ಮೂರ್ತಿ ತಯಾರಕರಿಗೆ 3ನೇ ಅಲೆ ಭೀತಿ

ದೊಡ್ಡ ಮೂರ್ತಿಗಳ ತಯಾರಿಕೆಗೆ ಹಿಂದೇಟು| ­ಕಲಾವಿದರ ಬದುಕಿಗೆ ಮತ್ತೆ ಕೊರೊನಾ ಕರಿನೆರಳು

Team Udayavani, Aug 2, 2021, 9:30 PM IST

rgsfaew

ವಿಶೇಷ ವರದಿ

ಹಾವೇರಿ: ಕೋವಿಡ್ ಒಂದನೇ ಅಲೆಯಿಂದ ಕಳೆದ ವರ್ಷ ಆರ್ಥಿಕ ಸಂಕಷ್ಟ ಎದುರಿಸಿದ್ದ ಗಣಪತಿ ಮೂರ್ತಿ ತಯಾರಕರಿಗೆ ಮತ್ತೆ ಮೂರನೇ ಅಲೆ ಎದುರಾಗುವ ಭೀತಿಯಿಂದ ಬದುಕು ಮತ್ತಷ್ಟು ಸಂಕಷ್ಟಕ್ಕೆ ತುತ್ತಾಗುವಂತಾಗಿದೆ.

ಕಳೆದ ಎರಡು ವರ್ಷಗಳಿಂದ ನಿರೀಕ್ಷಿತ ಆದಾಯವಿಲ್ಲದೆ ಗಣಪತಿ ಮೂರ್ತಿ ತಯಾರಿಕೆಯನ್ನೇ ನಂಬಿಕೊಂಡಿರುವ ಕುಟುಂಬದವರು ಸಂಕಷ್ಟ ಎದುರಿಸುವಂತಾಗಿದೆ. ಗಣೇಶ ಚತುರ್ಥಿ ಇನ್ನೂ ಎರಡು ತಿಂಗಳಿರುವಾಗಲೇ ಗಣಪತಿ ಮೂರ್ತಿ ತಯಾರಕರ ಮನೆಯಲ್ಲಿ ಸಂಭ್ರಮ ಮನೆ ಮಾಡುತ್ತಿತ್ತು. ಕುಟುಂಬದ ಸದಸ್ಯರೆಲ್ಲರೂ ಸೇರಿ ನಿರಂತರವಾಗಿ ಕೆಲಸ ಮಾಡಿದರೂ ಬೇಡಿಕೆಗೆ ತಕ್ಕಂತೆ ಮೂರ್ತಿ ತಯಾರಿಸಿ ಕೊಡುವುದು ಕಷ್ಟಕರವಾಗುತ್ತಿತ್ತು. ಆದರೆ ಕೊರೊನಾ ಸಂಪೂರ್ಣ ಚಿತ್ರಣವನ್ನೇ ಬದಲಿಸಿದೆ. ಕೊರೊನಾ ಸೋಂಕು ಕಳೆದ ಎರಡು ವರ್ಷದಿಂದ ಗಣೇಶ ಮೂರ್ತಿ ತಯಾರಕರ ಬದುಕನ್ನೇ ಕಸಿದುಕೊಂಡಿದೆ.

ದೊಡ್ಡಮೂರ್ತಿಗಳ ತಯಾರಿಕೆಗೆ ಹಿಂದೇಟು: ಕೊರೊನಾ ಎರಡನೇ ಅಲೆ ಇಳಿಮುಖವಾಗುತ್ತಿದ್ದಂತೆ ಮೂರ್ತಿ ತಯಾರಕರು ಈ ವರ್ಷವಾದರೂ ದೊಡ್ಡ ಮೂರ್ತಿಗಳ ತಯಾರಿಕೆಗೆ ಬೇಡಿಕೆ ಬರಬಹುದು ಎಂದುಕೊಂಡಿದ್ದರು. ಆದರೆ ಈಗ ದೇಶದಲ್ಲಿ ಮತ್ತೆ ಕೊರೊನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಮೂರನೇ ಅಲೆ ಎಂದೇ ಭಾವಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಗಣಪತಿ ಮೂರ್ತಿ ಪ್ರತಿಷ್ಠಾಪಿಸುವ ಸಂಘಟಕರು ಈವರೆಗೂ ದೊಡ್ಡ ಮೂರ್ತಿ ತಯಾರಿಕೆಗೆ ಬೇಡಿಕೆ ಇಟ್ಟಿಲ್ಲ. ಹೀಗಾಗಿ ಕಲಾವಿದರೂ ದೊಡ್ಡ ಮೂರ್ತಿ ತಯಾರಿಸಲು ಸಿದ್ಧತೆ ಮಾಡಿಕೊಂಡಿಲ್ಲ. ದೊಡ್ಡಗಾತ್ರದ ಗಣಪತಿ ತಯಾರಿಕೆಗೆ ಅಗತ್ಯವಿರುವ ಕಚ್ಚಾ ವಸ್ತುಗಳನ್ನು ತರಿಸಿಕೊಂಡಿಲ್ಲ.

ಜಿಲ್ಲೆಯಲ್ಲಿ ನೂರಾರು ಗಣಪತಿ ತಯಾರಿಸುವ ಕುಟುಂಬಗಳಿವೆ. ಕೊರೊನಾ ಮೂರನೇ ಅಲೆ ಎದುರಾದರೆ ತಯಾರಿಸಿದ ಗಣೇಶ ಮೂರ್ತಿಗಳು ಮಾರಾಟಗೊಳ್ಳದೇ ಮತ್ತೇ ಆರ್ಥಿಕ ಸಂಕಷ್ಟ ಎದುರಾಗಬಹುದು ಎಂಬ ಕಾರಣಕ್ಕೆ ಮೂರ್ತಿ ತಯಾರಿಯ ಅನೇಕ ಕುಟುಂಬಗಳು ದೊಡ್ಡಗಾತ್ರದ ಮೂರ್ತಿ ತಯಾರಿಕೆಗೆ ಮುಂದಾಗಿಲ್ಲ.

ಚಿಕ್ಕಪುಟ್ಟ ಮೂರ್ತಿ ತಯಾರಿಕೆ: ಈಗಾಗಲೇ ಕಲಾವಿದರು ಮನೆಗಳಲ್ಲಿ ಪ್ರತಿಷ್ಠಾಪಿಸುವ ಚಿಕ್ಕಪುಟ್ಟ ಗಣಪತಿ ಮೂರ್ತಿಗಳನ್ನು ತಯಾರಿಸುತ್ತಿದ್ದಾರೆ. ಇವುಗಳಿಗೂ ಇನ್ನೂ ಯಾರಿಂದಲೂ ಬೇಡಿಕೆಯಿಲ್ಲ. ಕೊನೆಯ ಗಳಿಗೆಯಲ್ಲಾದರೂ ಮನೆಯಲ್ಲಿ ಪ್ರತಿಷ್ಠಾಪಿಸುವುದಕ್ಕೆ ಬೇಡಿಕೆ ಬರಬಹುದು ಎಂಬ ಆಶಯದೊಂದಿಗೆ ತಯಾರಿಸಲಾಗುತ್ತಿದೆ. ಸಂಭವನೀಯ ಕೊರೊನಾ ಮೂರನೇ ಅಲೆ ಭೀತಿ ಎಲ್ಲರಲ್ಲೂ ಮನೆ ಮಾಡಿದ್ದು, ಹಬ್ಬದ ಸಮಯಕ್ಕೆ ಯಾವ ರೀತಿಯ ಮಾರ್ಗಸೂಚಿಗಳು ಹೊರಬರುತ್ತವೋ ಗೊತ್ತಿಲ್ಲ. ಮೂರ್ತಿಪ್ರತಿಷ್ಠಾನೆಗೆ ಅವಕಾಶ ನೀಡುತ್ತಾರೋ, ಇಲ್ಲವೋ ಎಂಬ ಗೊಂದಲದಲ್ಲಿಯೇ ಕಾಲ ಕಳೆಯುವಂತಾಗಿದೆ.

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.