ದಾವಣಗೆರೆಯಲ್ಲಿ ಒಂದೇ ದಿನ 753 ಕೋವಿಡ್ ಸೋಂಕಿತರು ಗುಣಮುಖ
Team Udayavani, May 13, 2021, 9:37 PM IST
ದಾವಣಗೆರೆ: ಜಿಲ್ಲೆಯಲ್ಲಿ ಗುರುವಾರ ದಾಖಲೆ ಪ್ರಮಾಣದಲ್ಲಿ 753 ಕೋವಿಡ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಕೊರೊನಾ ಎರಡನೇ ಅಲೆಯ ಮಧ್ಯದಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿತರು ಗುಣಮುಖರಾಗಿ, ಡಿಸ್ಚಾರ್ಜ್ ಆಗಿರುವುದು ಜಿಲ್ಲೆಯಲ್ಲಿ ಇದೆ ಮೊದಲು.
ದಾವಣಗೆರೆ ನಗರ ಮತ್ತು ತಾಲೂಕಿನ ಇತರೆ ಭಾಗದ 481, ಹರಿಹರದಲ್ಲಿ 98, ಜಗಳೂರಿನಲ್ಲಿ 23, ಚನ್ನಗಿರಿ ಯಲ್ಲಿ 84, ಹೊನ್ನಾಳಿಯಲ್ಲಿ 44 ಹಾಗೂ ಹೊರ ಜಿಲ್ಲೆಯ 23 ಜನ ಒಳಗೊಂಡಂತೆ ೭೫೩ ಸೋಂಕಿತರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 494 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.
ದಾವಣಗೆರೆ ನಗರ ಮತ್ತು ತಾಲೂಕಿನ ಇತರೆ ಭಾಗದ 341, ಹರಿಹರದಲ್ಲಿ 48, ಜಗಳೂರಿನಲ್ಲಿ 3, ಚನ್ನಗಿರಿಯಲ್ಲಿ 52, ಹೊನ್ನಾಳಿಯಲ್ಲಿ 32 ಹಾಗೂ ಹೊರ ಜಿಲ್ಲೆಯ 18 ಜನರು ಒಳಗೊಂಡಂತೆ 494 ಜನರಲ್ಲಿ ಮಹಾಮಾರಿ ಕೊರೊನಾ ಪತ್ತೆಯಾಗಿದೆ.
ಕಳೆದ ವರ್ಷ ಕೊರೊನಾ ಪ್ರಾರಂಭದಿಂದ ದಾವಣಗೆರೆ ತಾಲೂಕಿನಲ್ಲಿ 17126, ಹರಿಹರದಲ್ಲಿ 4272, ಜಗಳೂರಿನಲ್ಲಿ 1531, ಚನ್ನಗಿರಿಯಲ್ಲಿ 2899, ಹೊನ್ನಾಳಿಯಲ್ಲಿ 3432, ಹೊರ ಜಿಲ್ಲೆಯ ೮೫೭ ಜನರು ಸೇರಿದಂತೆ ಈವರೆಗೆ ಒಟ್ಟು 30,973 ಜನರು ಸೋಂಕಿಗೆ ಒಳಗಾಗಿದ್ದಾರೆ.
ಕೊರೊನಾದಿಂದ ದಾವಣಗೆರೆ ತಾಲೂಕಿನಲ್ಲಿ ೧೫೭೮೭, ಹರಿಹರದಲ್ಲಿ 3962, ಜಗಳೂರಿನಲ್ಲಿ 1376, ಚನ್ನಗಿರಿಯಲ್ಲಿ 2678, ಹೊನ್ನಾಳಿಯಲ್ಲಿ 3122, ಹೊರ ಜಿಲ್ಲೆಯ 756 ಜನರು ಸೇರಿದಂತೆ 27,681 ಸೋಂಕಿತರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 2984 ಸಕ್ರಿಯ ಪ್ರಕರಣಗಳಿವೆ.
ಜಿಲ್ಲೆಯ ವಿವಿಧ ಆಸ್ಪತ್ರೆಯಲ್ಲಿ 233 ಸೋಂಕಿತರು ಸಾಮಾನ್ಯ,671 ಸೋಂಕಿತರು ಆಕ್ಸಿಜನ್,34 ಸೋಂಕಿತರು ಎಚ್ಎಫ್ಎನ್ಸಿ, 52 ಸೋಂಕಿತರು ವೆಂಟಿಲೇಟರ್ ರಹಿತ,37 ಸೋಂಕಿತರು ವೆಂಟಿಲೇಟರ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ೧೨೮೦ಸೋಂಕಿತರು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. 180 ಜನರು ಕೋವಿಡ್ ಕೇರ್ ಸೆಂಟರ್ನಲ್ಲಿ ಇದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ