ಚದುರಂಗದಿಂದ ಬುದ್ಧಿ ಶಕ್ತಿ ಚುರುಕು: ಮುರುಘಾ ಶ್ರೀ

ಮಕ್ಕಳನ್ನು ಬಾಲ್ಯದಿಂದಲೇ ಚದುರಂಗ ಆಟದಲ್ಲಿ ತೊಡಗಿಸಿ ಬುದ್ಧಿಶಕ್ತಿ ಸಕ್ರಿಯವಾಗಿರುವಂತೆ ನೋಡಿಕೊಳ್ಳುವುದು ಅಗತ್ಯ

Team Udayavani, Sep 23, 2019, 7:13 PM IST

23-Sepctember-26

ಚಿತ್ರದುರ್ಗ: ಚಿನ್ನ, ಬೆಳ್ಳಿ, ಹಣ, ಆಸ್ತಿ ಕಳೆದುಹೋಗಬಹುದು. ಆದರೆ ಬುದ್ಧಿಮತ್ತೆ ಕಳೆದು ಹೋಗುವುದಿಲ್ಲ. ಇದು ಬದುಕಿನ ಆಸ್ತಿ ಎಂದು ಡಾ| ಶಿವಮೂರ್ತಿ ಮುರುಘಾ ಶರಣರು ಹೇಳಿದರು.

ದಸರಾ ಮತ್ತು ಶರಣ ಸಂಸ್ಕೃತಿ ಉತ್ಸವದ ಅಂಗವಾಗಿ ಮುರುಘಾ ಮಠದ ಬಸವೇಶ್ವರ ಸಭಾಂಗಣದಲ್ಲಿ ಅಶ್ವ ಚೆಸ್‌ ಅಕಾಡೆಮಿ, ಮುರುಘಾಮಠ ಹಾಗೂ ಜಿಲ್ಲಾ ಆರ್‌.ಡಿ.ಪಿ.ಆರ್‌ ನೌಕರರ ಸಂಘದ ವತಿಯಿಂದ ಭಾನುವಾರ ಆಯೋಜಿಸಿದ್ದ ರಾಜ್ಯ ಮಟ್ಟದ ಮುಕ್ತ ಚದುರಂಗ ಸ್ಪರ್ಧೆಯನ್ನು ಉದ್ಘಾಟಿಸಿ ಶರಣರು ಆಶೀರ್ವಚನ ನೀಡಿದರು.

ಮಾನವನ ಮೆದುಳಿಗೆ ಬುದ್ಧಿ ಪ್ರವೇಶವಾದರೆ ಯಾವತ್ತೂ ಕಳೆದು ಹೋಗುವುದಿಲ್ಲ, ಬುದ್ಧಿಶಕ್ತಿ ಸಕ್ರಿಯವಾಗಿರುವವರೆಗೆ ಸಾಧನೆ ಸಾಗುತ್ತಾ ಹೋಗುತ್ತದೆ ಎಂದರು.

ಕೆಲವರು ಚದುರಂಗ ಆಡುತ್ತಾರೆ, ಮತ್ತೆ ಕೆಲವರ ಜೀವನವೇ ಚದುರಂಗದ ಆಟದಂತೆ ಆಗಿರುತ್ತದೆ. ಚದುರಂಗದಲ್ಲಿ ಯಶಸ್ಸು ಸಿಗಬೇಕಾದರೆ ಬೌದ್ಧಿಕತೆ ಬೇಕು. ತಂತ್ರಗಾರಿಕೆ, ಬುದ್ಧಿ ಚುರುಕು ಮತ್ತು ತೀಕ್ಷಣ್ಣ ಆಗಿರಬೇಕು. ಹಾಗಾಗಿ ಮಕ್ಕಳಿಗೆ ಚಿಕ್ಕವಯಸ್ಸಿನಲ್ಲೇ ಚದುರಂಗದ ಆಟಕ್ಕೆ ಉತ್ತೇಜನ ನೀಡಬೇಕು ಎಂದು ಕರೆ ನೀಡಿದರು.

ಜಿಪಂ ಸದಸ್ಯ ನರಸಿಂಹರಾಜು ಮಾತನಾಡಿ, ಮನಸ್ಸಿನ ಏಕಾಗ್ರತೆಗೆ ಚೆಸ್‌ ಆಟ ತುಂಬಾ ಸಹಕಾರಿ. ಪೋಷಕರು ಇಂತಹ ಬುದ್ಧಿವಂತಿಕೆಯ ಆಟದ ಕಡೆಗೆ ಮಕ್ಕಳನ್ನು ಪ್ರೇರೇಪಿಸಬೇಕು. ಮಕ್ಕಳ ಜೀವನದಲ್ಲಿ ಓದು ಒಂದು ಭಾಗವಾದರೆ ಕ್ರೀಡೆ ಒಂದು ಭಾಗ ಆಗಬೇಕು. ಹಾಗಾಗಿ ಮಕ್ಕಳಿಗೆ ಕೇವಲ ಪಠ್ಯಕ್ಕೆ ಸೀಮಿತ ಮಾಡದೇ ಕ್ರೀಡೆಗೂ ಹೆಚ್ಚಿನ ಆಸಕ್ತಿ ಮೂಡಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಜಿಪಂ ಮಾಜಿ ಉಪಾಧ್ಯಕ್ಷ ಎಚ್‌.ಎನ್‌. ತಿಪ್ಪೇಸ್ವಾಮಿ, ತಾಪಂ ಅಧ್ಯಕ್ಷ ಡಿ.ಎಂ.ಲಿಂಗರಾಜು, ಇಒ ಎಚ್‌. ಕೃಷ್ಣಾ ನಾಯ್ಕ, ಸಹಾಯಕ ನಿರ್ದೇಶಕ ಎಚ್‌. ಹನುಮಂತಪ್ಪ, ಜಿಲ್ಲಾ ಸರ್ಕಾರಿ ನೌಕರರ ಸಂಘದ ನಿರ್ದೇಶಕ ಮಂಜುನಾಥ ಚಿಕ್ಕಂದವಾಡಿ, ಎಸ್‌.ಎಂ. ಸಂತೋಷ್‌ಕುಮಾರ್‌, ಆರ್‌ಡಿಪಿಆರ್‌ ಇಲಾಖಾ ನೌಕರರ ಸಂಘದ ಸಂಘಟನಾ ಕಾರ್ಯದರ್ಶಿ ಟಿ. ವೀರೇಶ್‌, ಅಶ್ವ ಚೆಸ್‌ ಅಕಾಡೆಮಿ ಅಧ್ಯಕ್ಷ ನವೀನ್‌ ಮತ್ತಿತರರು ಭಾಗವಹಿಸಿದ್ದರು.

ಚಿತ್ರದುರ್ಗ, ದಾವಣಗೆರೆ, ಬೆಂಗಳೂರು, ಮೈಸೂರು, ಶಿವಮೊಗ್ಗ, ಕಲಬುರಗಿ, ಬಾಗಲಕೋಟೆ, ತುಮಕೂರು, ಕೊಪ್ಪಳ, ಹಾಸನ ಸೇರಿದಂತೆ ವಿವಿಧ ಜಿಲ್ಲೆಗಳಿಂದ 19 ಅಂಧರು ಸೇರಿ 180ಕ್ಕೂ ಹೆಚ್ಚು ಚೆಸ್‌ ಆಟಗಾರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

ಕೂಜಿಮಲೆಗೆ ಭೇಟಿ ನೀಡಿದ್ದು 4 ನಕ್ಸಲರು: ಸಶಸ್ತ್ರಧಾರಿ ತಲಾ ಇಬ್ಬರು ಮಹಿಳೆಯರು,ಪುರುಷರ ಸಂಚಾರ

ಕೂಜಿಮಲೆಗೆ ಭೇಟಿ ನೀಡಿದ್ದು 4 ನಕ್ಸಲರು: ಸಶಸ್ತ್ರಧಾರಿ ತಲಾ ಇಬ್ಬರು ಮಹಿಳೆಯರು,ಪುರುಷರ ಸಂಚಾರ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.