10ನೇ ಸಿಬಿಎಸ್‌ಇ ಫಲಿತಾಂಶ ವಿಳಂಬ: ಪಿಯು ಸೇರ್ಪಡೆಗೆ ಇಕ್ಕಟ್ಟು !


Team Udayavani, Jun 16, 2022, 7:20 AM IST

10ನೇ ಸಿಬಿಎಸ್‌ಇ ಫಲಿತಾಂಶ ವಿಳಂಬ: ಪಿಯು ಸೇರ್ಪಡೆಗೆ ಇಕ್ಕಟ್ಟು !

ಮಂಗಳೂರು: ಸೆಂಟ್ರಲ್‌ ಬೋರ್ಡ್‌ ಆಫ್‌ ಸೆಕೆಂಡರಿ ಎಜುಕೇಶನ್‌ (ಸಿಬಿಎಸ್‌ಇ) 10ನೇ ತರಗತಿ ಫಲಿತಾಂಶ ಇನ್ನೂ ಪ್ರಕಟವಾಗದ ಕಾರಣ ಆ ವಿದ್ಯಾರ್ಥಿಗಳ ಪ್ರಥಮ ಪಿಯುಸಿ ದಾಖಲಾತಿಗೆ ಕೆಲವೆಡೆ ತೊಡಕಾಗಿದೆ.

ಈ ಬಾರಿ ಎರಡು ಹಂತಗಳಲ್ಲಿ ಪರೀಕ್ಷೆ ನಡೆಸಲಾಗಿದೆ. ಮೊದಲ ಅವಧಿಯ ಪರೀಕ್ಷೆ ಅಕ್ಟೋಬರ್‌ನಲ್ಲೇ ನಡೆದಿದೆ. ಎರಡನೇ ಅವಧಿ ಪರೀಕ್ಷೆ ಎ. 26ಕ್ಕೆ ಆರಂಭವಾಗಿ ಜೂ. 13ರಂದು ಕೊನೆಗೊಂಡಿತ್ತು. ಈ ಹಿಂದೆ ಮೇ ಕೊನೆಗೆ ಫಲಿತಾಂಶ ಬರುತ್ತಿದ್ದರೆ ಈ ಬಾರಿ ಪರೀಕ್ಷೆ-ಮೌಲ್ಯಮಾಪನವೇ ತಡವಾಗಿದೆ. ಆದರೆ ಎಸೆಸೆಲ್ಸಿ ಫಲಿತಾಂಶ ಈಗಾಗಲೇ ಪ್ರಕಟವಾಗಿ ಬಹುತೇಕ ವಿದ್ಯಾರ್ಥಿಗಳು ತಮ್ಮ ನಿರೀಕ್ಷೆಯ ಕಾಲೇಜು/ವಿಭಾಗ ಆಯ್ಕೆ ಮಾಡಿರುವ ಕಾರಣ “ಕಾಲೇಜು ಭರ್ತಿ’ಯಾಗಿದೆ ಎಂಬ ಮಾಹಿತಿ ಕೆಲವೆಡೆಯಿಂದ ಕೇಳಿಬರುತ್ತಿದೆ.

ಗ್ರಾಮಾಂತರ ಭಾಗದ ಕೆಲವರು ಸಿಬಿಎಸ್‌ಇ ಫಲಿತಾಂಶಕ್ಕಾಗಿಯೇ ಕಾಯುತ್ತಿದ್ದು ಫಲಿತಾಂಶ ಬಂದ ಮೇಲೆಯೇ ಮುಂದಿನ ತೀರ್ಮಾನ ಎನ್ನುತ್ತಿದ್ದಾರೆ. ಆದರೆ ಈಗಾಗಲೇ ಪ್ರಥಮ ಪಿಯು ಸೀಟು ಭರ್ತಿಯಾದ ಕಾರಣದಿಂದ ಕೆಲವು ವಿದ್ಯಾರ್ಥಿಗಳಿಗೆ ನಿರೀಕ್ಷಿತ ಕಾಲೇಜಿನಲ್ಲಿ ದಾಖಲಾತಿ ಸಿಗುವುದು ಈ ಬಾರಿ ಕಷ್ಟ.

ವಿದ್ಯಾರ್ಥಿನಿಯೋರ್ವಳು “ಉದಯವಾಣಿ’ ಜತೆಗೆ ಮಾತನಾಡಿ, “ಫಲಿತಾಂಶ ಬಂದಿಲ್ಲ. ಆದರೂ ಕಳೆದ ವಾರ ನನ್ನ ಆಸಕ್ತಿಯ ಕಾಲೇಜಿನಲ್ಲಿ ದಾಖಲಾತಿ ಮಾಡಲು ತೆರಳಿದಾಗ ಪ್ರಥಮ ಪಿಯು ಭರ್ತಿಯಾಗಿದೆ ಎಂಬ ಉತ್ತರ ಬಂದಿದೆ. ಹೀಗಾಗಿ ಫಲಿತಾಂಶ ಇನ್ನೂ ತಡವಾದರೆ ಕೆಲವು ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ’ ಎನ್ನುತ್ತಾರೆ.

ನಿರೀಕ್ಷೆಯ ಸೀಟು ಸಿಗದು!
ದ.ಕ. ಪದವಿ ಪೂರ್ವ ಕಾಲೇಜು ಸಂಘದ ಅಧ್ಯಕ್ಷ ಕೆ.ಎನ್‌. ಗಂಗಾಧರ ಆಳ್ವ ಅವರ ಪ್ರಕಾರ, “ಪ್ರಥಮ ಪಿಯು ದಾಖಲಾತಿ ಈಗಾಗಲೇ ಬಹುತೇಕ ನಡೆದಿದೆ. ವಿಜ್ಞಾನ, ವಾಣಿಜ್ಯ ವಿಭಾಗ ಬಹುತೇಕ ಭರ್ತಿಯಾಗಿದೆ. ಆದರೆ ಸಿಬಿಎಸ್‌ಇ ಫಲಿತಾಂಶ ತಡವಾದ ಕಾರಣ ಆ ವಿದ್ಯಾರ್ಥಿಗಳ ದಾಖಲಾತಿಗೆ ಸಮಸ್ಯೆ ಆಗಲಿದೆ. ಅವರ ಆಸಕ್ತಿಯ ವಿಭಾಗ ಸಿಗದಿರುವ ಸಾಧ್ಯತೆಯಿದೆ’ ಎನ್ನುತ್ತಾರೆ.

ಆತಂಕ ಬೇಡ!
ಸಿಬಿಎಸ್‌ಇ ಆಡಳಿತ ಮಂಡಳಿಯ ಪ್ರಮುಖರೊಬ್ಬರ ಪ್ರಕಾರ, “ಸಿಬಿಎಸ್‌ಸಿ 10ನೇ ತರಗತಿ ಫಲಿತಾಂಶ ತಡವಾಗಿದೆ ಎಂದು ಆತಂಕ ಪಡಬೇಕಿಲ್ಲ. ಯಾಕೆಂದರೆ ಬಹುತೇಕ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯದೆ ಯಾವುದಾದರೂ ಒಂದು ಕಾಲೇಜಿನಲ್ಲಿ ದಾಖಲಾತಿ ಆಗಿದ್ದಾರೆ. ಜತೆಗೆ ಬಹುತೇಕ ಕಾಲೇಜುಗಳಲ್ಲಿ ಹಲವು ಸೀಟುಗಳು ಇನ್ನೂ ಇವೆ’ ಎನ್ನುತ್ತಾರೆ.

ಫಲಿತಾಂಶ ಇಲ್ಲದಿದ್ದರೂ ಕೆಲವೆಡೆ ದಾಖಲಾತಿ!
ಸಿಬಿಎಸ್‌ಇ ಫಲಿತಾಂಶ ಬಾರದಿದ್ದರೂ ಹಲವು ಪದವಿ ಪೂರ್ವ ಕಾಲೇಜುಗಳಲ್ಲಿ ಸಿಬಿಎಸ್‌ಇ ಹಿಂದಿನ ಅಂಕದ ಆಧಾರದಲ್ಲಿ ವಿದ್ಯಾರ್ಥಿಗಳ ದಾಖಲಾತಿ ಮಾಡಿಕೊಳ್ಳಲಾಗಿದೆ. ಪಾಠ ಚಟುವಟಿಕೆ ಕೂಡ ಕೆಲವು ಕಡೆ ಆರಂಭವಾಗಿದೆ. ದಕ್ಷಿಣ ಕನ್ನಡ, ಉಡುಪಿ ಸಹಿತ ಎರಡೂ ಜಿಲ್ಲೆಗಳಲ್ಲಿ ಸುಮಾರು 60 ಸಿಬಿಎಸ್‌ಇ ಶಾಲೆಗಳಿವೆ.

ಸಿಬಿಎಸ್‌ಇ ಫಲಿತಾಂಶ ಪ್ರಕಟದ ದಿನಾಂಕದ ಬಗ್ಗೆ ಮಾಹಿತಿ ಇಲ್ಲ. ಆದರೆ ಯಾವುದೇ ವಿದ್ಯಾರ್ಥಿಗೆ ಪ್ರಥಮ ಪಿಯು ದಾಖಲಾತಿಗೆ ಯಾವುದೇ ಸಮಸ್ಯೆ ಆಗದಂತೆ ನಾವು ಮುನ್ನೆಚ್ಚರಿಕೆ ವಹಿಸಲಿದ್ದೇವೆ. ದಾಖಲಾತಿ ಅವಧಿಯನ್ನು ಕೂಡ ವಿಸ್ತರಣೆ ಮಾಡುವ ಕ್ರಮ ಕೈಗೊಂಡಿದ್ದೇವೆ.
– ಬಿ.ಸಿ. ನಾಗೇಶ್‌, ಶಿಕ್ಷಣ ಸಚಿವರು

 

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.