸಮಾಜದ ಅಭಿವೃದ್ಧಿಗೆ ಗುರುಪೀಠ ಮುಖ್ಯವಾಗಿದೆ. ಪರಿಷತ್ನಿಂದ ಈಗಾಗಲೇ ಉಚಿತ ವಿದ್ಯಾರ್ಥಿ ನಿಲಯ ಸ್ಥಾಪಿಸಿದ್ದು, ಬಡ ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು.
ಕರ್ನಾಟಕ ಕ್ಷತ್ರೀಯ ಮರಾಠ ಪರಿಷತ್ ರಾಜ್ಯ ಘಟಕದ ಅಧ್ಯಕ್ಷ ಎಸ್.ಸುರೇಶ್ ರಾವ್ ಸಾಠೆ, ಗೌರವ ಖಜಾಂಚಿ ಟಿ.ಆರ್.ವೆಂಕಟರಾವ್ ಚವ್ಹಾಣ, ಕೆಕೆಎಂಪಿ ಜಿಲ್ಲಾ ಘಟಕದ ಅಧ್ಯಕ್ಷ ಜೆ.ಗೋಪಾಲರಾವ್ ಜಾಧವ್, ಮರಾಠಾ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಸುರೇಶ್ ರಾವ್ ಜಾಧವ್, ಜೀಜಾಮಾತಾ ಮಹಿಳಾ ಮಂಡಳಿ ಅಧ್ಯಕ್ಷೆ ಉಷಾಬಾಯಿ ಗೋಪಾಲರಾವ್ ಜಾಧವ್, ನಾಗರಾಜ್ ಬೇದ್ರೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ