ಚದುರಂಗದಿಂದ ಬುದ್ಧಿ ಶಕ್ತಿ ಚುರುಕು: ಮುರುಘಾ ಶ್ರೀ

ಮಕ್ಕಳನ್ನು ಬಾಲ್ಯದಿಂದಲೇ ಚದುರಂಗ ಆಟದಲ್ಲಿ ತೊಡಗಿಸಿ ಬುದ್ಧಿಶಕ್ತಿ ಸಕ್ರಿಯವಾಗಿರುವಂತೆ ನೋಡಿಕೊಳ್ಳುವುದು ಅಗತ್ಯ

Team Udayavani, Sep 23, 2019, 7:13 PM IST

23-Sepctember-26

ಚಿತ್ರದುರ್ಗ: ಚಿನ್ನ, ಬೆಳ್ಳಿ, ಹಣ, ಆಸ್ತಿ ಕಳೆದುಹೋಗಬಹುದು. ಆದರೆ ಬುದ್ಧಿಮತ್ತೆ ಕಳೆದು ಹೋಗುವುದಿಲ್ಲ. ಇದು ಬದುಕಿನ ಆಸ್ತಿ ಎಂದು ಡಾ| ಶಿವಮೂರ್ತಿ ಮುರುಘಾ ಶರಣರು ಹೇಳಿದರು.

ದಸರಾ ಮತ್ತು ಶರಣ ಸಂಸ್ಕೃತಿ ಉತ್ಸವದ ಅಂಗವಾಗಿ ಮುರುಘಾ ಮಠದ ಬಸವೇಶ್ವರ ಸಭಾಂಗಣದಲ್ಲಿ ಅಶ್ವ ಚೆಸ್‌ ಅಕಾಡೆಮಿ, ಮುರುಘಾಮಠ ಹಾಗೂ ಜಿಲ್ಲಾ ಆರ್‌.ಡಿ.ಪಿ.ಆರ್‌ ನೌಕರರ ಸಂಘದ ವತಿಯಿಂದ ಭಾನುವಾರ ಆಯೋಜಿಸಿದ್ದ ರಾಜ್ಯ ಮಟ್ಟದ ಮುಕ್ತ ಚದುರಂಗ ಸ್ಪರ್ಧೆಯನ್ನು ಉದ್ಘಾಟಿಸಿ ಶರಣರು ಆಶೀರ್ವಚನ ನೀಡಿದರು.

ಮಾನವನ ಮೆದುಳಿಗೆ ಬುದ್ಧಿ ಪ್ರವೇಶವಾದರೆ ಯಾವತ್ತೂ ಕಳೆದು ಹೋಗುವುದಿಲ್ಲ, ಬುದ್ಧಿಶಕ್ತಿ ಸಕ್ರಿಯವಾಗಿರುವವರೆಗೆ ಸಾಧನೆ ಸಾಗುತ್ತಾ ಹೋಗುತ್ತದೆ ಎಂದರು.

ಕೆಲವರು ಚದುರಂಗ ಆಡುತ್ತಾರೆ, ಮತ್ತೆ ಕೆಲವರ ಜೀವನವೇ ಚದುರಂಗದ ಆಟದಂತೆ ಆಗಿರುತ್ತದೆ. ಚದುರಂಗದಲ್ಲಿ ಯಶಸ್ಸು ಸಿಗಬೇಕಾದರೆ ಬೌದ್ಧಿಕತೆ ಬೇಕು. ತಂತ್ರಗಾರಿಕೆ, ಬುದ್ಧಿ ಚುರುಕು ಮತ್ತು ತೀಕ್ಷಣ್ಣ ಆಗಿರಬೇಕು. ಹಾಗಾಗಿ ಮಕ್ಕಳಿಗೆ ಚಿಕ್ಕವಯಸ್ಸಿನಲ್ಲೇ ಚದುರಂಗದ ಆಟಕ್ಕೆ ಉತ್ತೇಜನ ನೀಡಬೇಕು ಎಂದು ಕರೆ ನೀಡಿದರು.

ಜಿಪಂ ಸದಸ್ಯ ನರಸಿಂಹರಾಜು ಮಾತನಾಡಿ, ಮನಸ್ಸಿನ ಏಕಾಗ್ರತೆಗೆ ಚೆಸ್‌ ಆಟ ತುಂಬಾ ಸಹಕಾರಿ. ಪೋಷಕರು ಇಂತಹ ಬುದ್ಧಿವಂತಿಕೆಯ ಆಟದ ಕಡೆಗೆ ಮಕ್ಕಳನ್ನು ಪ್ರೇರೇಪಿಸಬೇಕು. ಮಕ್ಕಳ ಜೀವನದಲ್ಲಿ ಓದು ಒಂದು ಭಾಗವಾದರೆ ಕ್ರೀಡೆ ಒಂದು ಭಾಗ ಆಗಬೇಕು. ಹಾಗಾಗಿ ಮಕ್ಕಳಿಗೆ ಕೇವಲ ಪಠ್ಯಕ್ಕೆ ಸೀಮಿತ ಮಾಡದೇ ಕ್ರೀಡೆಗೂ ಹೆಚ್ಚಿನ ಆಸಕ್ತಿ ಮೂಡಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಜಿಪಂ ಮಾಜಿ ಉಪಾಧ್ಯಕ್ಷ ಎಚ್‌.ಎನ್‌. ತಿಪ್ಪೇಸ್ವಾಮಿ, ತಾಪಂ ಅಧ್ಯಕ್ಷ ಡಿ.ಎಂ.ಲಿಂಗರಾಜು, ಇಒ ಎಚ್‌. ಕೃಷ್ಣಾ ನಾಯ್ಕ, ಸಹಾಯಕ ನಿರ್ದೇಶಕ ಎಚ್‌. ಹನುಮಂತಪ್ಪ, ಜಿಲ್ಲಾ ಸರ್ಕಾರಿ ನೌಕರರ ಸಂಘದ ನಿರ್ದೇಶಕ ಮಂಜುನಾಥ ಚಿಕ್ಕಂದವಾಡಿ, ಎಸ್‌.ಎಂ. ಸಂತೋಷ್‌ಕುಮಾರ್‌, ಆರ್‌ಡಿಪಿಆರ್‌ ಇಲಾಖಾ ನೌಕರರ ಸಂಘದ ಸಂಘಟನಾ ಕಾರ್ಯದರ್ಶಿ ಟಿ. ವೀರೇಶ್‌, ಅಶ್ವ ಚೆಸ್‌ ಅಕಾಡೆಮಿ ಅಧ್ಯಕ್ಷ ನವೀನ್‌ ಮತ್ತಿತರರು ಭಾಗವಹಿಸಿದ್ದರು.

ಚಿತ್ರದುರ್ಗ, ದಾವಣಗೆರೆ, ಬೆಂಗಳೂರು, ಮೈಸೂರು, ಶಿವಮೊಗ್ಗ, ಕಲಬುರಗಿ, ಬಾಗಲಕೋಟೆ, ತುಮಕೂರು, ಕೊಪ್ಪಳ, ಹಾಸನ ಸೇರಿದಂತೆ ವಿವಿಧ ಜಿಲ್ಲೆಗಳಿಂದ 19 ಅಂಧರು ಸೇರಿ 180ಕ್ಕೂ ಹೆಚ್ಚು ಚೆಸ್‌ ಆಟಗಾರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.