ಕಿಡ್ನಿ ವೈಫ‌ಲ್ಯ, ಕ್ಯಾನ್ಸರ್‌ ರೋಗಿಗಳಿಗೆ 1.23 ಕೋ. ರೂ. ನೆರವು

ಕೆಎಂಸಿ, ಫಾದರ್‌ ಮುಲ್ಲರ್‌ ಆಸ್ಪತ್ರೆಗಳ ರೋಗಿಗಳಿಗೆ ಜಿ. ಶಂಕರ್‌ ಟ್ರಸ್ಟ್‌ನಿಂದ ಧನ ಸಹಾಯ

Team Udayavani, Oct 5, 2019, 4:37 AM IST

z-38

ಮಂಗಳೂರು: ಅಂಬಲಪಾಡಿ ಜಿ. ಶಂಕರ್‌ ಫ್ಯಾಮಿಲಿ ಟ್ರಸ್ಟ್‌ನ ಪ್ರವರ್ತಕ ಡಾ| ಜಿ. ಶಂಕರ್‌ ಅವರು ತಮ್ಮ 64ನೇ ವರ್ಷದ ಜನ್ಮ ದಿನದ ಪ್ರಯುಕ್ತ ಶುಕ್ರವಾರ ನಗರದ ಅತ್ತಾವರದಲ್ಲಿರುವ ಕೆ.ಎಂ.ಸಿ. ಆಸ್ಪತ್ರೆ ಮತ್ತು ಕಂಕನಾಡಿ ಫಾದರ್‌ ಮುಲ್ಲರ್‌ ಆಸ್ಪತ್ರೆಯಲ್ಲಿ ಕ್ಯಾನ್ಸರ್‌ ಮತ್ತು ಕಿಡ್ನಿ ವೈಫ‌ಲ್ಯದಿಂದ ಬಳಲುತ್ತಿರುವ ರೋಗಿಗಳಿಗೆ ಒಟ್ಟು 1.23 ಕೋಟಿ ರೂ.ಗಳ ನೆರವು ನೀಡಿದ್ದಾರೆ.

ಕೆಎಂಸಿ ಆಸ್ಪತ್ರೆಯ 289 ಕ್ಯಾನ್ಸರ್‌ ರೋಗಿಗಳಿಗೆ ಒಟ್ಟು 73 ಲಕ್ಷ ರೂ. ಹಾಗೂ ಫಾದರ್‌ ಮುಲ್ಲರ್‌ ಆಸ್ಪತ್ರೆಯ 76 ಕ್ಯಾನ್ಸರ್‌ ಹಾಗೂ 107 ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ರೋಗಿಗಳಿಗೆ ಸುಮಾರು 50 ಲಕ್ಷ ರೂ. ನೆರವು ಹಸ್ತಾಂತರಿಸಿದರು.

ಕೆಎಂಸಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಜಿ. ಶಂಕರ್‌, ಕ್ಯಾನ್ಸರ್‌ ರೋಗಕ್ಕೆ ತುತ್ತಾದವರು ಹೆದರಬೇಡಿ. ಇತ್ತೀಚಿನ ದಿನಗಳಲ್ಲಿ ಎಲ್ಲ ರೋಗಗಳನ್ನು ಸಮರ್ಪಕ ಚಿಕಿತ್ಸೆಯಿಂದ ಗುಣಪಡಿಸಬಹುದು. ಸಾವು ಎಂಬುದು ಎಲ್ಲರಿಗೂ ಬರುತ್ತದೆ. ಅದನ್ನು ಎದುರಿಸಲು ಶಕ್ತಿ ಬೇಕು. ಕಾಯಿಲೆಗೆ ಒಳಪಟ್ಟ ರೋಗಿಗೆ ಮನೆ ಮಂದಿ ಆತ್ಮಸ್ಥೆ çರ್ಯ ತುಂಬಬೇಕು. ಕಳೆದ 4 ವರ್ಷಗಳಿಂದ ಮಂಗಳೂರು ಭಾಗದ ಆಸ್ಪತ್ರೆಗಳಲ್ಲಿ ಕ್ಯಾನ್ಸರ್‌ ರೋಗ, ಕಿಡ್ನಿ ತೊಂದರೆಯಿಂದ ಬಳಲುತ್ತಿರುವ ರೋಗಿಗಳಿಗೆ ಸಹಾಯ ಧನ ನೀಡುತ್ತಿದ್ದೇನೆ ಎಂದು ತಿಳಿಸಿದರು.

ಕೆಎಂಸಿ ಆಸ್ಪತ್ರೆ ಮಕ್ಕಳ ಕ್ಯಾನ್ಸರ್‌ ತಜ್ಞ ಡಾ| ಹರ್ಷ ಪ್ರಸಾದ್‌ ಮಾತನಾಡಿ, ಇದೊಂದು ಮಹತ್ವದ ದಿನವಾಗಿದೆ. ಡಾ| ಶಂಕರ್‌ ಅವರು ಎಲ್ಲರಿಗೂ ಸ್ಫೂರ್ತಿ. ಕಠಿನ ಪರಿಶ್ರಮದಿಂದ ಈ ಮಟ್ಟದ ಸಾಧನೆ ಮಾಡಿದ್ದಾರೆ. ಅಶಕ್ತರಿಗೆ ಸಹಾಯ ಮಾಡುವಂತಹ ಗುಣವನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕು ಎಂದರು.

ಡಾ| ಜಿ. ಶಂಕರ್‌ ಅವರನ್ನು ಕೆ.ಎಂ.ಸಿ. ಆಸ್ಪತ್ರೆಯ ವತಿಯಿಂದ ಸಮ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಅತ್ತಾವರದ ಕೆ.ಎಂ.ಸಿ. ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ಜಾನ್‌ ರಾಮಪುರಂ, ಜ್ಯೋತಿ ಬಳಿಯ ಕೆ.ಎಂ.ಸಿ. ಆಸ್ಪತ್ರೆಯ ಪ್ರಾದೇಶಿಕ ವೈದ್ಯಕೀಯ ಸೇವೆಯ ಪ್ರಮುಖರಾದ ಡಾ| ಆನಂದ ವೇಣುಗೋಪಾಲ್‌, ಕೆ.ಎಂ.ಸಿ. ಆಸ್ಪತ್ರೆ ಅತ್ತಾವರದ ಉಪ ವೈದ್ಯಕೀಯ ಅಧೀಕ್ಷಕ ಡಾ| ದೀಪಕ್‌ ಮಡಿ, ಡಾ| ಜಿ. ಶಂಕರ್‌ ಅವರ ಅಳಿಯ ನವೀನ್‌ ಉಪಸ್ಥಿತರಿದ್ದರು. ಹರ್ಷಪ್ರಸಾದ್‌ ಸ್ವಾಗತಿಸಿ, ಉದಯಶಂಕರ್‌ ನಿರೂಪಿಸಿ, ವಂದಿಸಿದರು.

ಶಂಕರ್‌ ಫ್ಯಾಮಿಲಿ ಟ್ರಸ್ಟ್‌ನಿಂದ ಸಾಂತ್ವನದ ಕೆಲಸ
ಫಾದರ್‌ ಮುಲ್ಲರ್‌ ಸಂಸ್ಥೆಯಲ್ಲಿ ನಡೆದ ಸಮಾರಂಭದಲ್ಲಿ ಸಂಸ್ಥೆಯ ನಿರ್ದೇಶಕ ಫಾ| ರಿಚರ್ಡ್‌ ಕುವೆಲ್ಲೋ ಮಾತನಾಡಿ, ರೋಗ ಬಾಧಿಸುತ್ತಿದ್ದಂತೆ ರೋಗಿಗಳ ಮೇಲೆ ದೈಹಿಕವಾಗಿ ಹಾಗೂ ಮಾನಸಿಕವಾಗಿ ಒತ್ತಡ ಬೀಳಲು ಆರಂಭವಾಗುತ್ತದೆ. ಈ ಸಂದರ್ಭದಲ್ಲಿ ಅವರ ಬಗ್ಗೆ ಕಾಳಜಿ ವಹಿಸುವುದು, ಸಾಂತ್ವನ ನೀಡುವುದು ಬಹಳ ಮುಖ್ಯ. ಶಂಕರ್‌ ಫ್ಯಾಮಿಲಿ ಟ್ರಸ್ಟ್‌ ಈ ಕೆಲಸವನ್ನು ಮಾಡುತ್ತಿದೆ ಎಂದರು. ಆಡಳಿತಾಧಿಕಾರಿ ರುಡಾಲ್ಫ್ ಡೇಸಾ, ಮುಖ್ಯ ವೈದ್ಯಾಧಿಕಾರಿ ಉದಯ್‌ ಕುಮಾರ್‌, ಚೀಫ್‌ ನರ್ಸಿಂಗ್‌ ಆಫೀಸರ್‌ ಸಿ. ಜನೆಟ್‌ ಉಪಸ್ಥಿತರಿದ್ದರು. ಜೋನ್‌ ವಂದಿಸಿದರು.

ಟಾಪ್ ನ್ಯೂಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqwewq

Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.