ಸಮ್ಮಿಶ್ರ ಸರ್ಕಾರ ಪತನ ಪಕ್ಕಾ

•ಬಿಜೆಪಿಗೆ ಬರುವವರಿಗೆ ಉತ್ತಮ ಭವಿಷ್ಯ• ಬಿಎಸ್‌ವೈ ಸಿಎಂ ಆಗೋದು ನಿಶ್ಚಿತ

Team Udayavani, Jul 8, 2019, 11:33 AM IST

08-July-12

ಚಿತ್ತಾಪುರ: ಪಟ್ಟಣದ ಬಜಾಜ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಅಭಿನಂದನೆ ಮತ್ತು ಸನ್ಮಾನ ಸಮಾರಂಭವನ್ನು ಸಂಸದ ಡಾ| ಉಮೇಶ ಜಾಧವ ಉದ್ಘಾಟಿಸಿದರು.

ಚಿತ್ತಾಪುರ: ಮೊಸರಿನಲ್ಲಿ ಕಲ್ಲು ಹುಡುಕುವ ಸಮ್ಮಿಶ್ರ ಸರ್ಕಾರ ಹಳಸಿ ಹೋಗಿದೆ. ಲಂಗು ಲಗಾಮು ಇಲ್ಲದ ಕಾಂಗ್ರೆಸ್‌-ಜೆಡಿಎಸ್‌ ಸರ್ಕಾರ ಪತನವಾಗುವುದು ಪಕ್ಕಾ ಆಗಿದ್ದು, ಕಾಂಗ್ರೆಸ್‌-ಜೆಡಿಎಸ್‌ ಬಿಟ್ಟು ಬಿಜೆಪಿ ಬರುವವರಿಗೆ ಉತ್ತಮ ಭವಿಷ್ಯ ಇದೆ ಎಂದು ಮಾಜಿ ಸಚಿವ ಬಾಬುರಾವ್‌ ಚಿಂಚನಸೂರ ಹೇಳಿದರು.

ಪಟ್ಟಣದ ಬಜಾಜ್‌ ಕಲ್ಯಾಣ ಮಂಟಪದಲ್ಲಿ ಸಂಸದ ಡಾ| ಉಮೇಶ ಜಾಧವ ಅವರಿಗೆ ಹಮ್ಮಿಕೊಳ್ಳಲಾಗಿದ್ದ ಅಭಿನಂದನೆ ಮತ್ತು ಸನ್ಮಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಮ್ಮಿಶ್ರ ಸರ್ಕಾರ ಯಾವುದೇ ಅಭಿವೃದ್ಧಿ ಕಾರ್ಯ ಕೈಗೊಳ್ಳದೇ ಕಚ್ಚಾಡುತ್ತಲೇ ಬರುತ್ತಿದೆ. ಈ ಸರ್ಕಾರದಲ್ಲಿ ಇಲ್ಲಿವರೆಗೆ 14 ಜನರು ರಾಜೀನಾಮೆ ನೀಡಿದ್ದಾರೆ. ಇನ್ನೂ ಕೆಲವರು ರಾಜೀನಾಮೆ ನೀಡಲು ತಯಾರಿ ನಡೆಸಿದ್ದಾರೆ. ಕಾಂಗ್ರೆಸ್‌-ಜೆಡಿಎಸ್‌ ಬಿಟ್ಟು ಬಿಜೆಪಿಗೆ ಬಂದರೆ ಉತ್ತಮ ಭವಿಷ್ಯವಿದೆ ಎನ್ನುವುದಕ್ಕೆ ಸಂಸದ ಡಾ| ಉಮೇಶ ಜಾಧವ, ಶಾಸಕ ಡಾ| ಅವಿನಾಶ ಜಾಧವ ಸಾಕ್ಷಿ ಎಂದರು.

ಲೋಕಸಭೆ ಚುನಾವಣೆ ಮುಗಿದಿದೆ. ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಕರ್ನಾಟಕದ ಕಾಂಗ್ರೆಸ್‌-ಜೆಡಿಎಸ್‌ ಸರ್ಕಾರ ಪತನವಾಗುವ ಹಂತಕ್ಕೆ ಬಂದಿದೆ. ಇನ್ನು ಎರಡು ದಿನದಲ್ಲಿ ಬಿ.ಎಸ್‌. ಯಡಿಯೂರಪ್ಪ ಸಾಮ್ರಾಜ್ಯ ಸ್ಥಾಪನೆಯಾಗಿ ಅವರೇ ಮುಖ್ಯಮಂತ್ರಿ ಆಗುವುದು ನಿಶ್ಚಿತ ಎಂದು ಹೇಳಿದರು.

ಎಸ್‌ಟಿ ಮಾಡೇ ತೀರುವೆ: ಕೋಲಿ ಸಮಾಜದ ಏಳ್ಗೆಗೆ ದಿ. ವೀಠuಲ ಹೇರೂರ್‌ ಎರಡು ದಶಕಗಳ ಕಾಲ ಹೋರಾಟ ಮಾಡಿ ಸ್ವರ್ಗವಾಸಿಯಾಗಿದ್ದಾರೆ. ದೀಪ ತನ್ನನ್ನು ತಾನು ಸುಟ್ಟುಕೊಂಡು ಬೆಳಕು ನೀಡುತ್ತದೆ. ಅದರಂತೆ ಕೋಲಿ ಸಮಾಜವನ್ನು ಎಸ್‌.ಟಿ ಮಾಡಲು ನಾನು ಮತ್ತು ನನ್ನ ಧರ್ಮ ಪತ್ನಿ ಕೊನೆ ಉಸಿರು ಇರುವ ತನಕ ಯತ್ನಿಸುತ್ತೇವೆ ಎಂದು ಬಾಬುರಾವ ಚಿಂಚನಸೂರ ಹೇಳಿದರು.

ಸಂಸದ ಡಾ| ಉಮೇಶ ಜಾಧವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನನ್ನ ಮೇಲೆ ನಂಬಿಕೆ ಇಟ್ಟು ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಮತ ನೀಡಿ ಸೋಲಿಲ್ಲದ ಸರ್ದಾರನ ಎದರು ನನ್ನನ್ನು ಗೆಲ್ಲಿಸಿದ್ದಿರಿ. ಹೀಗಾಗಿ ನನಗೆ ಏಳು ಜನ್ಮಗಳು ಬಂದರೂ ಕಲಬುರಗಿ ಜನತೆಯ ಋಣ ತೀರಿಸಲು ಆಗೋದಿಲ್ಲ ಎಂದರು.

ನರೇಂದ್ರ ಮೋದಿ ಇಡೀ ಭಾರತ ದೇಶದ ಜನರು ಸ್ವಾಭಿಮಾನದ ಜೀವನ ನಡೆಸುವಂತಹ ಬಜೆಟ್ ನೀಡಿದ್ದಾರೆ. ನಮಗೂ ಸಹ ಮಾತು ಕಡಿಮೆ ಆಡಿ, ಕೆಲಸ ಜಾಸ್ತಿ ಮಾಡಿ ಎಂದು ಆದೇಶ ನೀಡಿದ್ದಾರೆ. ಅದರಂತೆ ನಾನು ಸಹ ತಿಂಗಳಿಗೆ ಎರಡು ಬಾರಿ ಚಿತ್ತಾಪುರದ ಗ್ರಾಮಗಳಿಗೆ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸಿ ಪ್ರಾಮಾಣಿಕವಾಗಿ ಬಗೆಹರಿಸುತ್ತೇನೆ ಎಂದು ಭರವಸೆ ನೀಡಿದರು.

ಮಾಜಿ ಸಚಿವ ಮಾಲೀಕಯ್ನಾ ಗುತ್ತೇದಾರ ಮಾತನಾಡಿ, ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್‌ ಪಕ್ಷದಿಂದ ಅಧಿಕಾರ ಅನುಭವಿಸಿ ಬಿಜೆಪಿಗೆ ಹೋಗಿರುವ ಮಾಲೀಕಯ್ನಾ ಗುತ್ತೇದಾರ, ಬಾಬುರಾವ ಚಿಂಚನಸೂರ ಕಳ್ಳ ಎತ್ತುಗಳಾಗಿವೆ ಎಂದು ಪ್ರಿಯಾಂಕ್‌ ಖರ್ಗೆ ಹೇಳಿದ್ದರು. ಅವರಿಗೆ ಗೊತ್ತಿರಲಿಲ್ಲ ಆ ಕಡೆ ಈ ಕಡೆ ಹೊಳ್ಳುವ ಕಳ್ಳೆತ್ತುಗಳು ನಿಮ್ಮ ಕಾಂಗ್ರೆಸ್‌ ಪಕ್ಷದಲ್ಲೇ ಇವೆ ಎನ್ನೋದು. ನಾನು ಮತ್ತು ಬಾಬುರಾವ ಚಂಚನಸೂರ ಹೊಲದಲ್ಲಿ ಹೇಗೆ ಸೀದಾ ನೆಗಿಲು ಹೊಡಿಯುತ್ತೇವೆ ಎನ್ನೋದು ಈ ಗೊತ್ತಾಗಿರಬಹುದು. ದುರಹಂಕಾರದ ಮಾತುಗಳಿಂದ ಕೆಲವೇ ದಿನಗಳಲ್ಲಿ ಪ್ರಿಯಾಂಕ್‌ ಖರ್ಗೆ ಮಾಜಿ ಆಗುತ್ತಾರೆ ಎಂದು ಭವಿಷ್ಯ ನುಡಿದರು.

ಬಿಜೆಪಿ ಜಿಲ್ಲಾಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ, ಮಾಜಿ ಶಾಸಕರಾದ ವಾಲ್ಮೀಕಿ ನಾಯಕ, ವಿಶ್ವನಾಥ ಪಾಟೀಲ ಹೆಬ್ಟಾಳ ಮಾತನಾಡಿದರು.

ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಶಶಿಕಲಾ ತೆಂಗಳಿ, ಜಿಪಂ ಸದಸ್ಯರಾದ ಅರವಿಂದ ಚವ್ಹಾಣ, ಅಶೋಕ ಸಗರ, ಮುಖಂಡರಾದ ರಾಜು ನಿಲಂಗಿ, ಲಿಂಗಾರೆಡ್ಡಿ ಭಾಸರೆಡ್ಡಿ, ಚಂದ್ರಶೇಖರ ಅವಂಟಿ, ಬಸವರಾಜ ಬೆಣ್ಣೂರಕರ್‌, ಶರಣಪ್ಪ ನಾಟೀಕಾರ್‌, ನಾಗರಾಜ ಭಂಕಲಗಿ, ಭೀಮರೆಡ್ಡಿ ಕುರಾಳ, ಗೋಪಾಲ ರಾಠೊಡ, ಮಹೇಶ ಬಟಗೇರಿ, ಸುರೇಶ ಬೆನಕನಳ್ಳಿ, ಮಲ್ಲಿಕಾರ್ಜುನ ಪೂಜಾರಿ, ಡಾ| ಮಹೇಂದ್ರ ಕೋರಿ, ಮಸ್ತಾನ್‌ ಸಾಬ್‌, ಗುರುನಾಥಗೌಡ, ಬಸವರಾಜ ನಾಮದಾರ, ತಮ್ಮಣ್ಣ ಡಿಗ್ಗಿ, ಬಸವರಾಜ ಶಿವಗೋಳ, ಶಂಕರ ಚವ್ಹಾಣ, ಬಾಲಾಜಿ ಬುರಬುರೆ, ಅಯ್ಯಪ್ಪ ರಾಮತೀರ್ಥ, ನಾಗರಾಜ ಹೂಗಾರ, ಕವಿತಾ ಚವ್ಹಾಣ ಇದ್ದರು.

ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಎಮ್ಮೆನೋರ್‌ ಸ್ವಾಗತಿಸಿದರು. ಶರಣು ಜ್ಯೋತಿ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.