2 ವರ್ಷ ಹಿಂದೆಯೇ 242 ಧಾರ್ಮಿಕ ಕೇಂದ್ರಗಳ ತೆರವು

| ಸುಪ್ರೀಂಕೋರ್ಟ್‌ ಆದೇಶದ ಹಿನ್ನೆಲೆ ಜಿಲ್ಲಾಡಳಿತ ಕ್ರಮ | ಸಾರ್ವಜನಿಕ ಉದ್ಯಾನ-ಸರಕಾರಿ ಜಾಗೆ-ರಸ್ತೆಯಲ್ಲಿದ್ದ ಧಾರ್ಮಿಕ ಕಟ್ಟಡ

Team Udayavani, Sep 15, 2021, 8:45 PM IST

vdfgrre

ಗದಗ: ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ಹಿಂದೂ ದೇವಾಲಯವೊಂದನ್ನು ತೆರವುಗೊಳಿಸಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಆದರೆ ಸುಪ್ರೀಂಕೋರ್ಟ್‌ ಆದೇಶ ಹಿನ್ನೆಲೆಯಲ್ಲಿ ಎರಡು ವರ್ಷಗಳ ಹಿಂದೆಯೇ ಗದಗ ಜಿಲ್ಲೆಯಲ್ಲಿ ಸದ್ದುಗದ್ದಲವಿಲ್ಲದೇ 242 ಧಾರ್ಮಿಕ ಕೇಂದ್ರಗಳನ್ನು ಜಿಲ್ಲಾಡಳಿತ ತೆರವುಗೊಳಿಸಿದ್ದು ಗಮನಾರ್ಹ.

ಸಾರ್ವಜನಿಕ ರಸ್ತೆ, ವಾಹನಗಳ ಸಂಚಾರಕ್ಕೆ ಅಡ್ಡಿಯಾಗುವಂತಿರುವ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ದೇವಸ್ಥಾನ, ಮಸೀದಿ, ಚರ್ಚ್‌ ಸೇರಿದಂತೆ ಯಾವುದೇ ಧರ್ಮಕ್ಕೆ ಸಂಬಂಧಿ ಸಿದ ಕಟ್ಟಡಗಳನ್ನು ತೆರವುಗೊಳಿಸುವಂತೆ ರಾಜ್ಯ ಸರಕಾರಗಳಿಗೆ ಸುಪ್ರೀಂಕೋರ್ಟ್‌ 2009ರಲ್ಲಿ ಸೂಚಿಸಿತ್ತು. ಸುಪ್ರೀಂಕೋರ್ಟ್‌ ನಿರ್ದೇಶನದಂತೆ ರಾಜ್ಯ ಸರಕಾರ ಈ ಬಗ್ಗೆ ಆದೇಶಿಸಿತ್ತು. ಅದನ್ನು ಆಧರಿಸಿ ಗದಗ ಜಿಲ್ಲಾಡಳಿತ ದಶಕದ ಹಿಂದೆಯೇ ಅನಧಿಕೃತವಾಗಿ ನಿರ್ಮಿಸಿರುವ ಕಟ್ಟಡಗಳನ್ನು ಪಟ್ಟಿ ಮಾಡಿತ್ತು. ಕಳೆದ ಮೂರ್‍ನಾಲ್ಕು ವರ್ಷಗಳವರೆಗೂ ಅವುಗಳನ್ನು ಹಂತಹಂತವಾಗಿ ತೆರವುಗೊಳಿಸುವಲ್ಲಿ ಯಶಸ್ವಿಯಾಗಿದೆ.

242 ಧಾರ್ಮಿಕ ಕಟ್ಟಡಗಳ ತೆರವು: ಜಿಲ್ಲೆಯ 7 ತಾಲೂಕು ವ್ಯಾಪ್ತಿಯಲ್ಲಿ ಒಟ್ಟು 242 ಧಾರ್ಮಿಕ ಕೇಂದ್ರಗಳನ್ನು ತೆರವುಗೊಳಿಸಲಾಗಿದೆ. ಆ ಪೈಕಿ ಗದಗ 199, ಮುಂಡರಗಿ 13, ನರಗುಂದ 1, ರೋಣ 3, ಶಿರಹಟ್ಟಿ 8, ಲಕ್ಷ್ಮೇಶ್ವರ ಮತ್ತು ಗಜೇಂದ್ರಗಡ ತಾಲೂಕಿನಲ್ಲಿ 9 ಸೇರಿದಂತೆ 242 ಧಾರ್ಮಿಕ ಕೇಂದ್ರಗಳನ್ನು ತೆರವುಗೊಳಿಸಲಾಗಿದೆ. ಕಳೆದ ತಿಂಗಳು ರೋಣ ಪಟ್ಟಣದಲ್ಲಿ ಒಂದು ದೇವಸ್ಥಾನ, ಮಸೀದಿ ಕಟ್ಟಡ ತೆರವುಗೊಳಿಸಲಾಗಿದೆ. ಇದೊಂದು ನಿರಂತರ ಪ್ರಕ್ರಿಯೆ ಎನ್ನುತ್ತಾರೆ ಅಧಿ ಕಾರಿಗಳು.

ತಹಶೀಲ್ದಾರ್‌ ಮಟ್ಟದಲ್ಲಿ ಸಭೆ: 2009ರಲ್ಲಿ ಸುಪ್ರೀಂಕೋರ್ಟ್‌ ಆದೇಶದ ಬಳಿಕ ಅದನ್ನು ನಿರಂತರವಾಗಿ ರಾಜ್ಯ ಉತ್ಛ ನ್ಯಾಯಾಲಯ ಇದರ ಮೇಲ್ವಿಚಾರಣೆ ನಡೆಸುತ್ತಿದೆ. ಅದರಂತೆ ಹೈಕೋರ್ಟ್‌ ಎರಡು ವರ್ಷಗಳ ಹಿಂದೆ ಈ ಬಗ್ಗೆ ಸೂಚನೆ ನೀಡಿತ್ತು. ಅದಾದ ಬಳಿಕ ಅನ ಧಿಕೃತವಾಗಿ ನಿರ್ಮಿಸಿರುವ ಧಾರ್ಮಿಕ ಕೇಂದ್ರಗಳನ್ನು ಗುರುತಿಸುವುದು, ತೆರವುಗೊಳಿಸುವ ಪ್ರಕ್ರಿಯೆ ನಡೆಯುತ್ತಿದೆ. ಅದಕ್ಕಾಗಿ ಆಯಾ ತಾಲೂಕಿನ ತಹಶೀಲ್ದಾರ್‌ಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ಕಾಲಕಾಲಕ್ಕೆ ಆ ಬಗ್ಗೆ ಜಿಲ್ಲಾ ಧಿಕಾರಿಗಳ ಅಧ್ಯಕ್ಷತೆಯಲ್ಲಿ ಪರಿಶೀಲಿಸಲಾಗುತ್ತಿದೆ. ಅಂತಹ ಪ್ರಕರಣಗಳು ಕಂಡು ಬಂದಲ್ಲಿ ಕಾನೂನು ಸುವ್ಯವಸ್ಥೆಗೆ ತೊಂದರೆಯಾಗದಂತೆ ಸ್ಥಳೀಯರ ವಿಶ್ವಾಸದೊಂದಿಗೆ ಕಟ್ಟಡಗಳನ್ನು ತೆರವುಗೊಳಿಸಲಾಗುತ್ತಿದೆ ಎನ್ನಲಾಗಿದೆ.

ಕಟ್ಟುನಿಟ್ಟಿನ ಕ್ರಮವಿಲ್ಲ: ಎರಡು ವರ್ಷಗಳ ಹಿಂದೆ ಆಗಿನ ಜಿಲ್ಲಾ ಧಿಕಾರಿ ಎಂ.ಜಿ.ಹಿರೇಮಠ ಅಧ್ಯಕ್ಷತೆಯಲ್ಲಿ ನಡೆದಿದ್ದ ಸಭೆಯಲ್ಲಿ ಈ ಕುರಿತು ಕಟ್ಟುನಿಟ್ಟಿನ ಕ್ರಮಕ್ಕೆ ಸೂಚಿಸಿದ್ದರು. ನ್ಯಾಯಾಲಯ ಆದೇಶದಂತೆ ಸಾರ್ವಜನಿಕ ಉದ್ಯಾನ, ಸರಕಾರಿ ಜಾಗೆ ಹಾಗೂ ರಸ್ತೆಗಳನ್ನು ಅತಿಕ್ರಮಿಸಿದ ಧಾರ್ಮಿಕ ಕೇಂದ್ರಗಳನ್ನು ಪಟ್ಟಿ ಮಾಡುವಂತೆ ಸೂಚಿಸಿದ್ದರು. ಆದರೆ ಅವರ ವರ್ಗಾವಣೆ ಬಳಿಕ ಈ ನಿಟ್ಟಿನಲ್ಲಿ ಗಂಭೀರ ಪ್ರಯತ್ನಗಳು ನಡೆದಿಲ್ಲ. ಬೆರಳೆಣಿಕೆಯಷ್ಟು ರಸ್ತೆ ಬದಿಗಿರುವ ಸಣ್ಣಪುಟ್ಟ ಕಟ್ಟೆಗಳನ್ನು ಮಾತ್ರ ತೆರವುಗೊಳಿಸಲಾಗಿದೆ. ಆದರೆ ಉದ್ಯಾನ ಮತ್ತು ನಾಗರಿಕ ಮೀಸಲು ನಿವೇಶನ, ರಸ್ತೆಗಳನ್ನು ಅತಿಕ್ರಮಿಸಿದ ಧಾರ್ಮಿಕ ಕಟ್ಟಡಗಳ ಬಗ್ಗೆ ಅಧಿ ಕಾರಿಗಳು ಚಕಾರವೆತ್ತುತ್ತಿಲ್ಲ ಎಂಬುದು ಸಾರ್ವಜನಿಕರ ದೂರು.

ಟಾಪ್ ನ್ಯೂಸ್

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.