ಸತತ ಮಳೆಗೆ ಹೆಚ್ಚಿದ ನೀರಿನ ಮಟ್ಟ
85 ಸಾವಿರ ಕ್ಯೂಸೆಕ್ ಒಳಹರಿವು•ಜಲಾವೃತ ಸೇತುವೆ ಮೇಲೆ 4 ಅಡಿ ನೀರು
Team Udayavani, Jul 11, 2019, 1:22 PM IST
ಚಿಕ್ಕೋಡಿ: ದೂಧಗಂಗಾ ನದಿ ತೀರಕ್ಕೆ ಉಪವಿಭಾಗಾಧಿಕಾರಿ ರವೀಂದ್ರ ಕರಲಿಂಗನ್ನವರ ಭೇಟಿ ನೀಡಿ ಪರಿಶೀಲಿಸಿದರು.
ಚಿಕ್ಕೋಡಿ: ನೆರೆಯ ಮಹಾರಾಷ್ಟ್ರದಲ್ಲಿ ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಕೃಷ್ಣಾ, ದೂಧಗಂಗಾ ಮತ್ತು ವೇದಗಂಗಾ ನದಿಗಳಿಗೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಕಳೆದ 24 ಗಂಟೆಗಳಲ್ಲಿ 15 ಸಾವಿರ ಕ್ಯೂಸೆಕ್ ನೀರು ಹೆಚ್ಚಾಗಿದೆ.
ಮಹಾರಾಷ್ಟ್ರದ ಕೊಂಕಣ ಪ್ರದೇಶಗಳಾದ ಮಹಾಬಲೇಶ್ವರ, ರಾಧಾನಗರಿ, ನವಜಾ, ಪಾಟಗಾಂವ, ಕೊಯ್ನಾ ಪ್ರದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಭಾರಿ ಮಳೆ ಸುರಿದಿದೆ. ಇತ್ತ ಗಡಿ ಭಾಗದಲ್ಲಿಯೂ ಮಳೆ ಆಗುತ್ತಿದೆ. ಇದರಿಂದ ಕೃಷ್ಣಾ ಮತ್ತು ಉಪನದಿಗಳಿಗೆ ಸುಮಾರು 85 ಸಾವಿರ ಕ್ಯೂಸೆಕ್ ನೀರು ಹರಿದು ಬರಲಾರಂಭಿಸಿದೆ. ದಿನೇ ದಿನೇ ನೀರಿನ ಪ್ರಮಾಣ ಏರಿಕೆಯಾಗುತ್ತಿರುವುದರಿಂದ ನದಿಗಳು ಉಕ್ಕಿ ಹರಿಯುತ್ತಿವೆ.
ಇದರಿಂದ ಚಿಕ್ಕೋಡಿ ತಾಲೂಕಿನ ಕೆಳಹಂತದ ಕೃಷ್ಣಾ ನದಿಗೆ ಕಟ್ಟಲಾಗಿರುವ ಕಲ್ಲೋಳ-ಯಡೂರ ಸೇತುವೆ ಜಲಾವೃತಗೊಂಡಿದೆ. ದೂಧಗಂಗಾ ನದಿಗೆ ನಿರ್ಮಿಸಿರುವ ಮಲಿಕವಾಡ-ದತ್ತವಾಡ, ಕಾರದಗಾ-ಭೋಜ, ವೇದಗಂಗಾ ನದಿಗೆ ನಿರ್ಮಿಸಿರುವ ಬೋಜವಾಡಿ-ಕುನ್ನೂರ, ಸಿದ್ನಾಳ- ಅಕ್ಕೋಳ, ಜತ್ರಾಟ-ಭಿವಸಿ ಆರು ಸೇತುವೆಗಳು ಮುಳುಗಡೆಗೊಂಡಿವೆ. ಇರುವುದರಿಂದ ಸಾರ್ವಜನಿಕರು ಸುತ್ತಿ ಬಳಸಿ ಪ್ರಯಾಣ ಮಾಡುತ್ತಿದ್ದಾರೆ. ರಾಜಾಪುರ ಬ್ಯಾರೇಜ್ದಿಂದ ರಾಜ್ಯಕ್ಕೆ 65,453 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ದೂಧಗಂಗಾ ಮತ್ತು ವೇದಗಂಗಾ ನದಿಯಿಂದ 20,240 ಕ್ಯೂಸೆಕ್ ನೀರು ಹರಿದು ಕೃಷ್ಣಾ ನದಿಗೆ ಬರುತ್ತಿದ್ದು, ಇದರಿಂದ ಚಿಕ್ಕೋಡಿ ತಾಲೂಕಿನ ಕಲ್ಲೋಳ ಹತ್ತಿರ ಕೃಷ್ಣಾ ನದಿಗೆ 85,693 ಕ್ಯೂಸೆಕ್ ನೀರು ಹರಿದು ಬರಲಾರಂಭಿಸಿದೆ. ಜಮಖಂಡಿ ತಾಲೂಕಿನ ಹಿಪ್ಪರಗಿ ಜಲಾಶಯದಿಂದ 71 ಸಾವಿರ ಕ್ಯೂಸೆಕ್ ನೀರನ್ನು ಆಲಮಟ್ಟಿ ಜಲಾಶಯಕ್ಕೆ ಹರಿ ಬಿಡಲಾಗುತ್ತಿದೆ. ಅಲ್ಲಿಂದ 5 ಸಾವಿರ ಕ್ಯೂಸೆಕ್ ನೀರನ್ನು ಆಲಮಟ್ಟಿಯಿಂದ ಹೊರಬಿಡಲಾಗುತ್ತದೆ ಎಂದು ತಹಶೀಲ್ದಾರ ಡಾ| ಸಂತೋಷ ಬಿರಾದಾರ ಮಾಹಿತಿ ನೀಡಿದರು.
ಮಳೆ ಪ್ರಮಾಣ: ಕೊಯ್ನಾ-112 ಮಿಮೀ, ವಾರಣಾ-98ಮಿಮೀ, ಕಾಳಮ್ಮವಾಡಿ- 112ಮಿಮೀ, ನವಜಾ-150 ಸಾಂಗ್ಲಿ-4 ಮಿಮೀ, ರಾಧಾನಗರಿ-104 ಮಿಮೀ, ಪಾಟಗಾಂವ-126 ಮಿಮೀ, ಮಹಾಬಲೇಶ್ವರ-99ಮಿಮೀ, ಕೊಲ್ಲಾಪುರ-19 ಮಿಮೀ ಮಳೆ ಆಗಿದೆ.
ಚಿಕ್ಕೋಡಿ ತಾಲೂಕಿನ ಮಳೆ ವಿವರ: ಚಿಕ್ಕೋಡಿ-5.4 ಮಿಮೀ, ಅಂಕಲಿ-7.4 ಮಿಮೀ, ನಾಗರಮುನ್ನೋಳ್ಳಿ-1.6 ಮಿಮೀ, ಸದಲಗಾ-15.3 ಮಿಮೀ, ಗಳತಗಾ-14.2 ಮಿಮೀ, ಜೋಡಟ್ಟಿ-1.4 ಮಿಮೀ, ನಿಪ್ಪಾಣಿ ಪಿಡಬ್ಲುಡಿ-16.3 ಮಿಮೀ, ನಿಪ್ಪಾಣಿ ಎಆರ್ಎಸ್-13.2 ಮಿಮೀ, ಸೌಂದಲಗಾ-20 ಮಿಮೀ ಮಳೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್ ಸಾವು
ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು
Mandya Lok Sabha Constituency; ಸ್ಟಾರ್ ಚಂದ್ರು ಪರ ಇಂದು ನಟ ದರ್ಶನ್ ಪ್ರಚಾರ
ಚುನಾವಣ ಬಾಂಡ್ ವಿಶ್ವದ ಅತಿದೊಡ್ಡ ಹಗರಣ: ರಾಹುಲ್
MUST WATCH
ಹೊಸ ಸೇರ್ಪಡೆ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
IPL; ಪಂಜಾಬ್ ಕಿಂಗ್ಸ್-ಮುಂಬೈ ಇಂಡಿಯನ್ಸ್ : ಒಂದೇ ದೋಣಿಯ ಪಯಣಿಗರು