ರೇಷನ್ ಕಾರ್ಡ್ಗಾಗಿ ಕಾಯುತ್ತಿದ್ದಾರೆ ಕರಾವಳಿಯ 12 ಸಾವಿರ ಮಂದಿ!
Team Udayavani, Nov 3, 2022, 7:00 AM IST
ಮಂಗಳೂರು: ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿ ತಿಂಗಳು ಕೆಲವಾದರೂ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಸುಮಾರು 12 ಸಾವಿರಕ್ಕೂ ಹೆಚ್ಚು ಮಂದಿಗೆ ಹೊಸ ರೇಷನ್ ಕಾರ್ಡ್ ಲಭ್ಯವಾಗಿಲ್ಲ!
ದ.ಕ.ದಲ್ಲಿ ಅರ್ಜಿ ಸಲ್ಲಿಸಿ ದವರ ಪೈಕಿ 5,978 ಮಂದಿ ಹಾಗೂ ಉಡುಪಿ ಯಲ್ಲಿ 6,612 ಮಂದಿ ಸಹಿತ ಒಟ್ಟು 12,590 ಮಂದಿ ರೇಷನ್ ಕಾರ್ಡ್ಗಾಗಿ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ.
ಕೆಲವರ ಅರ್ಜಿಗಳನ್ನು ಕಳೆದ ಡಿಸೆಂಬರ್ನಲ್ಲಿ ಸರಕಾರ ಅಂಗೀಕರಿಸಿ ಬಳಿಕ ಒಂದೆರಡು ತಿಂಗಳಲ್ಲಿ ಅವರಿಗೆ ಕಾರ್ಡ್ ವಿತರಿಸುವ ಕಾರ್ಯವನ್ನು ಆಹಾರ ಇಲಾಖೆ ನಡೆಸಿದೆ.
ಆ ಬಳಿಕ ಹೊಸ ಕಾರ್ಡ್ಗಾಗಿ ಅರ್ಜಿ ಪಡೆಯಲಾಗುತ್ತಿದೆಯೇ ಹೊರತು ಸರಬರಾಜು ಮಾತ್ರ ಆಗಿಲ್ಲ. ಯಾವಾಗ ಎಂಬುದಕ್ಕೆ ಉತ್ತರವೂ ಇಲ್ಲ!
ಆಸ್ಪತ್ರೆಯಿಂದ ಸರಕಾರಿ ಸೌಲಭ್ಯ ಪಡೆಯಲು, ಆಧಾರ್/ಆರೋಗ್ಯ ಭಾರತ್ ಕಾರ್ಡ್ ಮಾಡಿಸಲು, ಆದಾಯ ಮತ್ತು ಜಾತಿ ಪ್ರಮಾಣ ಪತ್ರ ಪಡೆಯಲು ಪಡಿತರ ಚೀಟಿ ಮುಖ್ಯ. ಆದರೆ ಸಕಾಲದಲ್ಲಿ ಸಿಗದ ಕಾರಣ ಹಲವು ಸರಕಾರಿ ಸವಲತ್ತುಗಳನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಅಕ್ರಮ ಬಿಪಿಎಲ್ ಪತ್ತೆ ಹಚ್ಚಲು ಆಹಾರ ಇಲಾಖೆ ಮುಂದಾಗಿರುವ ಕಾರಣ ಹೊಸ ಕಾರ್ಡ್ ನೀಡುವಲ್ಲಿ ವಿಳಂಬ ಮಾಡಲಾಗುತ್ತಿದೆ ಎಂಬ ಮಾಹಿತಿಯಿದೆ.
ಈ ಮಧ್ಯೆ ತುರ್ತು ಆರೋಗ್ಯ ಸಮಸ್ಯೆ ಇರುವವರಿಗೆ ತುರ್ತಾಗಿ ಕಾರ್ಡ್ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಉಳಿದಂತೆ ಅರ್ಜಿ ಹಾಕಿ ದವರು ಕಾರ್ಡ್ಗಾಗಿ ಕಾಯುತ್ತಲೇ ಇದ್ದಾರೆ!
ಸರ್ವರ್ ಕಾಟ!
ಆಹಾರ ಇಲಾಖೆಯ ವೆಬ್ಸೈಟ್ಗೆ “ಸರ್ವರ್’ ಸಮಸ್ಯೆ ಇನ್ನೂ ಪರಿಹಾರ ಕಾಣುವ ಹಂತಕ್ಕೆ ಬಂದಿಲ್ಲ. ಇದು ರಾಜ್ಯ ಮಟ್ಟದ ಸಮಸ್ಯೆಯಾದರೂ ವಿವಿಧ ಜಿಲ್ಲೆಯ ಜನರು ಸಮಸ್ಯೆ ಎದುರಿಸುತ್ತಿದ್ದಾರೆ. ಆಹಾರ ಇಲಾಖೆಯ ವೆಬ್ಸೈಟ್ನಲ್ಲಿ ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು ಎಂಬ ಸೂಚನೆಯಿದ್ದರೂ ಕೆಲವೊಮ್ಮೆ ಈ ವೆಬ್ಸೈಟ್ ಹಠಾತ್ ಸ್ಥಗಿತಗೊಳ್ಳುತ್ತದೆ. ಇದರಿಂದ ಹೊಸ ಪಡಿತರ ಚೀಟಿಗೆ ಅರ್ಜಿ ಹಾಕಲು, ತಿದ್ದುಪಡಿ ಮಾಡಲು, ಅಳಿಸಿ ಹಾಕಲು ಜನಸಾಮಾನ್ಯರಿಗೆ ಕಷ್ಟವಾಗುತ್ತಿದೆ ಎಂಬ ದೂರು ಕೇಳಿಬಂದಿದೆ.
ಎಲ್ಲೆಲ್ಲಿ ಬಾಕಿ?
ಬೆಳ್ತಂಗಡಿ 940
ಬಂಟ್ವಾಳ 1,333
ಮಂಗಳೂರು 2,763
ಪುತ್ತೂರು 763
ಸುಳ್ಯ 179
ಒಟ್ಟು 5,978
ಕಾರ್ಕಳ 1,028
ಕುಂದಾಪುರ 1,073
ಉಡುಪಿ 1,411
ಕಾಪು 789
ಬ್ರಹ್ಮಾವರ 1,001
ಬೈಂದೂರು 1,041
ಹೆಬ್ರಿ 269
ಒಟ್ಟು 6,612
ಹೊಸ ಅರ್ಜಿಗೆ ಅವಕಾಶ
ಹೊಸ ರೇಷನ್ ಕಾರ್ಡ್ಗೆ ಅರ್ಜಿ ಹಾಕಲು ಅವಕಾಶವಿದೆ. ತುರ್ತು ಆರೋಗ್ಯ ಸೇವೆಗೆ ಅಗತ್ಯವಿದ್ದರೆ ಕೇಂದ್ರ ಕಚೇರಿಯ ಅನುಮತಿ ಪಡೆದು ಕಾರ್ಡ್ ಸರಬರಾಜು ಮಾಡಲು ಕ್ರಮ ಕೈಗೊಳ್ಳ ಲಾಗು ತ್ತಿದೆ. ಉಳಿದಂತೆ ಬಾಕಿ ಇರುವ ಅರ್ಜಿ ಗಳ ಪರಿಶೀಲನೆ ನಡೆಯುತ್ತಿದೆ. ಸರಕಾರದ ಅನುಮತಿ ದೊರೆತ ಬಳಿಕ ಕಾರ್ಡ್ ವಿತರಿಸಲಾಗುವುದು.
– ಮಾಣಿಕ್ಯ ಹಾಗೂ ಮೊಹಮ್ಮದ್ ಇಸಾಕ್
ಉಪ ನಿರ್ದೇಶಕರು, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ, ದ.ಕ. ಹಾಗೂ ಉಡುಪಿ
-ದಿನೇಶ್ ಇರಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
MUST WATCH
ಹೊಸ ಸೇರ್ಪಡೆ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!