ಚಂದ್ರಂಪಳ್ಳಿ ಜಲಾಶಯದಲ್ಲಿ ಮೊಸಳೆ: ಆತಂಕ
Team Udayavani, Jul 15, 2019, 2:58 PM IST
ಚಿಂಚೋಳಿ: ಚಂದ್ರಂಪಳ್ಳಿ ಜಲಾಶಯದಲ್ಲಿ ಬೃಹತ್ ಗಾತ್ರದ ಮೊಸಳೆ ದಡಕ್ಕೆ ಬಂದು ಮಲಗಿದೆ.
ಚಿಂಚೋಳಿ: ತಾಲೂಕಿನ ಕುಂಚಾವರಂ ವನ್ಯಜೀವಿ ಧಾಮ ಅರಣ್ಯಪ್ರದೇಶದಲ್ಲಿ ಬರುವ ಚಂದ್ರಂಪಳ್ಳಿ ಜಲಾಶಯದಲ್ಲಿ ನೀರಿನ ಪ್ರಮಾಣ ಅತಿ ಕಡಿಮೆ ಇರುವುದರಿಂದ ಕಳೆದೆರಡು ದಿನಗಳಿಂದ ಜಲಾಶಯ ದಡದಲ್ಲಿ ಬೃಹತ್ ಗಾತ್ರದ ಮೊಸಳೆ ಕಾಣಿಸಿಕೊಂಡಿರುವುದರಿಂದ ಗ್ರಾಮಸ್ಥರಲ್ಲಿ ಭಯದ ಭೀತಿಯನ್ನುಂಟು ಮಾಡಿದೆ.
ಕಲಬುರಗಿ ನಗರದ ಶರಣಬಸವೇಶ್ವರ ಕೆರೆಯಲ್ಲಿ ಕಳೆದ ಎಂಟು ವರ್ಷಗಳ ಹಿಂದೆ ಕಾಣಿಸಿಕೊಂಡಿದ್ದ ಮೊಸಳೆಯ ಸಣ್ಣ ಮರಿಯನ್ನು ತಾಲೂಕಿನ ಚಂದ್ರಂಪಳ್ಳಿ ಜಲಾಶಯಕ್ಕೆ ತಾಲೂಕು ವಲಯ ಅರಣ್ಯಾಧಿಕಾರಿ ಆರ್.ಆರ್. ಯಾದವ ನೇತೃತ್ವದಲ್ಲಿ ಖಾಸಗಿ ವಾಹನವೊಂದರಲ್ಲಿ ಗುಪ್ತವಾಗಿ ತಂದು ಬಿಡಲಾಗಿತ್ತು. ಈಗ ಅದು ಬೃಹತ್ ಗಾತ್ರದ ಮೊಸಳೆಯಾಗಿ ಬೆಳೆದಿದೆ.
ಕಳೆದ ವರ್ಷ ಜಲಾಶಯದ ದಡದಲ್ಲಿ ಮೊಸಳೆ ಮಲಗಿರುವುದನ್ನು ದನಗಾಹಿಗಳು ನೋಡಿ ಭಯಭೀತರಾಗಿ ಗ್ರಾಮದ ಜನರಿಗೆ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದ್ದರು. ಆಗ ಅರಣ್ಯ ಇಲಾಖೆ ಎಚ್ಚೆತ್ತುಕೊಂಡು ಡಂಗೂರ ಸಾರಿ ಜನರಿಗೆ ಎಚ್ಚರಿಕೆ ನೀಡಿದ್ದರು.
ಆದರೀಗ ಶುಕ್ರವಾರ ಮತ್ತು ಶನಿವಾರ ಚಂದ್ರಂಪಳ್ಳಿ ಜಲಾಶಯದ ಮಧ್ಯಭಾಗದಲ್ಲಿ ಇರುವ (ನಡುಗಡ್ಡೆಯಂತಹ) ಪ್ರದೇಶದಲ್ಲಿ ಮಲಗಿರುವ ಮೊಸಳೆ ಕಂಡು ಮತ್ತೆ ಆತಂಕ ಪಡುವಂತಾಗಿದೆ. ಚಂದ್ರಂಪಳ್ಳಿ ಗ್ರಾಮಸ್ಥರು ಹೆಚ್ಚಾಗಿ ಕೆರೆಯಲ್ಲಿ ಬಟ್ಟೆ ತೊಳೆಯಲು ಬರುತ್ತಾರೆ. ದನಕರುಗಳಿಗೆ ನೀರು ಕುಡಿಸಲು ಬರುತ್ತಾರೆ. ಕಾಡು ಪ್ರಾಣಿಗಳು ಸಂಜೆ ವೇಳೆ ನೀರು ಕುಡಿಯಲು ಬರುತ್ತವೆ. ಹೀಗಾಗಿ ಜನತೆ ಭಯಭೀತರಾಗಿದ್ದಾರೆ.
ಮೊಸಳೆ ಜಲಾಶಯದಲ್ಲಿ ಕಾಣಿಸಿಕೊಂಡಿರುವುದು ನಿಜ. ಜನರಿಗೆ ಜಲಾಶಯದ ಹತ್ತಿರ ಹೋಗದಂತೆ ತಿಳಿಸಲು ಡಂಗೂರ ಸಾರಲಾಗುವುದು. ಮೊಸಳೆ ದೊಡ್ಡದಾಗಿದೆ. ಎರಡು ವರ್ಷಗಳ ಹಿಂದೆ ಕಾಣಿಸಿಕೊಂಡಿತ್ತು. ಸದ್ಯ ನೀರಿನ ಪ್ರಮಾಣ ಕಡಿಮೆ ಇದೆ. ಹೀಗಾಗಿ ಹೊರಗೆ ಬರುತ್ತಿರಬಹುದು.
•ಸಿದ್ಧಾರೂಢ,
ವನ್ಯಜೀವಿ ಉಪ ಸಂರಕ್ಷಣಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ