ಸಾಂಸ್ಕೃತಿಕ ರಾಯಭಾರಿ ಅಯ್ಯಪ್ಪ ತುಕ್ಕಾಯಿ ಇನ್ನಿಲ್ಲ

ರಾಯಚೂರು: ಸುಪ್ರೀಂಕೋರ್ಟ್‌ ನಿವೃತ್ತ ನ್ಯಾಯಾಧೀಶ ಶಿವರಾಜ ಪಾಟೀಲ ಜತೆ ಸಾಹಿತಿ ಅಯ್ಯಪ್ಪ ತುಕ್ಕಾಯಿ

Team Udayavani, Apr 5, 2019, 1:15 PM IST

5-April-16

ರಾಯಚೂರು: ನಿಷ್ಕಲ್ಮಶ ನಗುವಿನ ಮೂಲಕ ಎಂಥವರನ್ನು ಬರಸೆಳೆಯುತ್ತಿದ್ದ ಜಿಲ್ಲೆಯ ಹಿರಿಯ ಸಾಹಿತಿ, ಸಾಂಸ್ಕೃತಿಕ ಲೋಕದ ರಾಯಭಾರಿ ಅಯ್ಯಪ್ಪ ತುಕ್ಕಾಯಿ ಬಾರದ ಲೋಕಕ್ಕೆ ತೆರಳಿದ್ದಾರೆ. ಬರವಣಿಗೆ, ತಮ್ಮ ವಿಶೇಷ ವ್ಯಕ್ತಿತ್ವದ ಮೂಲಕವೇ ಜನಮಾನಸದಲ್ಲಿ ಅಚ್ಚಳಿಯದೆ ಉಳಿದ ಅವರು ಅಸಂಖ್ಯ ಶಿಷ್ಯ ಬಳಗವನ್ನಗಲಿದ್ದಾರೆ.

ಸಿಂಧನೂರು ಮೂಲದವರಾದ ತುಕ್ಕಾಯಿ, ಕೃಷಿಕ ಕುಟುಂಬದ ಹಿನ್ನೆಲೆಯುಳ್ಳವರು. ಎಂಎ, ಎಲ್‌ಎಲ್‌ಬಿ, ಡಿಪ್ಲೊಮಾ ಇನ್‌ ಜರ್ನಲಿಸಂ ವ್ಯಾಸಂಗ ಮಾಡಿದವರು. ವೃತ್ತಿಯಲ್ಲಿ ಉಪನ್ಯಾಸಕರಾಗಿದ್ದ ಅವರನ್ನು ಸಹಜವಾಗಿಯೇ ಸಾರಸ್ವತ ಲೋಕ ಬರಸೆಳೆದಿತ್ತು. ನಗರದ ಟ್ಯಾಗೋರ್‌ ಕಾಲೇಜಿನಲ್ಲಿ ಸಮಾಜಶಾಸ್ತ್ರ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಬಳಿಕ ಸ್ಪಿಲ್‌ ಪತ್ರಿಕೋದ್ಯಮ ಕಾಲೇಜಿನ ಪ್ರಾಚಾರ್ಯರಾಗಿ ತಮ್ಮ ಸೇವೆ ಮುಂದುವರಿಸಿದರು. ಸುಮಾರು 5 ದಶಕಗಳ ಕಾಲ ಅಕ್ಷರದೊಂದಿಗೆ ಅವರ ನಂಟು ಕಳೆದಿರಲಿಲ್ಲ. ಕನ್ನಡ ಸಾಹಿತ್ಯ ಪರಿಷತ್‌ನಲ್ಲೂ ಸಕ್ರಿಯರಾಗಿ ಗುರುತಿಸಿಕೊಂಡಿದ್ದ ಅವರು, ಅನೇಕ ಸ್ಮರಣೀಯ ಕಾರ್ಯಕ್ರಮಗಳನ್ನು ನಡೆಸಿದ್ದರು.

ಅಗಾಧ ಸ್ಮರಣ ಶಕ್ತಿ: ಅಯ್ಯಪ್ಪ ತುಕ್ಕಾಯಿ ಅವರನ್ನು ಅವರ ಶಿಷ್ಯರು ನೆನಪು ಮಾಡಿಕೊಳ್ಳುವುದೇ ಅವರ ಸ್ಮರಣ ಶಕ್ತಿಯಿಂದ. ಅವರು ಪಾಠ ಮಾಡಲು ನಿಂತರೆ ದಿನಾಂಕ, ಸಮಯ, ಇಸ್ವಿಯನ್ನು ಉಲ್ಲೇಖೀಸಿ ಬೋಧಿ ಸುತ್ತಿದ್ದರು. ಎಷ್ಟೋ ವರ್ಷಗಳ ಹಿಂದಿನ ವಿಚಾರಗಳು ಅವರ ನಾಲಿಗೆ ತುದಿಯಲ್ಲೇ ಇರುತ್ತಿದ್ದವು ಎನ್ನುವುದು ವಿಶೇಷ. ಅದಕ್ಕಿಂತ ಅವರ ಸಮಯ ಪಾಲನೆ ಕೂಡ ಅಷ್ಟೇ ಕಟ್ಟು ನಿಟ್ಟಿನದ್ದಾಗಿತ್ತು. ನಿತ್ಯ ಬೆಳಗ್ಗೆ 4:50ಕ್ಕೆ ಏಳುವುದು ಅವರ ದಿನಚರಿ. ಯಾವುದೇ ಕಾರ್ಯಕ್ರಮವಿರಲಿ ಹೇಳಿದ ಸಮಯಕ್ಕಿಂತ ಮುಂಚಿತವಾಗಿಯೇ ಅವರು ತಲುಪುತ್ತಿದ್ದರು.

ಉತ್ತಮ ನಿರೂಪಕ, ಬರಹಗಾರ: ಅಯ್ಯಪ್ಪ ತುಕ್ಕಾಯಿ ಅವರು ರಾಜ್ಯ ಮತ್ತು ಸ್ಥಳೀಯ ಪತ್ರಿಕೆಗಳಿಗೆ ಲೇಖನಗಳನ್ನು ಬರೆದಿದ್ದಾರೆ. ಅಂದಾಜು 800 ಬಿಡಿ ಲೇಖನಗಳು, 375ಕ್ಕೂ ಅಧಿಕ ಸಂದರ್ಶನ ಬರಹಗಳು, 300ಕ್ಕೂ ಅ ಧಿಕ ಪುಸ್ತಕ ಪರಿಚಯ ಬರಹಗಳು ಅವರ ಬರವಣಿಗೆಗೆ ಹಿಡಿದ ಕೈಗನ್ನಡಿ. ಅದರ ಜತೆಗೆ ಅನೇಕ ಸಾಂದರ್ಭಿಕ ಲೇಖನಗಳು, ವಿಶೇಷ ಲೇಖನಗಳನ್ನು ಬರೆಯುವ ಮೂಲಕ ತಮ್ಮೊಳಗಿನ ಬರಹಗಾರನನ್ನು ಸದಾ ಜಾಗೃತನನ್ನಾಗಿಸುತ್ತಿದ್ದರು. ಅದರ ಜತೆಗೆ ಯಾವುದೇ ಸಾಂಸ್ಕೃತಿಕ, ಸಾಹಿತ್ಯಿಕ ಸಮಾರಂಭಗಳಲ್ಲಿ ಮುಂಚೂಣಿಯಲ್ಲಿದ್ದು, ತಾವೇ ನಿರೂಪಕರಾಗಿ ತೊಡಗಿಕೊಳ್ಳುತ್ತಿದ್ದರು. ಜಿಲ್ಲಾಡಳಿತದ ಸಭೆ ಸಮಾರಂಭಗಳಲ್ಲೂ ಸರಿ ಸುಮಾರು ಎರಡು ದಶಕಗಳ ಕಾಲ ನಿರೂಪಕರಾಗಿ ಸೇವೆ ಸಲ್ಲಿಸಿದ್ದಾರೆ.

ಪತ್ರ ಬರೆಯುತ್ತಿದ್ದರು: ತಂತ್ರಜ್ಞಾನ ಎಷ್ಟೇ ಮುಂದುವರಿದೂ ಇಮೇಲ್‌ ಮೊಬೈಲ್‌ ಬಳಕೆ ಕಾಲದಲ್ಲೂ ಅವರು ತಮ್ಮ ಒಡನಾಡಿಗಳ ಜತೆ ಪತ್ರ ವ್ಯವಹಾರ ಹೊಂದಿರುತ್ತಿದ್ದರು. ಯೋಗಕ್ಷೇಮ ವಿಚಾರಣೆ, ಅಭಿನಂದನೆ, ಶುಭಾಶಯ ತಿಳಿಸಲು ಅವರು ಅಂಚೆ ಕಾರ್ಡ್‌ಗಳನ್ನೇ ಬಳಸುತ್ತಿದ್ದದ್ದು ವಿಶೇಷ. ವಯಸ್ಸಿನ ಹಂಗಿಲ್ಲದೇ ಎಲ್ಲರನ್ನೂ ಗೌರವದಿಂದ ಆತ್ಮೀಯವಾಗಿ ಮಾತನಾಡಿಸುತ್ತಿದ್ದ ಅವರ ವ್ಯಕ್ತಿತ್ವ ಅವರನ್ನು ಎತ್ತರದ ಸ್ಥಾನಕ್ಕೆ ಕರೆದೊಯ್ದಿತ್ತು. ತಮ್ಮ ವಿಭಿನ್ನ ಬೋಧನೆ, ಆಪ್ಯಾಯತೆ ಮೂಲಕ ಅನೇಕ ಶಿಷ್ಯರನ್ನು ಗಳಿಸಿರುವ ಅವರು, ಇಂದು ಕಾಣದಲೋಕಕ್ಕೆ ತೆರಳಿದ್ದಾರೆ. ದೇಶ, ವಿದೇಶಗಳಲ್ಲಿರುವ ಅವರ ಶಿಷ್ಯ ಬಳಗ ಅವರ ಅಗಲಿಕೆಗೆ ಕಂಬನಿ ಮಿಡಿಯುತ್ತಿದೆ.

ಹೃದಯ ಕಾಯಿಲೆ: ಅಯ್ಯಪ್ಪ ತುಕ್ಕಾಯಿ ಹೃದಯ ಸಂಬಂಧಿ
ಕಾಯಿಲೆಯಿಂದ ಬಳಲುತ್ತಿದ್ದರು. ಮೃತರಿಗೆ ಪತ್ನಿ, ಪುತ್ರ, ಪುತ್ರಿ ಹಾಗೂ ಅಪಾರ ಬಂಧು ಬಳಗ, ಶಿಷ್ಯರು ಇದ್ದಾರೆ. ನಗರದ ಬೋಳಮಾನದೊಡ್ಡಿ ರಸ್ತೆಯಲ್ಲಿರುವ ವೀರಶೈವ ರುದ್ರಭೂಮಿಯಲ್ಲಿ ಗುರುವಾರ ಸಂಜೆ ಅಂತ್ಯಕ್ರಿಯೆ ನೆರವೇರಿತು.

ಕಸಾಪಕ್ಕೆ ಸೇವೆ
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ 20 ವರ್ಷಗಳಿಗೂ ಅಧಿಕ ಕಾಲ ಸಕ್ರಿಯರಾಗಿದ್ದ ಅವರು 2010-13ರವರೆಗೆ ಜಿಲ್ಲಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ತಮ್ಮ ಅಧಿಕಾರದ ಇತಿಮಿತಿಯೊಳಗೆ ಉತ್ತಮ ಸಾಹಿತ್ಯ ಚಟುವಟಿಕೆ ನಡೆಸುವ ಮೂಲಕ ಗಮನ ಸೆಳೆದಿದ್ದರು. ಅವರ ಅವ ಧಿಯಲ್ಲಿ ಎರಡು ಜಿಲ್ಲಾ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ ನಡೆಸಲಾಗಿತ್ತು.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.