ವಿಪತ್ತು ನಿರ್ವಹಣೆಗಿಂತ ಮುಂಜಾಗ್ರತಾ ಕ್ರಮ ಅಗತ್ಯ
ಆಸ್ತಿ-ಪಾಸ್ತಿ ಹಾನಿ ತಪ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ತರಬೇತಿ ಅವಶ್ಯ
Team Udayavani, Sep 20, 2019, 4:11 PM IST
ಹುಮನಾಬಾದ: ವಿಪತ್ತು ನಿರ್ವಹಣಾ ತರಬೇತಿಯನ್ನು ತಹಶೀಲ್ದಾರ್ ನಾಗಯ್ಯಸ್ವಾಮಿ ಹಿರೇಮಠ ಉದ್ಘಾಟಿಸಿದರು. ತರಬೇತಿ ನಿರ್ದೇಶಕ ಅಲೆಕ್ ಲೋಬೋ ಇದ್ದರು.
ಚಿಂಚೋಳಿ: ಪಟ್ಟಣದ ತಾಂಡೂರ-ಚಿಂಚೋಳಿ ರಾಜ್ಯ ಹೆದ್ದಾರಿಯಲ್ಲಿರುವ ಮೆಟ್ರಿಕ್ಸ್ ಅಗ್ರೋ ಪ್ರೈವೇಟ್ ಲಿಮಿಟೆಡ್ ವಿದ್ಯುತ್ ಉತ್ಪಾದನಾ ಘಟಕ ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿ, ಘಟಕದ ಎದುರು ನಾಗರಿಕ ಹಿತರಕ್ಷಣಾ ವೇದಿಕೆ ಮುಖಂಡರು ಪ್ರತಿಭಟನೆ ನಡೆಸಿದರು.
ಈ ಘಟಕ ವಿಪರೀತ ಗಬ್ಬು ವಾಸನೆ ಬೀರುತ್ತಿದ್ದು, ರಸ್ತೆ ಮೇಲೆ ಸಂಚರಿಸುವ ಪ್ರಯಾಣಿಕರು, ಶಾಲೆ-ಕಾಲೇಜು ವಿದ್ಯಾರ್ಥಿಗಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಪುರಸಭೆ ಸದಸ್ಯ ಆನಂದ ಟೈಗರ ಮಾತನಾಡಿ, ಮೆಟ್ರಿಕ್ಸ್ ಅಗ್ರೋ ಪ್ರೈವೇಟ್ ವಿದ್ಯುತ್ ಉತ್ಪಾದನಾ ಘಟಕ ಅಧಿಕೃತವಾಗಿ ಆರಂಭವಾಗಿಲ್ಲ. ಈ ಘಟಕದ ಪಕ್ಕದಲ್ಲಿಯೇ ಆದರ್ಶ ವಿದ್ಯಾಲಯ, ಐಟಿಐ ಕಾಲೇಜು, ಮಹಿಳಾ ವಸತಿ ನಿಲಯ ಮತ್ತು ಅನೇಕ ಕುಟುಂಬಗಳು ವಾಸಿಸುತ್ತಿವೆ. ಈ ಘಟಕದ ಚಿಲುಮೆಯಿಂದ ಸೂಸುವ ವಿಷಕಾರಿ ಹೊಗೆ ಹಾಗೂ ಘಟಕದ ಶಬ್ದ ಮಾಲಿನ್ಯ ಜನರು ಹಾಗೂ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಘಟಕವನ್ನು ಮುಚ್ಚಿ ಹಾಕಲು ಅನೇಕ ಸಲ ಹೋರಾಟ ನಡೆಸಿ, ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗಿದೆ. ಆದರೂ ಯಾಕೆ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪುರಸಭೆ ಸದಸ್ಯರಾದ ಅಬ್ದುಲ್ ಬಾಸೀತ, ನಾಗೇಂದ್ರ ಗುರಂಪಳ್ಳಿ, ಶಬ್ಬೀರ ಅಹೆಮದ್, ಬಸವರಾಜ ಶಿರಸಿ ಹಾಗೂ ಮುಖಂಡರಾದ ಅಮರ ಲೊಡನೋರ, ವಿಶ್ವನಾಥ ಬೀರನಳ್ಳಿ, ಸಂತೋಷ ಗುತ್ತೇದಾರ, ಉಲ್ಲಾಸ ದೇಗಲಮಡಿ, ರುದ್ರಮುನಿ ರಾಮತೀರ್ಥ, ಕಾಶಿನಾಥ ಸಿಂಧೆ, ದೌಲತರಾವ್ ಸುಣಗಾರ, ಗೋಪಾಲ ರಾಂಪೂರೆ, ತುಳಸೀರಾಮ ಪೋಳ ಈ ಸಂದರ್ಭದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಸವಿತಾ ಹಿರೇಮಠ
Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…
Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು
Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ
ಬೆಳಗಾವಿ-ಸೋಲಿನ ಭಯದಿಂದ ಕಾಂಗ್ರೆಸ್ ಹತಾಶ: ಜಗದೀಶ ಶೆಟ್ಟರ
MUST WATCH
ಹೊಸ ಸೇರ್ಪಡೆ
Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು
Prajwal Case; ತಮ್ಮ ಹೆಸರು ಬಳಸದಂತೆ ಕೋರ್ಟ್ ತಡೆ ತಂದ ಎಚ್ ಡಿಡಿ, ಎಚ್ ಡಿಕೆ
ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ
OTT: ಮಾಲಿವುಡ್ನಲ್ಲಿ ಸದ್ದು ಮಾಡಿದ ಫಹಾದ್ ಫಾಸಿಲ್ ʼಆವೇಶಮ್ʼ ಈ ದಿನ ಓಟಿಟಿಗೆ ಎಂಟ್ರಿ?
Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ