ಬೆಳ್ತಂಗಡಿ: ಶೇ. 80.92 ಮತದಾನ


Team Udayavani, Apr 20, 2019, 6:00 AM IST

Udayavani Kannada Newspaper

ಬೆಳ್ತಂಗಡಿ: ತಾ|ನಲ್ಲಿ ನಡೆದ ಶಾಂತಿಯುತ-ಸುವ್ಯವಸ್ಥಿತ ಮತದಾನಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಒಟ್ಟು 241 ಬೂತ್‌ಗಳಲ್ಲಿ ಶೇ. 80.92 ಮತದಾನವಾಗಿದೆ. ಬಾಂಜಾರುಮಲೆ ಮತಗಟ್ಟೆಯಲ್ಲಿ ಗರಿಷ್ಠ ಶೇ. 99 ಮತದಾನವಾಗಿದ್ದು, 52 ಪುರುಷರು, 54 ಮಹಿಳೆಯರು, ಕಲ್ಮಂಜ ಮತಗಟ್ಟೆಯಲ್ಲಿ ಕನಿಷ್ಠ ಶೇ. 64.12 ಮತದಾನವಾಗಿದ್ದು, ಕಲ್ಮಂಜ ಪೂರ್ವ ಮತಗಟ್ಟೆಯಲ್ಲಿ 596 ಪುರುಷ, 584 ಮಹಿಳಾ ಮತದಾರರು, ಕಲ್ಮಂಜ ಉತ್ತರದಲ್ಲಿ 491 ಪುರುಷ , 488 ಮಹಿಳಾ ಮತದಾರರಿದ್ದರು.

ತಾಲೂಕಿನಲ್ಲಿ ಬೆಳಗ್ಗೆ 7ಕ್ಕೆ ಆರಂಭವಾದ ಮತದಾನ ಸುಮಾರು 11ಕ್ಕೆ ಶೇ. 33, ಅಪರಾಹ್ನ 1 ಗಂಟೆಗೆ ಶೇ. 51.35, 3ಕ್ಕೆ 63.17, 5ಕ್ಕೆ ಶೇ. 77, ಸಂಜೆ 6 ಗಂಟೆಗೆ ಶೇ. 80.92 ಮತದಾನವಾಗುವ ಮೂಲಕ ಗ್ರಾಮೀಣರಲ್ಲಿ ಮತದಾನದ ಬಗ್ಗೆ ಇರುವ ಜಾಗೃತಿ ವ್ಯಕ್ತವಾಗಿದೆ. ಕ್ಷೇತ್ರದಲ್ಲಿ ಎಂಡೋಸಲ್ಫಾನ್‌ ಪೀಡಿತ, ಕುಗ್ರಾಮ, ಅತಿ ಸೂಕ್ಷ್ಮ ಪ್ರದೇಶಗಳಿದ್ದರೂ ಮತದಾನ ಯಶಸ್ವಿಯಾಗಿದೆ.

5 ಆ್ಯಂಬುಲೆನ್ಸ್‌ ಸೇವೆಯಲ್ಲಿ
ಆರೋಗ್ಯ ಇಲಾಖೆಯಿಂದ ಬೂತ್‌ಗಳಿಗೆ 270 ವಿಶೇಷ ಕಿಟ್‌ ವಿತರಿಸಲಾಗಿದೆ. ನಾರಾವಿ-1 ವೇಣೂರು-1 ಉಜಿರೆ-1 ಕೊಕ್ಕಡ-2 ಸಹಿತ ಒಟ್ಟು 5 ಆ್ಯಂಬುಲೆನ್ಸ್‌ ವ್ಯವಸ್ಥೆ ಕಲ್ಪಿಸಲಾಗಿತ್ತು. ಅವಶ್ಯವಿದ್ದಲ್ಲಿ ತುರ್ತು ಸೇವೆಗಾಗಿ ಪ್ರಥಮ ಮತಗಟ್ಟೆ ಅಧಿಕಾರಿ, ದ್ವಿತೀಯ ಮತಗಟ್ಟೆ ಅಧಿಕಾರಿ, ತೃತೀಯ ಮತಗಟ್ಟೆ ಅಧಿಕಾರಿಗಳನ್ನು ಹೆಚ್ಚುವರಿಯಾಗಿ ನಿಯೋಜಿಸಲಾಗಿತ್ತು. ಎಲ್ಲ ಪ್ರಾಥಮಿಕ ಕೇಂದ್ರಗಳಲ್ಲಿ ಸಂಜೆ 6 ಗಂಟೆವರೆಗೆ ಸಿಬಂದಿ ಹಾಗೂ ಡಾಕ್ಟರ್‌ಗಳಿಗೆ ಕಾರ್ಯ ನಿರ್ವಹಿಸುವಂತೆ ಕ್ರಮ ಕೈಗೊಳ್ಳ ಲಾಗಿತ್ತು ಎಂದು ತಾ| ಆರೋಗ್ಯಾಧಿಕಾರಿ ಡಾ| ಕಲಾಮಧು ತಿಳಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ 241 ಬೂತ್‌ಗಳಲ್ಲಿ ಯಶಸ್ವಿ ಮತದಾನವಾಗಿದ್ದು, ಎಸ್‌ಡಿಎಂ ಕಾಲೇಜಿನ ಡಿಮಸ್ಟರಿಂಗ್‌ 24 ಕೊಠಡಿಗಳಲ್ಲಿ ಪ್ರತಿ ಕೊಠಡಿಗೆ 6 ಜನ ಸಿಬಂದಿಯಂತೆ ರಾತ್ರಿ 11 ಗಂಟೆಗೆ ಸಂಪೂರ್ಣ ಇವಿಎಂ ಪ್ಯಾಟ್‌ ಭದ್ರತ ಕೊಠಡಿ ಸೇರಿ, ಬಳಿಕ ಭದ್ರತೆ ಮೂಲಕ ಮಂಗಳೂರು ತಲುಪಿದೆ.

ಚುನಾವಣಾಧಿಕಾರಿಯಿಂದ ಕೃತಜ್ಞತೆ
ಬೆಳ್ತಂಗಡಿ ತಾಲೂಕಿನ 241 ಮತಗಟ್ಟೆಗಳಲ್ಲಿ ಎ. 18ರಂದು ಮತದಾನ ಶಾಂತಿಯುತವಾಗಿ ಪೂರ್ಣಗೊಂಡಿತ್ತು. ಶೇ. 80.92 ಮತದಾನ ದಾಖಲೆಯಾಗಿದೆ. ಪ್ರಜಾತಂತ್ರದ ಹಬ್ಬದಲ್ಲಿ ಪಾಲ್ಗೊಂಡ ಎಲ್ಲ ಮತದಾರರಿಗೂ, ಈ ಬಗ್ಗೆ ಜಾಗೃತಿಯನ್ನು ಮೂಡಿಸಲು ಶ್ರಮಿಸಿದ ಅಧಿಕಾರಿಗಳು, ಪತ್ರಿಕಾ ಮಿತ್ರರು, ಸ್ವಯಂ ಸೇವಾ ಸಂಘಗಳು, ಪ್ರತ್ಯಕ್ಷ- ಪರೋಕ್ಷವಾಗಿ ಶ್ರಮಿಸಿದ ಎಲ್ಲರಿಗೂ ತಾಲೂಕು ಆಡಳಿತ, ತಾಲೂಕು ಸ್ವೀಪ್‌ ಸಮಿತಿ ಮತ್ತು ಸಹಾಯಕ ಚುನಾವಣಾಧಿಕಾರಿ ಕಚೇರಿಯಿಂದ ಕೃತಜ್ಞತೆ ಸಲ್ಲಿಸಲಾಗಿದೆ.

ಮತದಾನಕ್ಕೆ ಉತ್ತಮ ಸ್ಪಂದನೆ
ಶಾಂತಿಯುತ ಹಾಗೂ ಶೇಕಡವಾರು ಮತದಾನದಲ್ಲಿ ತಾಲೂಕಿನಿಂದ ಉತ್ತಮ ಸ್ಪಂದನೆ ದೊರೆತಿದೆ. ಕೆಲವೆಡೆ ಮತಯಂತ್ರ ಸಮಸ್ಯೆಯಾದ ತತ್‌ಕ್ಷಣ ಸರಿಪಡಿಸಿ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಮುಂಜಾನೆ ಸುಮಾರು 3 ಗಂಟೆ ಬಳಿಕ ಎಲ್ಲ ಇವಿಎಂ ಯಂತ್ರವನ್ನು ಭದ್ರತೆ ಮೂಲಕ ಮಂಗಳೂರಿಗೆ ತಲುಪಿಸಲಾಗಿದೆ.
ಎಚ್‌.ಆರ್‌. ನಾಯಕ್‌, ಸಹಾಯಕ ಚುನಾವಣಾಧಿಕಾರಿ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.