110 ಪವನ್‌ ಚಿನ್ನಾಭರಣ, 70,000 ರೂ. ನಗದು, ರ್ಯಾಡೋ ವಾಚ್‌ ಕಳವು


Team Udayavani, Aug 19, 2017, 10:07 AM IST

19-MLR-3.jpg

ಮಂಜೇಶ್ವರ: ಕುಂಜತ್ತೂರುಪದವಿನಲ್ಲಿ ಗುರುವಾರ ತಡರಾತ್ರಿ  ಮನೆಯೊಂದಕ್ಕೆ ನುಗ್ಗಿದ ಕಳ್ಳರು 110 ಪವನ್‌ ಚಿನ್ನಾಭರಣ, 70 ಸಾವಿರ ರೂ. ನಗದು ಮತ್ತು ರ್ಯಾಡೋ ವಾಚ್‌ ಕಳವು ಮಾಡಿದ್ದಾರೆ.

ಕುಂಜತ್ತೂರುಪದವು ನಿವಾಸಿ ಹೊಸಂಗಡಿಯಲ್ಲಿ ಹಾಲಿನ ವ್ಯಾಪಾರಿಯಾಗಿರುವ ಅಬ್ದುಲ್‌ ಮುನೀರ್‌ ಅವರ ಮನೆಯಿಂದ  ಮನೆಯ ಅಡುಗೆ ಕೋಣೆ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಬೆಡ್‌ ರೂಂ ಪ್ರವೇಶಿಸಿ ಕಪಾಟಿನಲ್ಲಿದ್ದ ಚಿನ್ನಾಭರಣ, ವಾಚ್‌ ಹಾಗು ಹಣವನ್ನು ದೋಚಿದ್ದಾರೆ. 
ಅವುಗಳನ್ನು ಪೆಟ್ಟಿಗೆಯೊಂದರಲ್ಲಿ ಇರಿಸಲಾಗಿತ್ತು. ಈ ಪೆಟ್ಟಿಗೆಯನ್ನೇ ಕೊಂಡೊಯ್ದಿದ್ದಾರೆ.

ಅಬ್ದುಲ್‌ ಮುನೀರ್‌, ಪತ್ನಿ ಹಸೀನಾ ಹಾಗೂ ಮೂವರು ಮಕ್ಕಳು ಒಂದೇ ಕೊಠಡಿಯಲ್ಲಿ ನಿದ್ದೆ ಮಾಡಿದ್ದರು. ತಡರಾತ್ರಿ 2 ಗಂಟೆಗೆ ಶಬ್ದ ಕೇಳಿ ಬಂದ ಹಿನ್ನೆಲೆಯಲ್ಲಿ ಅಬ್ದುಲ್‌ ಮುನೀರ್‌ ಹೊರಗೆ ಬೆಳಕು ಹಾಯಿಸಿ ಬಳಿಕ ಮತ್ತೆ ನಿದ್ದೆ ಮಾಡಿದ್ದರು. 
ಕಪಾಟು ತೆರೆಯುವ ಶಬ್ದ ಕೇಳಿ ಹಸೀನಾ ಎಚ್ಚರ ಗೊಂಡಿದ್ದರು. ಕೂಡಲೇ ಪತಿಯನ್ನು ಎಬ್ಬಿಸುತ್ತಿದ್ದಂತೆ ಕಪಾಟಿನೊಳಗಿದ್ದ ನಗ -ನಗದು ಇದ್ದ ಪೆಟ್ಟಿಗೆಯನ್ನು ತೆಗೆದು ಕಳ್ಳರು ಪರಾರಿಯಾಗಿದ್ದಾರೆ. ಕೂಡಲೇ ಕಳ್ಳರನ್ನು ಹಿಂಬಾಲಿಸಿದಾಗ ಕಂಪೌಂಡ್‌ ಹಾರಿದ ಕಳ್ಳರು ಸಮೀಪದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ ಪರಾರಿಯಾಗಿದ್ದಾರೆ.

ಕಪಾಟಿನೊಳಗೆ ಪೆಟ್ಟಿಗೆಯಲ್ಲಿ ಹಸೀನ ಅವರ 15 ಹಾಗು 10 ಪವನಿನ ಎರಡು ಸರ, ಒಂದು ಪವನಿನ 9 ಬಳೆ, 6 ಪವನ್‌ನ ಒಂದು ಬಳೆ, 11 ಪವನ್‌ನ ಅಲಂಕಾರ ಹೂ, ಹಸೀನಾ ಅವರ ಸಹೋದರಿ ಬಂದ್ಯೋಡಿನ ಮಿಸ್ರಿಯಾ ಅವರ 15 ಪವನ್‌ನ ಸೊಂಟದ ಪಟ್ಟಿ, 5 ಪವನ್‌ನ ತೋಳ್ಪಟ್ಟಿ, ಎರಡೂವರೆ ಪವನಿನ ಸರ, ಇನ್ನೋರ್ವ ಸಹೋದರಿ ನುಸ್ರ ಅವರ ಒಂದು ಪವನಿನ 6 ಬಳೆ, 4 ಪವನಿನ ಬೆಂಡೋಲೆ, ಹಸೀನರ ತಾಯಿ ಆಮಿನ ಅವರ 5 ಪವನ್‌ನ ಆಭರಣ ಹಾಗು ಮಕ್ಕಳಾಭರಣ ಸಹಿತ 110 ಪವನ್‌ ಚಿನ್ನಾಭರಣ ಇರಿಸಲಾಗಿತ್ತು. 

ಮನೆಯ ಆವರಣ ಗೋಡೆಯ ಒಂದು ಭಾಗದಲ್ಲಿ ಕೆಂಪು ಕಲ್ಲುಗಳನ್ನು ತೆಗೆದು ಆ ಮೂಲಕ ಕಳ್ಳರು ಒಳಗೆ ಪ್ರವೇಶಿಸಿದ್ದಾರೆ. ಬಳಿಕ ಬಾಗಿಲಿನ ಬೀಗ ಮುರಿದು ಒಳನುಗ್ಗಿ ಕಪಾಟಿನ ಮೇಲಿರಿಸಿದ್ದ ಕೀಲಿ ಕೈ ಬಳಸಿ ಕಳವು ಮಾಡಲಾಗಿದೆ. 

ಎರಡಂತಸ್ತಿನ ಮನೆ ಚಾವಡಿಯಲ್ಲಿ ಮನೆ ಮಂದಿ ಬಾಗಿಲು ಶೀಘ್ರ ತೆರೆಯದಿರಲು ಬಾಗಿಲಿಗೆ ಅಡ್ಡವಾಗಿ ಕಳ್ಳರು ನೈಲಾನ್‌ ಹಗ್ಗ ಕಟ್ಟಿದ್ದರು.

ಮಂಜೇಶ್ವರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ  ಪರಿಶೀಲಿಸಿದರು. ಶ್ವಾನ ದಳ ಮತ್ತು ಬೆರಳ ಗುರುತು ತಜ್ಞರು ತನಿಖೆ ನಡೆಸಿದ್ದಾರೆ.

ಟಾಪ್ ನ್ಯೂಸ್

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.