ಸತ್ತವರ ನೆರಳು, ಜಿಲ್ಲೆಗೆ ಉರುಳು

ಸೋಂಕಿತರ ಸಂಖ್ಯೆ ಇಳಿಮುಖ | ಸಾವಿನ ಸಂಖ್ಯೆ ಏರುಮುಖ | ಎರಡನೇ ಸ್ಥಾನಕ್ಕೇರಿದ ಧಾರವಾಡ

Team Udayavani, Jun 1, 2021, 5:29 PM IST

98488

ವರದಿ: ಶಶಿಧರ್‌ ಬುದ್ನಿ

ಧಾರವಾಡ: ಜಿಲ್ಲೆಯಲ್ಲಿ ಪ್ರತಿನಿತ್ಯ ಸಾವಿರ ಗಡಿ ದಾಟುತ್ತಿದ್ದ ಸೋಂಕಿತರ ಸಂಖ್ಯೆ ಇಳಿಮುಖವಾಗಿದ್ದರೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ ಸಾವಿರ ಗಡಿ ದಾಟುತ್ತಿದೆ. ಆದರೆ ಸೋಂಕಿತರ ಸಾವಿನ ಸಂಖ್ಯೆ ಏರುಮುಖ ಮಾಡಿದ್ದು, ಸಾವಿನ ಸಂಖ್ಯೆಯಲ್ಲಿ ರಾಜ್ಯಕ್ಕೆ ಧಾರವಾಡ ಜಿಲ್ಲೆಗೆ 2ನೇ ಸ್ಥಾನ ಸಿಕ್ಕಿದೆ.

ಮೇ 30ರಂದು ಒಂದೇ ದಿನಕ್ಕೆ 19 ಸೋಂಕಿತರು ಮೃತಪಟ್ಟ ಸಂಖ್ಯೆ ಲಭಿಸಿದ್ದು, ಸಾವಿನ ಸಂಖ್ಯೆಯಲ್ಲಿ ಬೆಂಗಳೂರಿನ ನಂತರದ ಸ್ಥಾನ ಜಿಲ್ಲೆಗೆ ಲಭಿಸಿದೆ. ಅದರ ಹಿಂದಿನ ದಿನವೂ (ಮೇ 29) ರಂದು 19 ಜನ ಸೋಂಕಿತರು ಮೃತಪಟ್ಟು, ರಾಜ್ಯಕ್ಕೆ 3ನೇ ಸ್ಥಾನ ಪಡೆದಿತ್ತು. (ಮೇ 31) ಮತ್ತೆ 10 ಜನ ಸಾವನ್ನಪ್ಪಿದ್ದಾರೆ. ಕಳೆದ ಒಂದು ವಾರದಿಂದ 10ರೊಳಗಿದ್ದ ಸಾವಿನ ಸಂಖ್ಯೆ ಅದರ ಗಡಿ ದಾಟಿದೆ. ಇದಲ್ಲದೇ ಐಸಿಯು ಬೆಡ್‌ನ‌ಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂಖ್ಯೆಯೂ ಏರುತ್ತಲೇ ಇದೆ.

ಸದ್ಯ 500ಕ್ಕೂ ಹೆಚ್ಚು ಸೋಂಕಿತರು ಐಸಿಯು ಬೆಡ್‌ ನಲ್ಲಿ ಚಿಕಿತ್ಸೆ ಪಡೆದಿದ್ದರೆ, ವೆಂಟಿಲೇಟರ್‌ಗಳೆಲ್ಲವೂ ಕಾರ್ಯ ನಿರ್ವಹಣೆಯಲ್ಲಿವೆ. ಏರುತ್ತಲಿದೆ ಸಾವಿನ ಸಂಖ್ಯೆ: ಜಿಲ್ಲಾಡಳಿತ ನೀಡಿರುವ ಮಾಹಿತಿ ಪ್ರಕಾರ ಕಳೆದ ಏಪ್ರಿಲ್‌ನಿಂದ ಈ ವರ್ಷದ ಮೇ 31ರವರೆಗೆ ಕೋವಿಡ್‌ನಿಂದ ಮರಣ ಹೊಂದಿದವರ ಸಂಖ್ಯೆ 969 ಇದ್ದರೆ ಕೋವಿಡ್‌ ಅಲ್ಲದ ಅನ್ಯ ಕಾರಣದಿಂದ ಮರಣ ಹೊಂದಿದ್ದು ಕೇವಲ ಒಬ್ಬರಷ್ಟೇ. ಈ ಪೈಕಿ 2021ರ ಏ. 1ರಿಂದ ಮೇ 31ರವರೆಗೆ ಕೋವಿಡ್‌ನಿಂದ ಸತ್ತವರು 344. ಏಪ್ರಿಲ್‌ ತಿಂಗಳಲ್ಲಿ 77 ಜನ ಸೋಂಕಿತರು ಮೃತಪಟ್ಟಿದ್ದರೆ ಕೇವಲ ಮೇ ತಿಂಗಳೊಂದರಲ್ಲಿಯೇ ಸತ್ತವರು 267.

ಈ ಅಂಕಿ-ಅಂಶ ಅವಲೋಕಿಸಿದಾಗ ಕಳೆದ ವರ್ಷಕ್ಕಿಂತ ಈ ವರ್ಷ ಕೋವಿಡ್‌ ಹೊಡೆತಕ್ಕೆ ಬಲಿಯಾದವರ ಸಂಖ್ಯೆ ಏರುಮುಖ ಮಾಡಿದೆ. ಬರೀ ಎರಡು ತಿಂಗಳಲ್ಲಿಯೇ 344 ಜನರು ಕೋವಿಡ್‌ಗೆ ಬಲಿಯಾಗಿದ್ದು, ಕೋವಿಡ್‌ ಕರಾಳತೆಗೆ ಸಾಕ್ಷಿಯಾಗಿದೆ.

ಸಾವಿಗೆ ಕಾರಣವೇನು?: ಕೋವಿಡ್‌ ಗುಣಲಕ್ಷಣ ವಿದ್ದರೂ ನಿರ್ಲಕ್ಷé ಮಾಡಿದ ಪರಿಣಾಮ ಸಾವಿನ ಸಂಖ್ಯೆ ಏರಲು ಕಾರಣವೆನ್ನುತ್ತಾರೆ ತಜ್ಞ ವೈದ್ಯರು. ಸೌಮ್ಯ ಗುಣ ಲಕ್ಷಣಗಳು ಕಂಡುಬಂದಾಗಲೇ ಕೋವಿಡ್‌ ತಪಾಸಣೆ ಮಾಡಿಸಿಕೊಳ್ಳದೇ ಮನೆಯಲ್ಲೇ ಉಳಿದು, ಕೊನೆಯ ಕ್ಷಣದಲ್ಲಿ ಆಸ್ಪತ್ರೆ ಬಾಗಿಲು ತಟ್ಟುವುದು, ಕೋವಿಡ್‌ ದೃಢಪಟ್ಟ ಬಳಿಕವೂ ಹೋಮ್‌ ಐಸೋಲೇಷನ್‌ ಗೆ ಅಷ್ಟೇ ಒಳಗಾಗಿದ್ದಲ್ಲದೇ ಕೋವಿಡ್‌ ಕಾಳಜಿ ಕೇಂದ್ರಕ್ಕೆ ಹೋಗಲು ಹಿಂದೇಟು ಹಾಕುವುದು, ಕೋವಿಡ್‌ನ‌ 2ನೇ ಅಲೆ ಆರಂಭಕ್ಕೆ ನಿಗದಿತ ಸಮಯಕ್ಕೆ ಆಕ್ಸಿಜನ್‌ ಬೆಡ್‌-ವೆಂಟಿಲೇಟರ್‌ ಕೊರತೆ ಹಾಗೂ ಸೂಕ್ತ ಚಿಕಿತ್ಸೆ ಅಲಭ್ಯತೆಯಿಂದ ಸಾವಿನ ಸಂಖ್ಯೆ ಏರಿಕೆಗೆ ಕಾರಣವಾಗಿದೆ. ಮಧುಮೇಹ, ರಕ್ತದೊತ್ತಡ ಸೇರಿದಂತೆ ಇನ್ನಿತರೆ ಕಾಯಿಲೆಗಳ ಉಲ್ಬಣದಿಂದಲೂ ಕೋವಿಡ್‌ ಸೋಂಕಿತರು ಬಲಿಯಾಗಿದ್ದಾರೆ ಅಂದರೆ ತಪ್ಪಾಗಲಾರದು.

ಟಾಪ್ ನ್ಯೂಸ್

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.