ಸಿಇಟಿ ಪರೀಕ್ಷೆಗೆ ಜಿಲ್ಲೆಯಲ್ಲಿ 13,290 ವಿದ್ಯಾರ್ಥಿಗಳು
ಸಿಇಟಿ ಪರೀಕ್ಷೆ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆ
Team Udayavani, Apr 26, 2019, 6:07 AM IST
ಮಹಾನಗರ: ಜಿಲ್ಲೆಯಲ್ಲಿ ಸಿಇಟಿ ಪರೀಕ್ಷೆಯನ್ನು ಎ. 29, 30ರಂದು ಒಟ್ಟು 13,290 ವಿದ್ಯಾರ್ಥಿಗಳು ಬರೆ ಯಲಿದ್ದು, ಪರೀಕ್ಷೆಯನ್ನು ಸುಸೂತ್ರವಾಗಿ ನೆರವೇರಿಸಲು ಅಪರ ಜಿಲ್ಲಾಧಿಕಾರಿ ವೆಂಕಟಾಚಲಪತಿ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಗುರುವಾರ ನಡೆಯಿತು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ತಹ ಶೀಲ್ದಾರರು ಮತ್ತು ಪರೀಕ್ಷೆ ನಡೆಯುವ 26 ಕಾಲೇಜುಗಳ ಪ್ರಾಂಶುಪಾಲರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಪರೀಕ್ಷೆಯ ವೇಳೆ ಯಾವುದೇ ರೀತಿಯ ತೊಂದರೆಗಳಾಗದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಬೆಸೆಂಟ್ ಹೊರತುಪಡಿಸಿ ಕಳೆದ ಸಾಲಿನಲ್ಲಿ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಿರುವುದರಿಂದ ಪ್ರಸಕ್ತ ಸಾಲಿನಲ್ಲೂ ಯಶಸ್ವಿಯಾಗಿ ಕರ್ತವ್ಯ ನಿರ್ವಹಿಸಿ ಎಂದು ಅಪರ ಜಿಲ್ಲಾಧಿಕಾರಿಗಳು ಶಿಕ್ಷಣ ಸಂಸ್ಥೆಯ ಮುಖ್ಯಸ್ಥರುಗಳಿಗೆ ಸೂಚನೆ ನೀಡಿದರು.
ಮೂಲಸೌಕರ್ಯ ಒದಗಿಸಿ
ಜಿಲ್ಲೆಯಲ್ಲಿ ಸಿಇಟಿ ಪರೀಕ್ಷೆಗೆ ಸಜ್ಜಾಗುತ್ತಿರುವ ಕಾಲೇಜು ಗಳಲ್ಲಿಮೂಲಸೌಕರ್ಯ ಒದಗಿಸಿ. ಪರೀಕ್ಷಾ ಹಾಲ್ಗಳಲ್ಲಿ ಗೋಡೆ ಗಡಿಯಾರ ಕಡ್ಡಾಯವಾಗಿರಬೇಕೆಂದು ಕೇಂದ್ರಗಳ ಮುಖ್ಯಸ್ಥರಿಗೆ ಸೂಚಿಸಿದರು.ಇಲಾಖೆಗೆ ಜಿಲ್ಲಾಡಳಿತ ಎಲ್ಲ ಸಹಕಾರವನ್ನು ನೀಡಲಿದ್ದು, ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲು ಸೂಕ್ತ ವ್ಯವಸ್ಥೆಯನ್ನು ಮಾಡಲಾಗಿರುವುದನ್ನು ಖಾತರಿಪಡಿಸಿಕೊಳ್ಳಿ, ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನೀಡಲಾಗಿರುವ ಮಾರ್ಗಸೂಚಿ ಮತ್ತು ನಿರ್ದೇಶನಗಳಿಗನುಸಾರ ವ್ಯವಸ್ಥೆಗಳನ್ನು ಮಾಡಿ, ವಿದ್ಯಾರ್ಥಿಗಳ ಅನುಕೂಲವನ್ನು ಗಮನದಲ್ಲಿರಿಸಿ ಎಂದು ಹೇಳಿದರು.
26 ಪರೀಕ್ಷೆ ಕೇಂದ್ರಗಳು
ಪಿಯು ವಿಭಾಗದ ಉಪನಿರ್ದೇಶಕ ವಾಸುದೇವ ಕಾಮತ್ ಮಾಹಿತಿ ನೀಡಿ, ಮಂಗಳೂರು ತಾಲೂಕಿನಲ್ಲಿ 13, ಮೂಡುಬಿದಿರೆಯಲ್ಲಿ 8, ಬೆಳ್ತಂಗಡಿಯಲ್ಲಿ 2, ಪುತ್ತೂರಿನ 3 ಕೇಂದ್ರಗಳು ಸೇರಿದಂತ ಒಟ್ಟು 26 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದರು.ಜಿಲ್ಲಾ ಖಜಾನಾಧಿಕಾರಿ ಎಂ. ಮಾಧವ ಹೆಗ್ಡೆ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ