ಏಕಾಗ್ರತೆ ಇಲ್ಲದಿದ್ರೆ ಸಾಧನೆ ಅಸಾಧ್ಯ

ಸಾಮಾಜಿಕ ವ್ಯವಸ್ಥೆಯಲ್ಲಿರುವ ಕಂದಕ ನಿವಾರಣೆಗೆ ಪ್ರತಿಯೊಬ್ಬರೂ ಶ್ರಮಿಸಿ: ಮುರುಘಾ ಶರಣರು

Team Udayavani, Aug 9, 2019, 12:36 PM IST

9-Agust-19

ಹೊಳಲ್ಕೆರೆ: ಚಿಕ್ಕಜಾಜೂರಿನಲ್ಲಿ ನಡೆದ 'ಕಲ್ಯಾಣ ದರ್ಶನ' ಕಾರ್ಯಕ್ರಮದಲ್ಲಿ ಡಾ| ಶಿವಮೂರ್ತಿ ಮುರುಘಾ ಶರಣರು ಆಶೀರ್ವಚನ ನೀಡಿದರು.

ಹೊಳಲ್ಕೆರೆ: ಏಕಾಗ್ರತೆಯನ್ನು ಯಾರು ಒಲಿಸಿಕೊಳ್ಳುತ್ತಾರೆಯೋ ಅಂಥವರು ಮಹಾನ್‌ ವ್ಯಕ್ತಿಗಳಾಗುತ್ತಾರೆ. ಏಕಾಗ್ರತೆ ಅಂದರೆ ಓದು, ಬರವಣಿಗೆ, ಕರ್ತವ್ಯ, ಧರ್ಮಪಾಲನೆ. ಅವುಗಳನ್ನು ಅತ್ಯಂತ ಯಶಸ್ವಿಯಾಗಿ ಮಾಡಲು ಬೇಕಾಗಿರುವ ಸ್ಥಿತಿಯೇ ಏಕಾಗ್ರತೆ ಎಂದು ಚಿತ್ರದುರ್ಗ ಮುರುಘಾ ಮಠದ ಡಾ| ಶಿವಮೂರ್ತಿ ಮುರುಘಾ ಶರಣರು ಹೇಳಿದರು.

ಶ್ರಾವಣ ಮಾಸದ ಅಂಗವಾಗಿ ಚಿತ್ರದುರ್ಗ ಮರುಘಾಮಠ ಹಾಗೂ ಚಿಕ್ಕಜಾಜೂರು ಗ್ರಾಮಸ್ಥರ ಸಹಯೋಗದಲ್ಲಿ ಗುರುವಾರ ತಾಲೂಕಿನ ಚಿಕ್ಕಜಾಜೂರು ಗ್ರಾಮದಲ್ಲಿ ಆಯೋಜಿಸಿದ್ದ ‘ಕಲ್ಯಾಣ ದರ್ಶನ’ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಶರಣರು ಆಶೀರ್ವಚನ ನೀಡಿದರು.

2600 ವರ್ಷಗಳ ಹಿಂದೆ ಇದ್ದ ಬುದ್ಧನ ಹೆಸರು ಇಂದಿಗೂ ಉಳಿದಿದೆ. ಅದಕ್ಕೆ ಕಾರಣ ಅವರ ನಿರಂತರವಾದ ಪರಿಶುದ್ಧ ಏಕಾಗ್ರತೆ. ಪ್ರತಿಯೊಬ್ಬರು ಏಕಾಗ್ರತೆಯನ್ನು ಹೊಂದಬೇಕು. ಆಗ ಮಾತ್ರ ಸಮಾಜದ ಕಲ್ಯಾಣಕ್ಕೆ ಚಿಂತನೆ ಮಾಡಲು ಸಾಧ್ಯ. ಸಾಮಾಜಿಕವಾಗಿ ವ್ಯವಸ್ಥೆಯಲ್ಲಿ ಸಾಕಷ್ಟು ಕಂದಕಗಳಿವೆ. ಅವುಗಳನ್ನು ಹೊಗಲಾಡಿಸುವ ಕೆಲಸ ಆಗಬೇಕು. ಅದನ್ನು ಹನ್ನೆರಡನೇ ಶತಮಾನದಲ್ಲಿ ಬಸವಣ್ಣ ಮಾಡಿದ್ದಾನೆ. ಅವುಗಳನ್ನು ಬಸವ ತತ್ವ ಎಂದು ಕರೆಯುವ ನಾವು ಬಸವಣ್ಣನ ಚಿಂತನೆಯನ್ನು ಅನುಸರಿಸುವ ಕೆಲಸ ಮಾಡಲು ಏಕಾಗ್ರತೆ ಬೇಕೆಂದರು.

ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಯೊಬ್ಬರೂ ನಿರಂತರ ಪ್ರಯತ್ನ, ಹೋರಾಟ ಮಾಡಬೇಕಿದೆ. ಮನುಷ್ಯನ ಮೆದುಳು ಸಾಮಾನ್ಯವಾದುದಲ್ಲ. ಅದು ವಿಪರಿತ ಕೆಲಸ ಮಾಡುತ್ತದೆ ಎನ್ನುವುದಕ್ಕೆ ಚಂದ್ರಯಾನದಂತಹ ಮಹತ್ಸಾಧನೆ ನಮ್ಮ ಎದುರಿಗಿದೆ. ನಾವು ಎಂದೂ ದುರ್ಬಲರಲ್ಲ, ಸಂಕೋಲೆಗಳಿಗೆ ಸಿಕ್ಕಿ ದುರ್ಬಲರು ಎನ್ನುವ ಮನೋಭಾವನೆ ಬೆಳೆಸಿಕೊಳ್ಳದೆ ಸಾಧನೆಯ ಹಾದಿಯಲ್ಲಿ ಸಾಗಿದಾಗ ಎಲ್ಲರಿಗಿಂತ ಪ್ರಬಲರಾಗಬಹುದು ಎಂದು ತಿಳಿಸಿದರು.

ಉಪನ್ಯಾಸ ನೀಡಿದ ಸಿದ್ದವ್ವನಹಳ್ಳಿ ವೀರೇಶ್‌ಕುಮಾರ್‌, ಇಂದು ಮಾನವ ಉತ್ತಮನಾಗಲು ಶಿಕ್ಷಣ ವ್ಯವಸ್ಥೆಯನ್ನು ರೂಢಿಸಿಕೊಂಡಿದ್ದಾನೆ. ಇದು ಮಾನವನನ್ನು ಹೊರತುಪಡಿಸಿ ಇನ್ನಿತರೆ ಯಾವ ಜೀವಿಗಳಲ್ಲೂ ಇಲ್ಲ. ಆದರೂ ಮಾನವ ದುಷ್ಕೃತ್ಯಗಳಲ್ಲಿ ತೊಡಗಿದ್ದಾನೆ. ಒಳ್ಳೆಯ ವಿಚಾರಗಳಲ್ಲಿ ಮಾನವರಿಗೆ ಏಕಾಗ್ರತೆ ಇರಬೇಕು. ಅಲ್ಲಮಪ್ರಭು, ಅಕ್ಕಮಹಾದೇವಿ, ಬಸವಣ್ಣ ಸೇರಿದಂತೆ ಇನ್ನೂ ಹಲವಾರು ಹೆಸರನ್ನು ನಾವು ಸ್ಮರಿಸಲು ಕಾರಣ ಅವರ ಕಾಯಕ, ಏಕಾಗ್ರತೆ, ಇಷ್ಟಲಿಂಗದಲ್ಲಿ ಅವರು ಏಕಾಗ್ರತೆಯನ್ನು ಕೇಂದ್ರಿಕರಿಸಿದ್ದು. ಏಕಾಗ್ರತೆ ಬದುಕಿಗೆ ಹಾಗೂ ಸಾಧನೆಗೆ ಅವಶ್ಯಕವಾಗಿದೆ ಎಂದರು.

ಚಿಕ್ಕಜಾಜೂರು ಗ್ರಾಮ ಪಂಚಾಯತ್‌ ಅಧ್ಯಕ್ಷ ಡಿ.ಸಿ. ಮೋಹನ್‌ ಮಾತನಾಡಿ, ಜನರಲ್ಲಿ ಜಾಗೃತಿ ಮೂಡಿಸುತ್ತ ಅರಿವಿನ ಮಟ್ಟವನ್ನು ಹೆಚ್ಚಿಸುವ ‘ಕಲ್ಯಾಣ ದರ್ಶನ’ ಕಾರ್ಯಕ್ರಮ ಅತ್ಯಂತ ಮಹತ್ವದ್ದು. ಶ್ರಾವಣ ಮಾಸದಲ್ಲಿ ಕಲ್ಯಾಣ ದರ್ಶನದ ಮೂಲಕ ಮುರುಘಾ ಶರಣರು ನಮ್ಮ ಬದುಕನ್ನು ಸುಧಾರಿಸಲು ಶ್ರಮಿಸುತ್ತಿದ್ದಾರೆ ಎಂದು ಶ್ಲಾಘಿಸಿದರು. ಕಾರ್ಯಕ್ರಮದಲ್ಲಿ ಪಿಎಲ್ಡಿ ಬ್ಯಾಂಕ್‌ ಮಾಜಿ ಅಧ್ಯಕ್ಷ ಕೆ.ಎಂ. ಶಿವಕುಮಾರ್‌, ತಾಲೂಕು ಪಂಚಾಯತ್‌ ಸದಸ್ಯ ಪಿ.ಎಸ್‌. ಮೂರ್ತಿ, ಸಿಪಿಐ ರವೀಶ್‌, ಪಿಎಸ್‌ಐ ಮಧು, ಗ್ರಾಮ ಪಂಚಾಯತ್‌ ಸದಸ್ಯರಾದ ಎಸ್‌. ಸಿದ್ದೇಶ್‌, ಜಿ.ಕೆ. ಯೋಗೀಶ್‌, ಎಚ್. ಜಯದೇವಮೂರ್ತಿ, ಷಣ್ಮುಖಪ್ಪ, ಅಂಜಲಿ ಮೋಹನ್‌, ಕವಿತಾ ಗಂಗಾಧರ, ಮೀನಾಕ್ಷಿ, ಗಿರಿಜಮ್ಮ, ಅಸ್ಮತ್‌ಉನ್ನೀಸಾ, ಮೇರಿ ರೋಸ್ಲಿ ಕುಮಾರ್‌, ಲಕ್ಷ್ಮೀದೇವಿ, ಮುಖಂಡ ಎಚ್.ಎಂ. ದಯಾನಂದ ಮೊದಲಾದವರು ಪಾಲ್ಗೊಂಡಿದ್ದರು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ‘ಕಲ್ಯಾಣ ದರ್ಶನ’ದ ಅಂಗವಾಗಿ ಗ್ರಾಮದಲ್ಲಿ ಸ್ವಚ್ಛತಾ ಅಭಿಯಾನ ಕೈಗೊಂಡು ಜನರಲ್ಲಿ ಜಾಗೃತಿ ಮೂಡಿಸಲಾಯಿತು. ಚಿತ್ರದುರ್ಗದ ಶ್ರೀ ಬಸವೇಶ್ವರ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ಎಸ್‌.ಜೆ.ಎಂ ದಂತ ಮಹಾವಿದ್ಯಾಲಯದ ಸಹಯೋಗದಲ್ಲಿ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿತ್ತು. 32 ವೈದ್ಯರ ತಂಡ ಚಿಕ್ಕಜಾಜೂರು ಗ್ರಾಮಸ್ಥರ ಆರೋಗ್ಯ ತಪಾಸಣೆ ನಡೆಸಿತು.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.