ಬರಿದಾದ ಕಾಗಿಣಾ ಒಡಲು: ನೀರಿಗೆ ಹಾಹಾಕಾರ

•ಹಳ್ಳ-ಕೊಳ್ಳ, ಕೆರೆ-ಬಾವಿ, ಬೋರವೆಲ್ ಬತ್ತಿವೆ•ಭೂಮಿ ಆಳಕ್ಕೆ ಅಗೆದರೂ ಸಿಗುತ್ತಿಲ್ಲ ನೀರು

Team Udayavani, May 4, 2019, 2:48 PM IST

4-MAY-21

ಚಿತ್ತಾಪುರ: ದಂಡೋತಿ ಹತ್ತಿರ ಕಾಗಿಣಾ ನದಿ ಸಂಪೂರ್ಣ ಬತ್ತಿದ್ದರಿಂದ ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಜಾಕ್‌ವೆಲ್ ಬಣಗುಡುತ್ತಿದೆ

ಚಿತ್ತಾಪುರ: ತಾಲೂಕಿನ ಜೀವ ಜಲ ಕಾಗಿಣಾ ನದಿ ಒಡಲು ಸಂಪೂರ್ಣ ಬರಿದಾಗಿದ್ದು, ಮಳೆಯಿಲ್ಲದೇ ಜನ ಜಾನುವಾರುಗಳು ಭೀಕರ ಬರಗಾಲದ ದವಡೆಗೆ ಸಿಲುಕಿವೆ. ಇದರಿಂದ ಲಕ್ಷಾಂತರ ಜನರ ಬದುಕಿಗೆ ಆಸರೆಯಾಗಿದ್ದ ಕಾಗಿಣಾ ನದಿ ಪಾತ್ರದಲ್ಲಿ ನೀರಿಲ್ಲದೇ ತಾಲೂಕಿನ ಜನತೆ ಕಣ್ಣೀರು ಹಾಕುವ ದುಸ್ಥಿತಿ ಬಂದಿದೆ.

ಬಿಸಿಲು ನಾಡು ಎಂದೇ ಖ್ಯಾತಿ ಪಡೆದ ತಾಲೂಕಿನಲ್ಲಿ ಈ ಬಾರಿ ಸಂಪೂರ್ಣ ಮಳೆ ಕೈಕೊಟ್ಟಿದೆ. ದಿನ ಬೆಳಗಾದರೆ ಮನೆಯಿಂದ ಹೊರಕ್ಕೆ ಬರಲು ಜನತೆ ಆತಂಕ ಪಡುವಂತೆ ಆಗಿದೆ. ಬೇಸಿಗೆ ಶುರುವಾಗಿ ಇನ್ನು ಒಂದೆರೆಡು ತಿಂಗಳು ಮಾಸಿಲ್ಲ. ಆದರೆ ಬಿಸಿಲಿನ ಪ್ರಖರತೆ ಶುರುವಾದಾಗಿನಿಂದ ತಾಲೂಕಿನ ಬಹುತೇಕ ಹಳ್ಳ-ಕೊಳ್ಳ, ಕೆರೆ, ಬಾವಿ, ಬೋರವೆಲ್ಗಳು ಬತ್ತಿವೆ. ಭೂಮಿ ಆಳಕ್ಕೆ ಅಗೆದರೂ ನೀರು ಸಿಗುತ್ತಿಲ್ಲ. ರೈತನ ಬದುಕು ಹಸಿರು ಮಾಡಬೇಕಾದ ಕಾಗಿಣಾ ಒಡಲು ಈಗ ಬರಿದಾಗಿ, ನದಿ ಸಂಪೂರ್ಣ ಭಣಗುಟುತ್ತಿದೆ.

ತಾಲೂಕಿನ ದಂಡೋತಿ ಗ್ರಾಮದ ಕಾಗಿಣಾ ನದಿ ಹೊರೆತು ಪಡಿಸಿದರೆ, ಬಹುತೇಕ ಕೆರೆಗಳಲ್ಲಿ ನೀರಿಲ್ಲ. ಕಳೆದ ಐದಾರು ವರ್ಷಗಳಿಂದ ತಾಲೂಕಿನ ಗ್ರಾಮಗಳೆಲ್ಲ ಬರಗಾಲಕ್ಕೆ ತುತ್ತಾಗುತ್ತಿವೆ. ಕುಡಿಯುವ ಕೊಡ ನೀರಿಗಾಗಿ ಜನರಿಗೆ ಅಲೆದಾಡುವ ಪರಿಸ್ಥಿತಿ ಉಂಟಾಗಿದೆ. ಇಟಗಾ ಗ್ರಾಮದ ಹತ್ತಿರವಿರುವ ಓರಿಯಂಟ್ ಸಿಮೆಂಟ್ ಕಂಪನಿ ಮತ್ತು ಶ್ರೀ ಸಿಮೆಂಟ್ ಕಂಪನಿಯವರು ಕಾಗಿಣಾ ನದಿ ಒಡಲನ್ನು ಅಕ್ರಮಿಸಿಕೊಂಡು ನೀರು ಪಡೆದುಕೊಳ್ಳುತ್ತಿರುವುದರಿಂದ ಕಾಗಿಣಾ ನದಿಯಲ್ಲಿ ನೀರು ಕಾಣಲು ಸಿಗುತ್ತಿಲ್ಲ.

ದನಕರುಗಳು ಹಸಿವಿನಿಂದ ಹೊಲ ಗದ್ದೆಗಳಿಗೆ ಹೋದರೆ, ಹೊಟ್ಟೆ ತುಂಬಿಸಿಕೊಳ್ಳಲು ಮೇವು, ನೀರಿಲ್ಲದೇ ಅಲೆದಾಡುತ್ತಿವೆ. ಜನತೆ ನೀರಿನ ಮೂಲ ಹುಡುಕಿಕೊಂಡು ಕಿ.ಮೀ ವರೆಗೆ ಕ್ರಮಿಸಿದರೂ ಎಲ್ಲಿಯೂ ನೀರು ಸಿಗುತ್ತಿಲ್ಲ. ಹೀಗಾಗಿ ಅಧಿಕಾರಿಗಳ ವಿರುದ್ಧ ಹಿಡಿ ಶಾಪ ಹಾಕುತ್ತಿದ್ದಾರೆ.

ಪಟ್ಟಣಕ್ಕೆ ಪುರಸಭೆಯಿಂದ ಕುಡಿಯುವ ನೀರು ಸರಬರಾಜು ಸಂಪೂರ್ಣ ಸ್ಥಗಿತವಾಗಿದೆ. ಒಂದು ಕಡೆ ನದಿ ಬತ್ತಿದೆ. ಇನ್ನೊಂದೆಡೆ ನೀರು ಶುದ್ಧಿಕರಣ ಘಟಕದ ಮೋಟಾರ್‌ ಸುಟ್ಟು ಸಮಸ್ಯೆ ಮತ್ತಷ್ಟು ಹೆಚ್ಚುವಂತೆ ಮಾಡಿದೆ. ಹೀಗಾಗಿ ಪಟ್ಟಣದ ನಿವಾಸಿಗಳು ಕೊಳವೆ ಬಾವಿ, ತೆರೆದ ಬಾವಿಗಳು ಇಲ್ಲದ ಬಡಾವಣೆ ನಿವಾಸಿಗಳು ಕೊಡ ನೀರಿಗಾಗಿ ಕಷ್ಟಪಡುತ್ತಿದ್ದಾರೆ. ಸುಡುವ ರಣಬಿಸಿಲನ್ನು ಲೆಕ್ಕಿಸದೇ ನೀರಿರುವ ಕಡೆಗೆ ಅಲೆಯುವಂತಾಗಿದೆ.

ಕೋಟಿಗಟ್ಟಲೇ ಹಣ ಸುರಿದು ಭಾಗೋಡಿ ಗ್ರಾಮದ ಹತ್ತಿರ ನೀರು ತಡೆಯಲು ಬ್ರಿಡ್ಜ್ ಕಂ ಬ್ಯಾರೇಜ್‌ ನಿರ್ಮಿಸಿದರೂ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗುತ್ತಿಲ್ಲ. 25 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಪಟ್ಟಣಕ್ಕೆ ಸಮರ್ಪಕ ಕುಡಿಯುವ ನೀರು ಸರಬರಾಜು ಆಗುತ್ತಿಲ್ಲ ಎಂದು ಪಟ್ಟಣದ ಜನರು ದೂರುತ್ತಿದ್ದಾರೆ. ನೀರು, ಮೇವಿನ ಸಮಸ್ಯೆ ಆಗದಂತೆ ನೂರಾರು ಕೋಟಿ ರೂ. ಬಿಡುಗಡೆ ಮಾಡಿದರೂ ಸಮಸ್ಯೆ ಪರಿಹರಿಸಲು ಮುಂದಾಗದ ಅಧಿಕಾರಿಗಳ ವಿರುದ್ಧ ಜನತೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ನದಿಯಲ್ಲಿ ಮರಳು ಬಹುತೇಕ ಖಾಲಿ ಆಗಿದೆ. ನದಿ ಒಡಲಲ್ಲಿ ನೀರು ನಿಲ್ಲದೇ ಹರಿದು ಹೋಗುತ್ತಿದ್ದು, ಸದ್ಯ ಕಾಗಿಣಾ ಒಡಲು ಗಂಡಾಂತರ ಸ್ಥೀತಿಯಲ್ಲಿದೆ. ನದಿ ಪಾತ್ರದ ತುಂಬಾ ಜೇಕು ಬೆಳೆದು ವಿಷ ಜಂತುಗಳ ವಾಸ ತಾಣವಾಗಿ ಪರಿಣಿಮಿಸಿದೆ.

ಮಳೆ ಇಲ್ಲದ ಕಾರಣ ಮೇವಿನ ಕೊರತೆ ಹೆಚ್ಚಾಗಿದ್ದು, ದನಕರುಗಳನ್ನು ಮಾರಾಟ ಮಾಡುವ ಸ್ಥಿತಿ ಬಂದೊದಗಿದೆ. ಜಾನುವಾರುಗಳಿಗೆ ಮೇವು ಹಾಗೂ ನೀರಿನ ವ್ಯವಸ್ಥೆ ಕಲ್ಪಿಸಬೇಕಿದೆ. ಇಲ್ಲದಿದ್ದರೆ ದನಕರುಗಳನ್ನು ಮಾರಿ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ರೈತರು ಅಳಲು ತೋಡಿಕೊಳ್ಳುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತು ಕೂಡಲೇ ಸಮರ್ಪಕವಾಗಿ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಜಾನುವಾರುಗಳಿಗೆ ಮೇವಿನ ಅನುಕೂಲ ಮಾಡಿಕೊಡಬೇಕು ಎಂದು ರೈತರು ಮನವಿ ಮಾಡಿದ್ದಾರೆ.

ಪಟ್ಟಣದ ಬಹುತೇಕ ವಾರ್ಡ್‌ಗಳಲ್ಲಿ ಬೋರವೆಲ್ ಇಲ್ಲ, ನಳದಲ್ಲಿ ನೀರು ಬಿಟ್ಟರೆ ಮಾತ್ರ ತುಂಬಿಕೊಳ್ಳಬೇಕು. ಇಲ್ಲವಾದರೆ ಕಿ.ಮೀ ಗಟ್ಟಲೇ ನಡೆದು ಬೇರೆಯವರ ಹೊಲದಲ್ಲಿರುವ ಬಾವಿಗಳಲ್ಲಿ ಒಂದು ಕೊಡ ನೀರು ತರಬೇಕು. ವಾರಗಳೇ ಕಳೆದರೂ ಸ್ನಾನ ಮಾಡಲಾರದ ಪರಿಸ್ಥಿತಿ ನಿರ್ಮಾಣವಾಗಿದೆ.
• ರಾಮಚಂದ್ರ, ಪಟ್ಟಣದ ನಿವಾಸಿ

ನೀರು ಸರಬರಾಜಿಗೆ ಕ್ರಮ ಕೈಗೊಳ್ಳಲಾಗಿದೆ. ಕೆಟ್ಟಿರುವ ಮೋಟಾರ್‌ ದುರಸ್ತಿ ಮಾಡಲಾಗಿದೆ. ಲಭ್ಯವಿರುವ ನೀರನ್ನು ಕೆಲ ಬಡಾವಣೆಯ ಜಲಸಂಗ್ರಹಾಗಾರಕ್ಕೆ ಪೂರೈಸಲಾಗುತ್ತದೆ. ಬೆಣ್ಣೆತೋರಾದಿಂದ ನೀರು ಬಿಡಲು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗಿದೆ. ಅಲ್ಲಿಂದ ನೀರು ಬಂದ ಕೂಡಲೇ ಚಿತ್ತಾಪುರ ಪಟ್ಟಣಕ್ಕೆ ನಾಲ್ಕ್ತ್ರೈದು ದಿನದಲ್ಲಿ ಪ್ರತಿದಿನ ಬಿಡುವ ವ್ಯವಸ್ಥೆ ಮಾಡಲಾಗುವುದು.
• ಉಸಾಮೋದ್ದಿನ್‌ ಬಾಬಾ, ಪುರಸಭೆ ಮುಖ್ಯಾಧಿಕಾರಿ

ದಂಡೋತಿ ಗ್ರಾಮದ ಕಾಗಿಣಾ ನದಿ ದಡದಲ್ಲಿ ಅಕ್ರಮವಾಗಿ ನಡೆಯುತ್ತಿರುವ ಶ್ರೀ ಸಿಮೆಂಟ್ ಕಂಪನಿ ನೀರು ಬಳಕೆ ಕಾಮಗಾರಿಗಳನ್ನು ಸ್ಥಗಿತಗೊಳಿಸುವಂತೆ ಮನವಿ ಮಾಡಲಾಗಿದೆ. ಒಂದು ವೇಳೆ ಕಾಮಗಾರಿ ಶುರು ಮಾಡಿದರೆ ಕರವೇ ವತಿಯಿಂದ ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು.
• ಸಾಬಣ್ಣ ಭರಾಟೆ,
ಕರವೇ ವಲಯ ಅಧ್ಯಕ್ಷ.

ಟಾಪ್ ನ್ಯೂಸ್

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.